Dr Priya: 8 ತಿಂಗಳ ಗರ್ಭಿಣಿ, ಕಿರುತೆರೆ ನಟಿ ಹೃದಯಾಘಾತದಿಂದ ನಿಧನ; ಮಗು ಪರಿಸ್ಥಿತಿ ಏನು?

ನಟಿ ಪ್ರಿಯಾ ಅವರಿಗೆ 35 ವರ್ಷ ವಯಸ್ಸಾಗಿತ್ತು. 8 ತಿಂಗಳ ಗರ್ಭಿಣಿ ಆಗಿದ್ದ ಅವರು ಮಗುವಿನ ಆಗಮನಕ್ಕೆ ದಿನಗಣನೆ ಮಾಡುತ್ತಿದ್ದರು. ಆಗಲೇ ವಿಧಿ ತನ್ನ ಕ್ರೂರ ದೃಷ್ಟಿ ಬೀರಿದೆ. ಮಂಗಳವಾರ (ಅಕ್ಟೋಬರ್​ 31) ಪ್ರಿಯಾ ಅವರಿಗೆ ಹೃದಯಾಘಾತ ಆಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಆ ಬಗ್ಗೆ ಇಲ್ಲಿದೆ ವಿವರ..

Dr Priya: 8 ತಿಂಗಳ ಗರ್ಭಿಣಿ, ಕಿರುತೆರೆ ನಟಿ ಹೃದಯಾಘಾತದಿಂದ ನಿಧನ; ಮಗು ಪರಿಸ್ಥಿತಿ ಏನು?
ನಟಿ ಪ್ರಿಯಾ
Follow us
|

Updated on:Nov 01, 2023 | 7:35 PM

ಮಲಯಾಳಂ (Malayalam) ಕಿರುತೆರೆಗೆ ಒಂದರ ಮೇಲೊಂದು ಆಘಾತ ಎದುರಾಗುತ್ತಿದೆ. ಇತ್ತೀಚೆಗಷ್ಟೇ ನಟಿ ರಂಜುಶಾ ಮೆನನ್​ ಅವರು ಆತ್ಮಹತ್ಯೆಗೆ ಶರಣಾದರು. ಆ ನೋವು ಮರೆಯಾಗುವುದಕ್ಕೂ ಮುನ್ನವೇ ಇನ್ನೊಂದು ಕಹಿ ಸುದ್ದಿ ಕೇಳಿಬಂದಿದೆ. ಮಲಯಾಳಂನ ಅನೇಕ ಧಾರಾವಾಹಿಗಳಲ್ಲಿ ನಟಿಸಿದ್ದ ಡಾಕ್ಟರ್​ ಪ್ರಿಯಾ (Dr Priya) ಅವರು ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಅತಿ ದುಃಖದ ಸಂಗತಿ ಏನೆಂದರೆ, ಅವರು 8 ತಿಂಗಳ ಗರ್ಭಿಣಿ ಆಗಿದ್ದರು. ಈಗ ಅವರ ಮಗು ಐಸಿಯುನಲ್ಲಿದೆ. ಪ್ರಿಯಾ ನಿಧನದಿಂದಾಗಿ ಅವರ ಕುಟುಂಬದವರಿಗೆ, ಅಭಿಮಾನಿಗಳಿಗೆ ಮತ್ತು ಆಪ್ತರಿಗೆ ತೀವ್ರ ನೋವುಂಟಾಗಿದೆ. ಪ್ರಿಯಾ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಲ್ಲರೂ ಪ್ರಾರ್ಥಿಸುತ್ತಿದ್ದಾರೆ.

ನಟಿ ಪ್ರಿಯಾ ಅವರಿಗೆ 35 ವರ್ಷ ವಯಸ್ಸಾಗಿತ್ತು. 8 ತಿಂಗಳ ಗರ್ಭಿಣಿ ಆಗಿದ್ದ ಅವರು ಮಗುವಿನ ಆಗಮನಕ್ಕೆ ದಿನಗಣನೆ ಮಾಡುತ್ತಿದ್ದರು. ಆಗಲೇ ವಿಧಿ ತನ್ನ ಕ್ರೂರ ದೃಷ್ಟಿ ಬೀರಿದೆ. ಮಂಗಳವಾರ (ಅಕ್ಟೋಬರ್​ 31) ಪ್ರಿಯಾ ಅವರಿಗೆ ಹೃದಯಾಘಾತವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ. ಇತ್ತೀಚೆಗಷ್ಟೇ ಅವರು ರೆಗ್ಯುಲರ್​ ಚೆಕಪ್​ ಮಾಡಿಸಿಕೊಂಡಿದ್ದರು. ಅದರ ಬೆನ್ನಲ್ಲೇ ಹಾರ್ಟ್​ ಅಟ್ಯಾಕ್​ ಆಗಿರುವುದು ಬೇಸರ ಮೂಡಿಸಿದೆ. ಅವರ ಮಗುವನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಕಿರುತೆರೆ ನಟಿ; ಪೊಲೀಸರಿಂದ ತನಿಖೆ

