AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಲಯಾಳಂ ಇಂಡಸ್ಟ್ರಿ ಎಂದರೆ ಬ್ಲ್ಯೂ ಸಿನಿಮಾಗಳು ಎನ್ನುವ ಕಲ್ಪನೆ ಇತ್ತು’; ರಾಮ್ ಗೋಪಾಲ್ ವರ್ಮಾ

ಈ ವರ್ಷ ರಿಲೀಸ್ ಆದ ‘ಪ್ರೇಮುಲು’, ‘ಭ್ರಮಯುಗಂ’, ‘ಆವೇಶಂ’, ‘ಆಡುಜೀವಿತಂ’, ‘ಫ್ಯಾಮಿಲಿ’, ‘ಮಂಜುಮ್ಮೇಲ್ ಬಾಯ್ಸ್’ ಸೇರಿ ಅನೇಕ ಸಿನಿಮಾಗಳು ಜನ ಮೆಚ್ಚುಗೆ ಪಡೆದಿವೆ. ಈ ಯಶಸ್ಸನ್ನು ನೋಡಿ ಅನೇಕರಿಗೆ ಅಚ್ಚರಿ ಆಗಿದೆ. ರಾಮ್ ಗೋಪಾಲ್ ವರ್ಮಾ ಅವರು ಮಲಯಾಳಂ ಚಿತ್ರರಂಗವನ್ನು ಹೊಗಳಿದ್ದಾರೆ.  

‘ಮಲಯಾಳಂ ಇಂಡಸ್ಟ್ರಿ ಎಂದರೆ ಬ್ಲ್ಯೂ ಸಿನಿಮಾಗಳು ಎನ್ನುವ ಕಲ್ಪನೆ ಇತ್ತು’; ರಾಮ್ ಗೋಪಾಲ್ ವರ್ಮಾ
ರಾಮ್ ಗೋಪಾಲ್ ವರ್ಮಾ
ರಾಜೇಶ್ ದುಗ್ಗುಮನೆ
|

Updated on: Aug 05, 2024 | 7:31 AM

Share

ಮಲಯಾಳಂ ಚಿತ್ರರಂಗದ ಬಗ್ಗೆ ಮೊದಲು ಜನರಿಗೆ ಇದ್ದ ಭಾವನೆ ಬೇರೆ. ಮಲ್ಲು ಸಿನಿಮಾಗಳು ಎಂದರೆ ಪಡ್ಡೆಗಳು ಕಣ್ಣರಳಿಸುತ್ತಿದ್ದರು. ಆದರೆ, ಮಲಯಾಳಂ ಚಿತ್ರರಂಗ ಇತ್ತೀಚೆಗೆ ದೊಡ್ಡ ಯಶಸ್ಸು ಕಂಡಿದೆ. ಸಿನಿಮಾಗಳನ್ನು ಹೇಗೆ ಮಾಡಬೇಕು ಎಂಬುದನ್ನು ಇವರಿಂದ ನೋಡಿ ಕಲಿಯಬೇಕಾಗಿದೆ. ಈ ವರ್ಷ ಮಲಯಾಳಂನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳು ಗೆದ್ದಿವೆ. ಈ ಬಗ್ಗೆ ರಾಮ್ ಗೋಪಾಲ್ ವರ್ಮಾ ಮಾತನಾಡಿದ್ದಾರೆ. ಅವರ ಯಶಸ್ಸನ್ನು ಕೊಂಡಾಡಿದ್ದಾರೆ.

ಈ ವರ್ಷ ರಿಲೀಸ್ ಆದ ಪ್ರೇಮುಲು, ಭ್ರಮಯುಗಂ, ಆವೇಶಂ, ಆಡು ಜೀವಿತಂ, ಫ್ಯಾಮಿಲಿ, ಮಂಜುಮ್ಮೇಲ್ ಬಾಯ್ಸ್ ಸೇರಿ ಅನೇಕ ಸಿನಿಮಾಗಳು ಜನ ಮೆಚ್ಚುಗೆ ಪಡೆದಿವೆ. ಈ ಯಶಸ್ಸನ್ನು ನೋಡಿ ಅನೇಕರಿಗೆ ಅಚ್ಚರಿ ಆಗಿದೆ. ರಾಮ್ ಗೋಪಾಲ್ ವರ್ಮಾ ಅವರು ಮಲಯಾಳಂ ಚಿತ್ರರಂಗವನ್ನು ಹೊಗಳಿದ್ದಾರೆ.

‘ಕೆಲವು ಚಿತ್ರಗಳು ಒಂದರ ನಂತರ ಒಂದರಂತೆ ಬಂದು ಎಲ್ಲವನ್ನೂ ಬದಲಾಯಿಸಿದೆ. ಮಲಯಾಳಂ ಸಿನಿಮಾ ಎಂದರೆ ನೀಲಿ ಚಿತ್ರ ಎಂದು ತಿಳಿದ ಕಾಲವೊಂದಿತ್ತು. ಹಿಂದೆ, ನಾನು ವಿಜಯವಾಡದಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದಾಗ ನಾವು ಮಲಯಾಳಂ ಚಲನಚಿತ್ರಗಳನ್ನು ನೋಡುತ್ತಿರಲಿಲ್ಲ. ಏಕೆಂದರೆ ಅವರು ಅಲ್ಲಿ ಬರುವುದೆಲ್ಲ ಅದೇ ರೀತಿಯ (ನೀಲಿ ಚಿತ್ರ) ಸಿನಿಮಾಗಳು ಎನ್ನವು ಅಭಿಪ್ರಾಯ ನಮ್ಮದಾಗಿತ್ತು. ಮಲಯಾಳಂ ಇಂಡಸ್ಟ್ರಿಯಿಂದ ಅತ್ಯುತ್ತಮ ಚಿತ್ರಗಳು ಬರುತ್ತಿವೆ ಎಂದು ನಾವು ಮಾತನಾಡಿಕೊಳ್ಳುತ್ತಿದ್ದೇವೆ. ಆ ಸಮಯದಲ್ಲಿ ಅಂತಹ ಒಳ್ಳೆಯ ಚಿತ್ರಗಳು ಇರಲಿಲ್ಲವೆಂದಲ್ಲ’ ಎಂದಿದ್ದಾರೆ ರಾಮ್ ಗೋಪಾಲ್ ವರ್ಮಾ.

ಇದನ್ನೂ ಓದಿ: ‘ಮಲಯಾಳಂ ರೀತಿಯ ಸಿನಿಮಾ ಮಾಡೋಕೆ ಅವರಿದ್ದಾರೆ, ನಾವು ನಮ್ಮ ಕಥೆ ಹೇಳಬೇಕು’; ರಾಜ್ ಬಿ. ಶೆಟ್ಟಿ

ಮುಂದಿನ 10 ವರ್ಷಗಳಲ್ಲಿ ಚಿತ್ರರಂಗ ಹೇಗಿರಬಹುದು ಎಂದು ಕೇಳಲಾಯಿತು. ಇದಕ್ಕೆ ಅವರು ಉತ್ತರಿಸಲಾರೆ ಎಂದಿದ್ದಾರೆ. ‘ಮುಂದಿನ 6 ತಿಂಗಳಲ್ಲಿ ಏನಾಗುತ್ತದೆ ಎಂದು ಹೇಳೋದೆ ಕಷ್ಟ, ಹೀಗಿರುವಾಗ 10 ವರ್ಷಗಳದ್ದನ್ನು ಹೇಗೆ ಹೇಳಲಿ’ ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?