AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kozhikode Sarada: ಮಲಯಾಳಂ ಚಿತ್ರರಂಗದ ಹಿರಿಯ ನಟಿ ಶಾರದಾ ನಿಧನ; ಕಂಬಿನಿ ಮಿಡಿದ ಮಾಲಿವುಡ್​

ನಾಲ್ವರು ಮಕ್ಕಳನ್ನು ನಟಿ ಕೋಳಿಕೋಡ್​ ಶಾರದಾ ಅಗಲಿದ್ದಾರೆ. ಪೃಥ್ವಿರಾಜ್​ ಸುಕುಮಾರನ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಅವರ ನಿಧನಕ್ಕೆ ಕಂಬನಿ ಮಿಡಿದ್ದಾರೆ.

Kozhikode Sarada: ಮಲಯಾಳಂ ಚಿತ್ರರಂಗದ ಹಿರಿಯ ನಟಿ ಶಾರದಾ ನಿಧನ; ಕಂಬಿನಿ ಮಿಡಿದ ಮಾಲಿವುಡ್​
ಕೋಳಿಕೋಡ್ ಶಾರದಾ
TV9 Web
| Edited By: |

Updated on: Nov 10, 2021 | 12:19 PM

Share

ಮಲಯಾಳಂ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಹಿರಿಯ ನಟಿ ಕೋಳಿಕೋಡ್​ ಶಾರದಾ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಮಂಗಳವಾರ (ನ.9) ಅವರಿಗೆ ಹೃದಯಾಘಾತವಾದ ಬಳಿಕ ಕೇರಳದ ಕೋಳಿಕೋಡ್​ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅವರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಿಲ್ಲ. ಅವರ ನಿಧನಕ್ಕೆ ಸೆಲೆಬ್ರಿಟಿಗಳು, ಅಭಿಮಾನಿಗಳು ಕಂಬನಿ ಮಿಡಿದ್ದಾರೆ.

ರಂಗಭೂಮಿಯಲ್ಲಿನ ಅಪಾರ ಅನುಭವ ಇಟ್ಟುಕೊಂಡು ಚಿತ್ರರಂಗಕ್ಕೆ ಕಾಲಿಟ್ಟವರು ಶಾರದಾ. ಮಲಯಾಳಂ ಸಿನಿಮಾಗಳ ಮೂಲಕ ಅವರು ಹೆಚ್ಚು ಜನಪ್ರಿಯತೆ ಗಳಿಸಿದ್ದರು. ‘ಅಂಗಕ್ಕುರಿ’ ಸಿನಿಮಾ ಮೂಲಕ 1979ರಲ್ಲಿ ಚಿತ್ರರಂಗಕ್ಕೆ ಶಾರದಾ ಪಾದಾರ್ಪಣೆ ಮಾಡಿದ್ದರು. 40 ವರ್ಷಗಳ ಕಾಲ ಅವರು ಸಿನಿಮಾ ಜಗತ್ತಿನಲ್ಲಿ ಸಕ್ರಿಯರಾಗಿದ್ದರು. 90ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರದ್ದು. ಹೆಚ್ಚಾಗಿ ತಾಯಿ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ಆ ಮೂಲಕ ಅವರು ಸಿನಿಪ್ರಿಯರನ್ನು ರಂಜಿಸಿದ್ದರು. ಮಾಡಿದ್ದೆಲ್ಲವೂ ಚಿಕ್ಕ-ಪುಟ್ಟ ಪಾತ್ರಗಳಾದರೂ ಅವರ ನಟನೆ ಗಮನಾರ್ಹವಾಗಿತ್ತು. ಮಲಯಾಳಂ ಕಿರುತೆರೆಯ ಕೆಲವು ಧಾರಾವಾಹಿಗಳಲ್ಲೂ ಶಾರದಾ ಬಣ್ಣ ಹಚ್ಚಿದ್ದರು.

ಅನುಬಂಧಂ, ಸಾದಯಂ, ನಂದನಂ ಮುಂತಾದವು ಶಾರದಾ ನಟಿಸಿದ ಪ್ರಮುಖ ಸಿನಿಮಾಗಳು. ನಾಲ್ವರು ಮಕ್ಕಳನ್ನು ಅವರು ಅಗಲಿದ್ದಾರೆ. ಪೃಥ್ವಿರಾಜ್​ ಸುಕುಮಾರನ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಶಾರದಾ ನಿಧನಕ್ಕೆ ಕಂಬನಿ ಮಿಡಿದ್ದಾರೆ. ಕೇರಳ ಅಸೆಂಬ್ಲಿ ಸ್ಪೀಕರ್​ ಎಂಬಿ ರಾಜೇಶ್​, ಸಚಿವರಾದ ಮೊಹಮ್ಮದ್​ ರಿಯಾಸ್​, ಸಾಜಿ ಚೆರಿಯನ್​ ಮುಂತಾದ ರಾಜಕೀಯ ಗಣ್ಯರು ಕೂಡ ಸಂತಾಪ ಸೂಚಿಸಿದ್ದಾರೆ.

ನಟ ಪುನೀತ್​ ರಾಜ್​ಕುಮಾರ್​ ಅವರು ಅ.29ರಂದು ಹೃದಯಾಘಾತದಿಂದ ನಿಧನರಾದ ಬಳಿಕ ಇಡೀ ದಕ್ಷಿಣ ಭಾರತಕ್ಕೆ ಸೂತಕದ ಛಾಯೆ ಆವರಿಸಿದೆ. ಅಪ್ಪು ಅವರ ಅಕಾಲಿಕ ಮರಣವನ್ನು ಯಾರಿಂದಲೂ ಒಪ್ಪಿಕೊಳ್ಳಲು ಸಾಧ್ಯವಾಗಿಲ್ಲ. ಪರಭಾಷೆಯ ಅನೇಕ ಕಲಾವಿದರು ಪುನೀತ್​ ನಿವಾಸಕ್ಕೆ ಬಂದು ಕುಟುಂಬಸ್ಥರಿಗೆ ಸಾಂತ್ವನ ಹೇಳುತ್ತಿದ್ದಾರೆ. ಇದರ ನಡುವೆಯೇ ಕೋಳಿಕೋಡ್​ ಶಾರದಾ ಅವರು ಕೂಡ ಹೃದಯಾಘಾತದಿಂದ ಮೃತಪಟ್ಟಿರುವುದು ನೋವಿನ ಸಂಗತಿ.

ಇದನ್ನೂ ಓದಿ:

Heart Attack: ಹೃದಯಾಘಾತದ ಸಾಮಾನ್ಯ ಲಕ್ಷಣಗಳಾವುವು? ತಿಳಿಯಲೇಬೇಕಾದ ಒಂದಿಷ್ಟು ಮಾಹಿತಿ ಇಲ್ಲಿದೆ

Puneeth Rajkumar: ‘ಪುನೀತ್​ ಅತಿಯಾಗಿ ಜಿಮ್​ ಮಾಡಿದ್ರು’: ಕರಾಳ ಶುಕ್ರವಾರದ ಘಟನೆ ವಿವರಿಸಿದ ಸೆಕ್ಯೂರಿಟಿ ಸಿಬ್ಬಂದಿ

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್