ಪ್ರಿಯಾ ಅವರ ನಿಧನದ ಸುದ್ದಿಯನ್ನು ನಟ ಕಿಶೋರ್​ ಸತ್ಯ ಅವರು ಖಚಿತಪಡಿಸಿದ್ದಾರೆ. ಸೋಶಿಯಲ್​ ಮೀಡಿಯಾ ಅವರು ಈ ವಿಚಾರ ಹಂಚಿಕೊಂಡಿದ್ದಾರೆ.

View this post on Instagram

A post shared by Kishor Satya (@kishor.satya)

‘ಮಲಯಾಳಂ ಕಿರುತೆರೆಯಲ್ಲಿ ಮತ್ತೊಂದು ಅನಿರೀಕ್ಷಿತ ಸಾವು. ಡಾ. ಪ್ರಿಯಾ ಅವರು ಹೃದಯಾಘಾತದಿಂದ ನಿನ್ನೆ ನಿಧನರಾಗಿದ್ದಾರೆ. ಅವರು 8 ತಿಂಗಳ ಗರ್ಭಿಣಿ ಆಗಿದ್ದರು. ಮಗು ಐಸಿಯುನಲ್ಲಿದೆ. ಬೇರೆ ಯಾವುದೇ ಆರೋಗ್ಯ ಸಮಸ್ಯೆ ಇರಲಿಲ್ಲ’ ಎಂದು ಕಿಶೋರ್​ ಸತ್ಯ ಅವರು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮ್ಯಾಥ್ಯು ಪೆರ್ರಿ ಸಾವಿಗೆ ಮರಣೋತ್ತರ ಪರೀಕ್ಷೆಯಲ್ಲಿ ಕಾರಣ ತಿಳಿಯಲಿಲ್ಲವೇ?

‘ಮಗಳ ಸಾವನ್ನು ಅರಗಿಸಿಕೊಳ್ಳಲು ಸಾಧ್ಯವಾಗದೇ ಅವರ ತಾಯಿ ಅಳುತ್ತಿದ್ದಾರೆ. ಪ್ರಿಯಾ ಅವರ ಪತಿ ಕಳೆದ 6 ತಿಂಗಳಿಂದ ಎಲ್ಲಿಗೂ ಹೋಗದೇ ಜೊತೆಯಲ್ಲೇ ಇದ್ದು ಕಾಳಜಿ ವಹಿಸುತ್ತಿದ್ದರು. ನಂಬಿಕೆ ಇಟ್ಟ ಮುಗ್ಧ ಜನರಿಗೆ ದೇವರು ಯಾಕೆ ಇಂಥ ಕ್ರೂರ ಪರಿಸ್ಥಿತಿ ಕೊಡುತ್ತಾನೆ. ಉತ್ತರ ಇಲ್ಲದ ಈ ಪ್ರಶ್ನೆಗಳೇ ತಲೆಯಲ್ಲಿ ಮತ್ತೆ ಮತ್ತೆ ಕೊರೆಯುತ್ತಿವೆ. ಈ ನೋವಿನಿಂದ ಪ್ರಿಯಾ ಅವರ ತಾಯಿ ಮತ್ತು ಪತಿ ಹೇಗೆ ಹೊರಬರುತ್ತಾರೋ ಗೊತ್ತಿಲ್ಲ. ಅವರಿಗೆ ದೇವರು ಶಕ್ತಿ ನೀಡಲಿ’ ಎಂದು ಕಿಶೋರ್​ ಸತ್ಯ ಅವರು ಇನ್​ಸ್ಟಾಗ್ರಾಮ್​ನಲ್ಲಿ ಪೋಸ್ಟ್​ ಮಾಡಿದ್ದಾರೆ. ಈ ಸುದ್ದಿ ಕೇಳಿ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:34 pm, Wed, 1 November 23

ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
ವಾರಣಾಸಿಯಲ್ಲಿ ಗಂಗಾ ಆರತಿ ವೀಕ್ಷಿಸಿದ ಕಾಂಗ್ರೆಸ್ ನಿಯೋಗ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು