AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Saranya Sasi: 35ನೇ ವಯಸ್ಸಿನಲ್ಲೇ ಕ್ಯಾನ್ಸರ್​ನಿಂದ ನಟಿ ಶರಣ್ಯಾ ಶಶಿ ನಿಧನ

Saranya Sasi Death: ಕಳೆದ ಹತ್ತು ವರ್ಷಗಳಲ್ಲಿ ಶರಣ್ಯಾ ಹಲವು ಬಾರಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರಿಂದ ಅವರಿಗೆ ಆರ್ಥಿಕ ಸಂಕಷ್ಟ ಕೂಡ ಎದುರಾಗಿತ್ತು. ಮಲಯಾಳಂ ಚಿತ್ರರಂಗ ಮತ್ತು ಕಿರುತೆರೆಯ ಅನೇಕರು ಅವರಿಗೆ ಸಹಾಯ ಮಾಡಿದ್ದರು.

Saranya Sasi: 35ನೇ ವಯಸ್ಸಿನಲ್ಲೇ ಕ್ಯಾನ್ಸರ್​ನಿಂದ ನಟಿ ಶರಣ್ಯಾ ಶಶಿ ನಿಧನ
35ನೇ ವಯಸ್ಸಿನಲ್ಲೇ ಕ್ಯಾನ್ಸರ್​ನಿಂದ ನಟಿ ಶರಣ್ಯಾ ಶಶಿ ನಿಧನ
TV9 Web
| Edited By: |

Updated on:Aug 10, 2021 | 8:04 AM

Share

ಮಲಯಾಳಂ ಚಿತ್ರರಂಗ ಹಾಗೂ ಕಿರುತೆರೆಯ ಜನಪ್ರಿಯ ನಟಿ ಶರಣ್ಯಾ ಶಶಿ (Saranya Sasi) ಅವರು ಸೋಮವಾರ (ಆ.9) ಮಧ್ಯಾಹ್ನ ನಿಧನರಾದರು ಎಂಬ ಕಹಿ ಸುದ್ದಿ ಕೇಳಿಬಂದಿದೆ. ಕಳೆದ ಹತ್ತು ವರ್ಷಗಳಿಂದ ಅವರು ಕ್ಯಾನ್ಸರ್​ (Cancer) ವಿರುದ್ಧ ಹೋರಾಡುತ್ತಿದ್ದರು. 2012ರಲ್ಲಿ ಅವರಿಗೆ ಬ್ರೇನ್​ ಟ್ಯೂಮರ್​ (Brain Tumor) ಇದೆ ಎಂಬುದು ತಿಳಿದುಬಂದಿತ್ತು. 11ಕ್ಕೂ ಹೆಚ್ಚು ಬಾರಿ ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು. ಆದರೂ ಕ್ಯಾನ್ಸರ್​ ಗೆಲ್ಲಲು ಶರಣ್ಯಾಗೆ ಸಾಧ್ಯವಾಗಿಲ್ಲ. ಶರಣ್ಯಾ ಶಶಿ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ. ತೀವ್ರ ಅನಾರೋಗ್ಯದ ನಡುವೆಯೂ ನಮ್ಮ ಮನೋಬಲದ ಕಾರಣಕ್ಕೆ ಅವರು ಅನೇಕರಿಗೆ ಸ್ಫೂರ್ತಿ ಆಗಿದ್ದರು. ಈಗ ಅವರ ನಿಧನದಿಂದ ಮಲಯಾಳಂ ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ.

ಮೇ 23ರಂದು ಶರಣ್ಯಾ ಅವರಿಗೆ ಕೊರೊನಾ ವೈರಸ್​ ಲಕ್ಷಣಗಳು ಕಾಣಿಸಿಕೊಂಡಿದ್ದವು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಚಿಂತಾಜನಕ ಆಗಿದ್ದರಿಂದ ಹಲವು ದಿನಗಳ ಕಾಲ​ ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಜೂನ್​ನಲ್ಲಿ ಐಸಿಯುನಿಂದ ಜನರಲ್​ ವಾರ್ಡ್​ಗೆ ವರ್ಗಾಯಿಸಿದ ಬಳಿಕ ಮತ್ತೆ ಪರಿಸ್ಥಿತಿ ಬಿಗಡಾಯಿಸಿತ್ತು.

ಕಳೆದ ಹತ್ತು ವರ್ಷಗಳಲ್ಲಿ ಶರಣ್ಯಾ ಹಲವು ಬಾರಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರಿಂದ ಅವರಿಗೆ ಆರ್ಥಿಕ ಸಂಕಷ್ಟ ಕೂಡ ಎದುರಾಗಿತ್ತು. ಮಲಯಾಳಂ ಚಿತ್ರರಂಗ ಮತ್ತು ಕಿರುತೆರೆಯ ಅನೇಕರು ಅವರಿಗೆ ಸಹಾಯ ಮಾಡಿದ್ದರು. ಶರಣ್ಯಾ ಹೊಸ ಮನೆ ಖರೀದಿಸಲು ಕೂಡ ಬಹುತೇಕರು ನೆರವಾಗಿದ್ದರು. ಹರಿಚಂದನಮ್​, ಸೀತಾ ಮುಂತಾದ ಸೀರಿಯಲ್​ಗಳಲ್ಲಿ ನಟಿಸುವ ಮೂಲಕ ಮಲಯಾಳಂ ಕಿರುತೆರೆಯಲ್ಲಿ ಶರಣ್ಯಾ ತುಂಬ ಫೇಮಸ್​ ಆಗಿದ್ದರು. ಚೋಟಾ ಮುಂಬೈ, ಬಾಂಬೆ ಮುಂತಾದ ಸಿನಿಮಾಗಳಲ್ಲಿ ಅವರು ಪೋಷಕ ಪಾತ್ರಗಳನ್ನೂ ಮಾಡಿದ್ದರು.

ನಟಿ ಸೀಮಾ ನಾಯರ್​ ಅವರು ಶರಣ್ಯಾ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ‘ಎಲ್ಲ ಪ್ರಾರ್ಥನೆ ಮತ್ತು ಪ್ರಯತ್ನಗಳು ಅಂತ್ಯವಾದವು. ಆಕೆ ಹೊರಟುಹೋದಳು’ ಎಂದು ಸೋಶಿಯಲ್​ ಮೀಡಿಯಾದಲ್ಲಿ ಸೀಮಾ ಪೋಸ್ಟ್​ ಮಾಡಿದ್ದಾರೆ. ಶರಣ್ಯಾ ಅವರ ಕಷ್ಟದ ದಿನಗಳಲ್ಲಿ ಸೀಮಾ ಬೆಂಬಲವಾಗಿ ನಿಂತಿದ್ದರು.

ಇದನ್ನೂ ಓದಿ:

Yashika Aanand: ಭೀಕರ ಅಪಘಾತದ ಇಂಚಿಂಚೂ ವಿವರ; ಹಾಸಿಗೆಯಲ್ಲೇ ನರಕ ನೋಡುತ್ತಿರುವ ನಟಿ ಯಶಿಕಾ ಆನಂದ್​

ಸಂಚಾರಿ ವಿಜಯ್​ ದಾನ ಮಾಡಿದ ಅಂಗಗಳು ಯಾವುವು? ಉಳಿದ ಜೀವಗಳೆಷ್ಟು? ಇಲ್ಲಿದೆ ಪ್ರಮಾಣ ಪತ್ರ

Published On - 7:55 am, Tue, 10 August 21

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