AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಲಿ ಚಿತ್ರಕ್ಕೆ ಮಲಯಾಳಂ ನಟಿ ಫೋಟೋ ಅಂಟಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ ಶಾಕ್​ ಆದ ರಮ್ಯಾ ಸುರೇಶ್

ಕೆಲ ಕಿಡಿಗೇಡಿಗಳು ಅಶ್ಲೀಲ ವಿಡಿಯೋಗೆ ರಮ್ಯಾ ಅವರ ಮುಖವನ್ನು ಎಡಿಟ್​ ಮಾಡಿದ್ದಾರೆ. ಅಲ್ಲದೆ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದು ರಮ್ಯಾ ಪರಿಚಯಸ್ಥರಿಗೆ ಸಿಕ್ಕಿದ್ದು, ಇವರ ಗಮನಕ್ಕೆ ತಂದಿದ್ದಾರೆ.

ನೀಲಿ ಚಿತ್ರಕ್ಕೆ ಮಲಯಾಳಂ ನಟಿ ಫೋಟೋ ಅಂಟಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ ಶಾಕ್​ ಆದ ರಮ್ಯಾ ಸುರೇಶ್
ರಾಜೇಶ್ ದುಗ್ಗುಮನೆ
|

Updated on: Jun 03, 2021 | 8:28 PM

Share

ನೀಲಿ ಚಿತ್ರವೊಂದಕ್ಕೆ ಮಲಯಾಳಂ ನಟಿ ರಮ್ಯಾ ಸುರೇಶ್​ ಅವರ ಮುಖವನ್ನು ಎಡಿಟ್​ ಮಾಡಿ ಆನ್​ಲೈನ್​ಲ್ಲಿ ಅಪ್​ಲೋಡ್​ ಮಾಡಲಾಗಿದೆ. ಈ ವಿಚಾರ ನಟಿಯ ಗಮನಕ್ಕೆ ಬಂದಿದ್ದು, ಅವರು ಸೈಬರ್​ ಠಾಣೆಗೆ ದೂರು ನೀಡಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕೆಲ ಕಿಡಿಗೇಡಿಗಳು ಅಶ್ಲೀಲ ವಿಡಿಯೋಗೆ ರಮ್ಯಾ ಅವರ ಮುಖವನ್ನು ಎಡಿಟ್​ ಮಾಡಿದ್ದಾರೆ. ಅಲ್ಲದೆ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದು ರಮ್ಯಾ ಪರಿಚಯಸ್ಥರಿಗೆ ಸಿಕ್ಕಿದ್ದು, ಇವರ ಗಮನಕ್ಕೆ ತಂದಿದ್ದಾರೆ. ಇದನ್ನು ನೋಡಿ ರಮ್ಯಾ ಶಾಕ್​ಗೆ ಒಳಗಾದರು. ಅಲ್ಲದೆ, ತಕ್ಷಣ ಅವರು ಸೈಬರ್​ ಠಾಣೆಯ ಮೆಟ್ಟಿಲೇರಿದ್ದಾರೆ.

ವಾಟ್ಸ್​ಆ್ಯಪ್​ ಗ್ರೂಪ್​ ಒಂದರಲ್ಲಿ ಈ ವಿಡಿಯೋ ಬಂದಿತ್ತು ಎನ್ನಲಾಗಿದೆ. ಸದ್ಯ, ಸೈಬರ್ ಪೊಲೀಸರು ಗ್ರೂಪ್​ ಅಡ್ಮಿನ್​ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಈ ಕೃತ್ಯದ ಹಿಂದೆ ಯಾರ ಕೈವಾಡವಿದೆ ಎಂಬುದು ಇನ್ನೂ ಬಹಿರಂಗವಾಗಿಲ್ಲ. ರಮ್ಯಾ ಕೂಡ ಯಾರ ಬಗ್ಗೆಯೂ ಅನುಮಾನ ಹೊರ ಹಾಕಿಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಮ್ಯಾ, ಈ ವಿಡಿಯೋವನ್ನು ಎಷ್ಟು ಜನ ನೋಡಿದ್ದಾರೆ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ. ಈ ವೀಡಿಯೊ ನನ್ನ ಮಾನಸಿಕ ಶಾಂತಿಗೆ ಧಕ್ಕೆ ತರುತ್ತಿದೆ. ಆದರೆ, ಈ ವಿಡಿಯೋಗೂ ನನಗೂ ಸಂಬಂಧವಿಲ್ಲ. ಇಂತಹ ದುರುದ್ದೇಶಪೂರಿತ ವಿಷಯವನ್ನು ಶೇರ್ ​ಮಾಡುವುದರಿಂದ ಜನರಿಗೆ ಯಾವ ರೀತಿಯ ಆನಂದ ಸಿಗುತ್ತದೆಯೋ ಅದು ನನಗೆ ಗೊತ್ತಿಲ್ಲ. ನನ್ನ ಪತಿ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಸಾಧ್ಯವಾದಷ್ಟು ನನ್ನನ್ನು ಸಮಾಧಾನಪಡಿಸುತ್ತಿದ್ದಾರೆ ಎಂದು ರಮ್ಯಾ ಹೇಳಿದ್ದಾರೆ.

ಇದನ್ನೂ ಓದಿ: ಅಶ್ಲೀಲ ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ಕೋರ್ಟ್​ ಮೆಟ್ಟಿಲೇರಲಿರುವ ರಮೇಶ್​ ಜಾರಕಿಹೊಳಿ

Follow Us
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!