AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀಲಿ ಚಿತ್ರಕ್ಕೆ ಮಲಯಾಳಂ ನಟಿ ಫೋಟೋ ಅಂಟಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ ಶಾಕ್​ ಆದ ರಮ್ಯಾ ಸುರೇಶ್

ಕೆಲ ಕಿಡಿಗೇಡಿಗಳು ಅಶ್ಲೀಲ ವಿಡಿಯೋಗೆ ರಮ್ಯಾ ಅವರ ಮುಖವನ್ನು ಎಡಿಟ್​ ಮಾಡಿದ್ದಾರೆ. ಅಲ್ಲದೆ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದು ರಮ್ಯಾ ಪರಿಚಯಸ್ಥರಿಗೆ ಸಿಕ್ಕಿದ್ದು, ಇವರ ಗಮನಕ್ಕೆ ತಂದಿದ್ದಾರೆ.

ನೀಲಿ ಚಿತ್ರಕ್ಕೆ ಮಲಯಾಳಂ ನಟಿ ಫೋಟೋ ಅಂಟಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ ಶಾಕ್​ ಆದ ರಮ್ಯಾ ಸುರೇಶ್
ರಾಜೇಶ್ ದುಗ್ಗುಮನೆ
|

Updated on: Jun 03, 2021 | 8:28 PM

Share

ನೀಲಿ ಚಿತ್ರವೊಂದಕ್ಕೆ ಮಲಯಾಳಂ ನಟಿ ರಮ್ಯಾ ಸುರೇಶ್​ ಅವರ ಮುಖವನ್ನು ಎಡಿಟ್​ ಮಾಡಿ ಆನ್​ಲೈನ್​ಲ್ಲಿ ಅಪ್​ಲೋಡ್​ ಮಾಡಲಾಗಿದೆ. ಈ ವಿಚಾರ ನಟಿಯ ಗಮನಕ್ಕೆ ಬಂದಿದ್ದು, ಅವರು ಸೈಬರ್​ ಠಾಣೆಗೆ ದೂರು ನೀಡಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕೆಲ ಕಿಡಿಗೇಡಿಗಳು ಅಶ್ಲೀಲ ವಿಡಿಯೋಗೆ ರಮ್ಯಾ ಅವರ ಮುಖವನ್ನು ಎಡಿಟ್​ ಮಾಡಿದ್ದಾರೆ. ಅಲ್ಲದೆ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇದು ರಮ್ಯಾ ಪರಿಚಯಸ್ಥರಿಗೆ ಸಿಕ್ಕಿದ್ದು, ಇವರ ಗಮನಕ್ಕೆ ತಂದಿದ್ದಾರೆ. ಇದನ್ನು ನೋಡಿ ರಮ್ಯಾ ಶಾಕ್​ಗೆ ಒಳಗಾದರು. ಅಲ್ಲದೆ, ತಕ್ಷಣ ಅವರು ಸೈಬರ್​ ಠಾಣೆಯ ಮೆಟ್ಟಿಲೇರಿದ್ದಾರೆ.

ವಾಟ್ಸ್​ಆ್ಯಪ್​ ಗ್ರೂಪ್​ ಒಂದರಲ್ಲಿ ಈ ವಿಡಿಯೋ ಬಂದಿತ್ತು ಎನ್ನಲಾಗಿದೆ. ಸದ್ಯ, ಸೈಬರ್ ಪೊಲೀಸರು ಗ್ರೂಪ್​ ಅಡ್ಮಿನ್​ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ. ಈ ಕೃತ್ಯದ ಹಿಂದೆ ಯಾರ ಕೈವಾಡವಿದೆ ಎಂಬುದು ಇನ್ನೂ ಬಹಿರಂಗವಾಗಿಲ್ಲ. ರಮ್ಯಾ ಕೂಡ ಯಾರ ಬಗ್ಗೆಯೂ ಅನುಮಾನ ಹೊರ ಹಾಕಿಲ್ಲ.

ಈ ಬಗ್ಗೆ ಪ್ರತಿಕ್ರಿಯಿಸಿರುವ ರಮ್ಯಾ, ಈ ವಿಡಿಯೋವನ್ನು ಎಷ್ಟು ಜನ ನೋಡಿದ್ದಾರೆ ಎನ್ನುವ ಬಗ್ಗೆ ನನಗೆ ತಿಳಿದಿಲ್ಲ. ಈ ವೀಡಿಯೊ ನನ್ನ ಮಾನಸಿಕ ಶಾಂತಿಗೆ ಧಕ್ಕೆ ತರುತ್ತಿದೆ. ಆದರೆ, ಈ ವಿಡಿಯೋಗೂ ನನಗೂ ಸಂಬಂಧವಿಲ್ಲ. ಇಂತಹ ದುರುದ್ದೇಶಪೂರಿತ ವಿಷಯವನ್ನು ಶೇರ್ ​ಮಾಡುವುದರಿಂದ ಜನರಿಗೆ ಯಾವ ರೀತಿಯ ಆನಂದ ಸಿಗುತ್ತದೆಯೋ ಅದು ನನಗೆ ಗೊತ್ತಿಲ್ಲ. ನನ್ನ ಪತಿ ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಸಾಧ್ಯವಾದಷ್ಟು ನನ್ನನ್ನು ಸಮಾಧಾನಪಡಿಸುತ್ತಿದ್ದಾರೆ ಎಂದು ರಮ್ಯಾ ಹೇಳಿದ್ದಾರೆ.

ಇದನ್ನೂ ಓದಿ: ಅಶ್ಲೀಲ ವಿಡಿಯೋ ಪ್ರಸಾರಕ್ಕೆ ತಡೆ ಕೋರಿ ಕೋರ್ಟ್​ ಮೆಟ್ಟಿಲೇರಲಿರುವ ರಮೇಶ್​ ಜಾರಕಿಹೊಳಿ

Follow Us
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ಕಾಂಗ್ರೆಸ್ ಟಿಕೆಟ್​ ಅಸಮಾಧಾನ: ಬಿಜೆಪಿ ಸೇರಿದ 20ಕ್ಕೂ ಹೆಚ್ಚು ಮುಸ್ಲಿಮರು!
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ತುಳಸಿ ಕಟ್ಟೆ ಪ್ರದಕ್ಷಿಣೆ ಹಾಗೂ ಇದರ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಇಂದು ಈ ರಾಶಿಯ ಪತಿ-ಪತ್ನಿಯರಲ್ಲಿ ಭಿನ್ನಾಭಿಪ್ರಾಯ!
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್