Nirmal Benny Death: ಹೃದಯಾಘಾತದಿಂದ ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ

ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿಅವರು ನಿಧನ ಹೊಂದಿದ್ದಾರೆ. ಇದು ಮಲಯಾಳಂ ಚಿತ್ರರಂಗಕ್ಕೆ ಸಖತ್ ಶಾಕಿಂಗ್ ಎನಿಸಿದೆ. ಅವರಿಗೆ ಕೇವಲ 37 ವರ್ಷ ವಯಸ್ಸಾಗಿತ್ತು. ಅವರು ಸಣ್ಣ ವಯಸ್ಸಿನಲ್ಲಿ ನಿಧನ ಹೊಂದಿದ್ದು ಕುಟುಂಬದವರಿಗೆ ಶಾಕಿಂಗ್ ಎನಿಸಿದೆ.

Nirmal Benny Death: ಹೃದಯಾಘಾತದಿಂದ ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ನಿಧನ
ನಿರ್ಮಲ್
Follow us
|

Updated on: Aug 23, 2024 | 2:30 PM

ಮಲಯಾಳಂ ಕಲಾವಿದ ನಿರ್ಮಲ್ ಬೆನ್ನಿ ಅವರು ಇಂದು (ಆಗಸ್ಟ್ 23) ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ಅವರು ನಿಧನ ಹೊಂದಿದ್ದಾರೆ. ಮುಂಜಾನೆ ಅವರಿಗೆ ಹೃದಯಾಘಾತ ಉಂಟಾಗಿದೆ ಎನ್ನಲಾಗಿದೆ. ಅವರ ನಿಧನಕ್ಕೆ ಅನೇಕರಿಗೆ ಸಂತಾಪ ಸೂಚಿಸಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಕೋರಿದ್ದಾರೆ. ಮಲಯಾಳಂನಲ್ಲಿ 12 ವರ್ಷಗಳಲ್ಲಿ ಅವರು ಐದು ಸಿನಿಮಾಗಳಲ್ಲಿ ನಟಿಸಿದ್ದಾರೆ.

2012ರಲ್ಲಿ ನಿರ್ಮಲ್ ಅವರು ಚಿತ್ರರಂಗಕ್ಕೆ ಕಾಲಿಟ್ಟರು. ಅವರ ನಟನೆಯ ಮೊದಲ ಸಿನಿಮಾ ‘ನವಗತರ್ಕ್ ಸ್ವಾಗತಂ’ ಅವರ ನಟನೆಯ ಮೊದಲ ಸಿನಿಮಾ. ನಿರ್ಮಲ್ ಅವರು ಲಿಜೋ ಜೋಸ್ ಪೆಲ್ಲಿಸೆರಿ ನಿರ್ದೇಶನದ ‘ಅಮೆನ್’ ಸಿನಿಮಾದಲ್ಲಿ ಕೊಚ್ಚನ್ ಹೆಸರಿನ ಪಾತ್ರ ಮಾಡಿದರು. ಈ ಸಿನಿಮಾದಲ್ಲಿ ಅವರು ಮಾಡಿದ ಪಾತ್ರ ಗಮನ ಸೆಳೆದಿದೆ. ಅವರು ಈವರೆಗೆ ಕೇವಲ ಐದು ಸಿನಿಮಾಗಳಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಮಲಯಾಳಂ ಚಿತ್ರರಂಗದ ಕರಾಳ ಮುಖ ತೆರೆದಿಟ್ಟ ಹೇಮಾ ಸಮಿತಿ ವರದಿ

ನಿರ್ಮಲ್ ಅವರು ಕಲಾವಿದನಾಗಿ ನಟಿಸಿದ್ದಕ್ಕಿಂತ ಹೆಚ್ಚು ಯೂಟ್ಯೂಬ್ ವಿಡಿಯೋಗಳ ಮೂಲಕ ಗಮನ ಸೆಳೆದಿದ್ದರು. ಸ್ಟೇಜ್ ಕಾರ್ಯಕ್ರಮಗಳನ್ನು ಅವರು ನೀಡಿದ್ದರು. ಅವರಿಗೆ ಕೇವಲ 37 ವರ್ಷ ವಯಸ್ಸಾಗಿತ್ತು. ನಿರ್ಮಾಪಕ ಸಂಜಯ್ ಪಡಿಯೂರ್ ಅವರು ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ‘ಅಮೆನ್ ಸಿನಿಮಾದಲ್ಲಿ ಕೊಚ್ಚನ್ ಹಾಗೂ ದೂರಂ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದ ನಿರ್ಮಲ್ ಅವರು ನಿಧನ ಹೊಂದಿದ್ದಾರೆ. ಅವರಿಗೆ ಹೃದಯಾಘಾತ ಆಯಿತು. ಗೆಳೆಯನೇ ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಕೋರಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಕೆಲವು ಅನುಮಾನವಿತ್ತು, ಕೇಳಿದ್ದೇನೆ: ದರ್ಶನ್ ಭೇಟಿ ಬಳಿಕ ಲಾಯರ್ ಮಾತು
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ಪ್ರಧಾನಿ ಮೋದಿಯನ್ನು ಮನಸಾರೆ ಹೊಗಳಿದ ಪ್ಯಾರಾ ಅಥ್ಲೀಟ್ಸ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ವಿಡಿಯೋ: ಕ್ಯಾಮೆರಾ ನೋಡಿ, ಅಸಹ್ಯವಾಗಿ ಸಂಜ್ಞೆ ಮಾಡಿದ ದರ್ಶನ್
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಐಫೋನ್ 15 ಮೇಲೆ ₹10,000 ದರ ಕಡಿತ ಘೋಷಿಸಿದ ಆ್ಯಪಲ್!
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಬಳ್ಳಾರಿ ಜೈಲಿನಲ್ಲಿ ಸೊರಗಿದ ದರ್ಶನ್; ತಾಯಿ ಬಾರದೇ ಇರುವುದಕ್ಕೆ ಬೇಸರ
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ ವಿಚಾರ: ಸಚಿವ ಜಮೀರ್ ಹೇಳಿದ್ದೇನು?
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಪ್ಯಾರಾಲಿಂಪಿಕ್ಸ್ ಸ್ಪರ್ಧಿಗಳನ್ನು ಭೇಟಿಯಾದ ಪ್ರಧಾನಿ ಮೋದಿ
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಹೊಸದಾಗಿ ಸೇರ್ಪಡೆಯಾದ ಬಿಎಂಟಿಸಿ ಬಸ್​ಗಳ ವಿಶೇಷತೆ ಏನೇನು ಗೊತ್ತಾ?
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ಮೆರವಣಿಗೆ ವೇಳೆ ಕಲ್ಲೆಸೆತ: ಪ್ರತ್ಯಕ್ಷದರ್ಶಿಗಳಿಂದ ವಿವರವಾದ ಮಾಹಿತಿ
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?
ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ, ನಾಗಮಂಗಲದಲ್ಲಿ ಹೇಗಿದೆ ಈಗ ಪರಿಸ್ಥಿತಿ?