AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗರಾಜ್ ಭಟ್ಟರ ಸಿನಿಮಾದಲ್ಲಿ ನಟಿಸಿದ್ದ ಚೆಲುವೆ ಈಗ ಅಲ್ಲು ಅರ್ಜುನ್​ಗೆ ನಾಯಕಿ

Allu Arjun: ಯೋಗರಾಜ್ ಭಟ್ಟರ ಸಿನಿಮಾದಲ್ಲಿ ಗಣೇಶ್, ದಿಗಂತ್ ಜೊತೆ ನಟಿಸಿದ್ದ ಚೆಲುವೆ ಈಗ ಅಲ್ಲು ಅರ್ಜುನ್ ಮುಂದಿನ ಸಿನಿಮಾಕ್ಕೆ ನಾಯಕಿ. ಯಾರಾಕೆ?

ಯೋಗರಾಜ್ ಭಟ್ಟರ ಸಿನಿಮಾದಲ್ಲಿ ನಟಿಸಿದ್ದ ಚೆಲುವೆ ಈಗ ಅಲ್ಲು ಅರ್ಜುನ್​ಗೆ ನಾಯಕಿ
ಅಲ್ಲು ಅರ್ಜುನ್-ಸಂಯುಕ್ತಾ
ಮಂಜುನಾಥ ಸಿ.
|

Updated on: May 05, 2023 | 8:00 AM

Share

ಅಲ್ಲು ಅರ್ಜುನ್ ಈಗ ಪ್ಯಾನ್ ಇಂಡಿಯಾ ಸ್ಟಾರ್. ಪುಷ್ಪ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿದ್ದು, ಇದೀಗ ಪುಷ್ಪ 2 ಸಿನಿಮಾದ ಬಗ್ಗೆ ದೊಡ್ಡ ನಿರೀಕ್ಷೆ ಎದ್ದಿದೆ. ಇದರ ನಡುವೆ ಅಲ್ಲು ಅರ್ಜುನ್​ರ ಮುಂದಿನ ಸಿನಿಮಾಗಳ ಬಗ್ಗೆಯೂ ಭಾರಿ ಚರ್ಚೆಗಳು ಈಗಲೆ ಪ್ರಾರಂಭವಾಗಿವೆ. ಪ್ರಸ್ತುತ ಅಲ್ಲು ಅರ್ಜುನ್ ಎರಡು ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ. ಒಂದನ್ನು ತ್ರಿವಿಕ್ರಮ್ ನಿರ್ದೇಶನ ಮಾಡಲಿದ್ದರೆ ಮತ್ತೊಂದನ್ನು ಸಂದೀಪ್ ರೆಡ್ಡಿ ವಂಗಾ ನಿರ್ದೇಶಿಸಲಿದ್ದಾರೆ. ಇವುಗಳಲ್ಲಿ ತ್ರಿವಿಕ್ರಮ್ ಸಿನಿಮಾ ಮೊದಲು ಆರಂಭವಾಗಲಿದ್ದು, ಕನ್ನಡದ ಒಂದು ಸಿನಿಮಾದಲ್ಲಿ ನಟಿಸಿದ್ದ ನಟಿಯೇ ಈಗ ಅಲ್ಲು ಅರ್ಜುನ್​ಗೆ ನಾಯಕಿಯಾಗಿ ಆಯ್ಕೆ ಆಗಿದ್ದಾರೆ.

ಕನ್ನಡದ ಗಾಳಿಪಟ 2 ಸಿನಿಮಾದಲ್ಲಿ ಅನುಪಮಾ ಪಾತ್ರದಲ್ಲಿ ನಟಿಸಿದ್ದ ಸಂಯುಕ್ತಾ, ಅಲ್ಲು ಅರ್ಜುನ್​ಗೆ ನಾಯಕಿಯಾಗಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಕೇರಳದ ಈ ಚೆಲುವೆ 2016 ರಲ್ಲಿಯೇ ಚಿತ್ರರಂಗಕ್ಕೆ ಪ್ರವೇಶ ಮಾಡಿದರೂ, ಹೆಚ್ಚು ಅವಕಾಶಗಳನ್ನು ಪಡೆದುಕೊಳ್ಳುತ್ತಿರುವುದು 2018ರ ಬಳಿಕವೇ. ತಮಿಳು, ತೆಲುಗು, ಮಲಯಾಳಂ ಮೂರು ಭಾಷೆಗಳಲ್ಲಿಯೂ ಬಹಳ ಬ್ಯುಸಿಯಾಗಿರುವ ಸಂಯುಕ್ತ, ಕನ್ನಡದ ಒಂದು ಸಿನಿಮಾದಲ್ಲಿ ಮಾತ್ರವೇ ನಟಿಸಿದ್ದಾರೆ ಅದುವೇ ಗಾಳಿಪಟ 2.

