AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಟ ದಿಲೀಪ್ ನಿರ್ದೋಷಿ; ಕೋರ್ಟ್ ತೀರ್ಪು

ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಲಾಗಿದೆ. ಆದರೆ ಇದೇ ಪ್ರಕರಣದ ಪ್ರಮುಖ 6 ಆರೋಪಿಗಳು ತಪ್ಪು ಮಾಡಿರುವುದು ಸಾಬೀತಾಗಿದೆ. ಡಿ.12ಕ್ಕೆ ಶಿಕ್ಷೆ ಪ್ರಕಟ ಆಗಲಿದೆ. 2017ರಿಂದ ಇಲ್ಲಿಯ ತನಕ ಒಟ್ಟು 261 ಸಾಕ್ಷಿಗಳ ವಿಚಾರಣೆ ನಡೆಸಿದ ಬಳಿಕ ಕೋರ್ಟ್ ಇಂದು (ಡಿ.8) ತೀರ್ಪು ನೀಡಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: ಮಲಯಾಳಂ ನಟ ದಿಲೀಪ್ ನಿರ್ದೋಷಿ; ಕೋರ್ಟ್ ತೀರ್ಪು
Malayalam Actor Dileep
ಮದನ್​ ಕುಮಾರ್​
|

Updated on: Dec 08, 2025 | 4:18 PM

Share

ಖ್ಯಾತ ನಟಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ (Malayalam Actor Dileep) ನಿರ್ದೋಷಿ ಎಂದು ಕೇರಳ ಕೋರ್ಟ್ ತೀರ್ಪು ನೀಡಿದೆ. 2017ರಲ್ಲಿ ಈ ಪ್ರಕರಣ ನಡೆದಿತ್ತು. ಈ ಕೇಸ್​​ನಲ್ಲಿ ದಿಲೀಪ್ ಅವರು 8ನೇ ಆರೋಪಿ ಆಗಿದ್ದರು. ಅಪರಾಧ ಕೃತ್ಯಕ್ಕೆ ಸಂಚು ರೂಪಿಸಿದ್ದು ಹಾಗೂ ಸಾಕ್ಷಿ ನಾಶದ ಆರೋಪ ಅವರ ಮೇಲಿತ್ತು. ಆದರೆ ಈ ಪ್ರಕರಣದಲ್ಲಿ ದಿಲೀಪ್ (Dileep) ಅವರ ಪಾತ್ರ ಇಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ. ಇದರಿಂದಾಗಿ ದಿಲೀಪ್ ಅವರು ನಿಟ್ಟುಸಿರು ಬಿಟ್ಟಿದ್ದಾರೆ. 8 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ ಕೋರ್ಟ್ ಈ ತೀರ್ಪು ನೀಡಿದೆ. ದಿಲೀಪ್ ಅವರನ್ನು ಖುಲಾಸೆಗೊಳಿಸಿದೆ.

ಇದೇ ಪ್ರಕರಣದಲ್ಲಿ 6 ಆರೋಪಿಗಳು ಅಪರಾಧ ಎಸಗಿರುವುದು ಸಾಬೀತಾಗಿದೆ. ಸಾಮೂಹಿಕ ಅತ್ಯಾಚಾರ, ಅಪಹರಣ, ಅಪರಾಧ ಕೃತ್ಯದ ಸಂಚು, ವಿವಸ್ತ್ರಗೊಳಿಸುವ ಯತ್ನ ಸೇರಿದಂತೆ ಹಲವು ಕೃತ್ಯಗಳಲ್ಲಿ 6 ಜನರು ಅಪರಾಧಿಗಳು ಎಂದು ಕೋರ್ಟ್ ತೀರ್ಪು ನೀಡಿದೆ. ಈ 6 ಮಂದಿಗೆ ಡಿಸೆಂಬರ್ 12ರಂದು ಶಿಕ್ಷೆ ಪ್ರಕಟ ಆಗಲಿದೆ.

ತಮ್ಮ ಮೇಲಿನ ಈ ಪ್ರಕರಣ ಖುಲಾಸೆ ಆಗಿದ್ದಕ್ಕೆ ನಟ ದಿಲೀಪ್ ಕುಮಾರ್ ಅವರು ಧನ್ಯವಾದ ತಿಳಿಸಿದ್ದಾರೆ. ಮಾಧ್ಯಮಗಳಿಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಪ್ರಮುಖ ಆರೋಪಿ ಪಲ್ಸರ್ ಸುನಿ ಹಾಗೂ ಆತನ ಸಹಚರರ ಜೊತೆ ಪೊಲೀಸರು ಸೇರಿಕೊಂಡು ನನ್ನ ವಿರುದ್ಧ ಕಥೆ ಕಟ್ಟಿದ್ದರು. ಕೆಲವು ಮಾಧ್ಯಮದವರ ಜೊತೆ ಕೈ ಜೋಡಿಸಿ ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದರು. ಆದರೆ ನ್ಯಾಯಾಲಯದಲ್ಲಿ ಆ ಸುಳ್ಳು ಕಥೆ ನಿಲ್ಲಲಿಲ್ಲ. ನಿಜವಾಗಿ ಸಂಚು ನಡೆದಿದ್ದು ನನ್ನ ವಿರುದ್ಧ. ಈ 9 ವರ್ಷಗಳಲ್ಲಿ ನನ್ನ ಗೌರವ ಮತ್ತು ಜೀವನ ಹಾಳಾಗಿದೆ’ ಎಂದು ದಿಲೀಪ್ ಹೇಳಿದ್ದಾರೆ.

ಸೆಷನ್ಸ್ ಕೋರ್ಟ್ ನೀಡಿರುವ ಈ ತೀರ್ಪಿನ ವಿರುದ್ಧ ಮೇಲ್ಮವಿ ಸಲ್ಲಿಸಲು ಕೇರಳ ಸರ್ಕಾರ ನಿರ್ಧರಿಸಿದೆ. ಆ ಕುರಿತು ಕಾನೂನು ಸಚಿವ ಪಿ. ರಾಜೀವ್ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಜೊತೆ ಮಾತುಕತೆ ಮಾಡಿದ್ದಾರೆ ಎಂದು ಮಾಧ್ಯಮಗಳಲ್ಲಿ ವರದಿ ಆಗಿದೆ. ಮೇಲ್ಮವಿ ಸಲ್ಲಿಸಲು ಈಗಾಗಲೇ ಸಿದ್ಧತೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ಇನ್​​​ಸ್ಟಾದಲ್ಲಿ ಪರಿಚಯವಾದ ಗೆಳತಿ ಮೇಲೆ ಅತ್ಯಾಚಾರ; ಕಿರುತೆರೆ ನಟ ಆಶಿಶ್ ಕಪೂರ್ ಬಂಧನ

2017ರ ಫೆಬ್ರವರಿ 17ರಂದು ಚಲಿಸುವ ಕಾರಿನಲ್ಲಿ ಖ್ಯಾತ ನಟಿಗೆ ಲೈಂಗಿಕ ಕಿರುಕುಳ ನೀಡಲಾಗಿತ್ತು. ಸುಮಾರು 2 ಗಂಟೆಗಳ ಕಾಲ ಈ ಕೃತ್ಯ ಎಸಗಲಾಗಿತ್ತು. ಪೊಲೀಸರು 2017ರ ಏಪ್ರಿಲ್​​ನಲ್ಲಿ ಚಾರ್ಜ್​ಶೀಟ್ ಸಲ್ಲಿಸಿದರು. ಅದೇ ವರ್ಷ ಜುಲೈನಲ್ಲಿ ದಿಲೀಪ್ ಅವರನ್ನು ಬಂಧಿಸಲಾಯಿತು. ಬಳಿಕ ಅವರು ಜಾಮೀನು ಪಡೆದುಕೊಂಡರು. ಕಳೆದ 8 ವರ್ಷಗಳಲ್ಲಿ ಒಟ್ಟು 261 ಸಾಕ್ಷಿಗಳ ವಿಚಾರಣೆ ನಡೆಸಿದ ಬಳಿಕ ಕೋರ್ಟ್ ಇಂದು (ಡಿಸೆಂಬರ್ 8) ಈ ತೀರ್ಪು ನೀಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!