ಇತ್ತೀಚೆಗಷ್ಟೆ ಸಂಯುಕ್ತಾ ನಟನೆಯ ತೆಲುಗು ಸಿನಿಮಾ ವಿರೂಪಾಕ್ಷ ಸಿನಿಮಾ ಬಿಡುಗಡೆ ಆಗಿ ಹಿಟ್ ಎನಿಸಿಕೊಂಡಿದೆ. ಆ ಸಿನಿಮಾದಲ್ಲಿ ಮೆಗಾ ಕುಟುಂಬಕ್ಕೆ ಸೇರಿದ ಸಾಯಿ ಧರಮ್ ತೇಜ್ ನಾಯಕರಾಗಿ ನಟಿಸಿದ್ದಾರೆ. ಇದರ ಜೊತೆಗೆ ಡೆವಿಲ್ ಹೆಸರಿನ ಮತ್ತೊಂದು ತೆಲುಗು ಸಿನಿಮಾದಲ್ಲಿಯೂ ಸಂಯುಕ್ತಾ ನಟಿಸುತ್ತಿದ್ದಾರೆ.

ಇತ್ತೀಚೆಗೆ ಸಂಯುಕ್ತಾ ಹೆಸರು ವಿವಾದದ ಕಾರಣಕ್ಕೆ ಸುದ್ದಿಯಾಗಿತ್ತು. ಇದೇ ವರ್ಷದ ಆರಂಭದಲ್ಲಿ ತಮ್ಮ ಹೆಸರಿನಲ್ಲಿರುವ ಜಾತಿಸೂಚಲ ಮೆನನ್ ಅಡ್ಡನಾಮವನ್ನು ಕೈಬಿಡುತ್ತಿರುವುದಾಗಿ ಸಂಯುಕ್ತಾ ಘೋಷಿಸಿದ್ದರು. ಅದೇ ಸಮಯದಲ್ಲಿ ಸಂಯುಕ್ತಾ ನಟಿಸಿದ್ದ ಮಲಯಾಳಂನ ಬೂಮರಾಂಗ್ ಸಿನಿಮಾ ಬಿಡುಗಡೆ ಆಗಲಿತ್ತು. ಆ ಸಿನಿಮಾದ ನಾಯಕ ಟಾಮ್ ಶೈನ್ ಚಾಕೊ ಹಾಗೂ ನಿರ್ಮಾಪಕರು ಸಂಯುಕ್ತಾ, ಸಿನಿಮಾದ ಪ್ರಮೋಷನ್​ಗೆ ಬರುತ್ತಿಲ್ಲವೆಂದು, ಅಸಹಕಾರ ತೋರುತ್ತಿದ್ದಾರೆಂದು ದೂರಿದ್ದರು. ಆ ವೇಳೆಯಲ್ಲಿ ಮಾತನಾಡಿದ್ದ ಶೈನ್ ಟಾಮ್ ಚಾಕೊ, ”ನೀವು ನಿಮ್ಮ ಸರ್​ನೇಮ್ ಬದಲಾಯಿಸಿಕೊಂಡ ಮಾತ್ರಕ್ಕೆ ಕೆಟ್ಟವರಿಂದ ಒಳ್ಳೆಯವರಾಗಿಬಿಡುವುದಿಲ್ಲ” ಎಂದಿದ್ದರು.

ಈ ಬಗ್ಗೆ ಇತ್ತೀಚೆಗೆ ವಿರೂಪಾಕ್ಷ ಸಿನಿಮಾದ ಪ್ರಚಾರ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ, ಸಂಯುಕ್ತಾ, ನಾನು ಪ್ರಗತಿಪರ ನಿಲುವಿನಿಂದಾಗಿ ನನ್ನ ಹೆಸರಿನಲ್ಲಿದ್ದ ಜಾತಿಸೂಚಕ ಪದವನ್ನು ಕೈಬಿಟ್ಟೆ. ಕೇರಳದಲ್ಲಿ ಹೀಗೆ ಪ್ರಗತಿಪರವಾಗಿ ಆಲೋಚಿಸುವವರ ದೊಡ್ಡ ಸಂಖ್ಯೆ ಇದೆ. ಆದರೆ ಕೆಲವರು ಇನ್ನೂ ಅದೇ ಹಳೆಯ ಆಲೋಚನೆಗಳಲ್ಲಿಯೇ ಮುಳುಗಿದ್ದಾರೆ. ಶೈನ್ ಟಾಮ್ ಚಾಕೋ ಆಡಿದ ಮಾತುಗಳು ನನಗೆ ನೋವು ತಂದಿವೆ” ಎಂದಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