AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ಧರ್ಮಕ್ಕೆ ಮತಾಂತರ ಆಗಲು ಅಲಿ ಅಕ್ಬರ್​ ನಿರ್ಧಾರ; ಬಲವಾದ ಕಾರಣ ನೀಡಿದ ಖ್ಯಾತ ನಿರ್ದೇಶಕ

Malayalam director Ali Akbar: ಬಿಪಿನ್​ ರಾವತ್​ ನಿಧನಕ್ಕೆ ಸಂಬಂಧಿಸಿದ ಸೋಶಿಯಲ್​ ಮೀಡಿಯಾ ಪೋಸ್ಟ್​ಗಳಿಗೆ ಕೆಲವು ಮುಸ್ಲಿಮರು ಖುಷಿಯ ಎಮೋಜಿಗಳನ್ನು ಬಳಸಿ ಕಮೆಂಟ್​ ಮಾಡಿದ್ದರು. ಅದನ್ನು ಖಂಡಿಸಿ ಅಲಿ ಅಕ್ಬರ್​ ಅವರು ಮತಾಂತರದ ನಿರ್ಧಾರ ತೆಗೆದುಕೊಂಡಿದ್ದಾರೆ.

ಹಿಂದೂ ಧರ್ಮಕ್ಕೆ ಮತಾಂತರ ಆಗಲು ಅಲಿ ಅಕ್ಬರ್​ ನಿರ್ಧಾರ; ಬಲವಾದ ಕಾರಣ ನೀಡಿದ ಖ್ಯಾತ ನಿರ್ದೇಶಕ
ಅಲಿ ಅಕ್ಬರ್
TV9 Web
| Edited By: |

Updated on:Dec 11, 2021 | 2:42 PM

Share

ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಅಲಿ ಅಕ್ಬರ್​ (Ali Akbar) ಅವರು ಹಿಂದೂ ಧರ್ಮಕ್ಕೆ ಮತಾಂತರ ಆಗಲು ನಿರ್ಧರಿಸಿದ್ದಾರೆ. ‘ನಾನು ಮತ್ತು ನನ್ನ ಹೆಂಡತಿ ಹಿಂದೂ ಧರ್ಮಕ್ಕೆ (Hinduism) ಮತಾಂತರ ಆಗುತ್ತೇವೆ. ಇನ್ನೆಂದೂ ನಾವು ಮುಸ್ಲಿಮರಾಗಿ ಮುಂದುವರಿಯುವುದಿಲ್ಲ’ ಎಂದು ಅವರು ಹೇಳಿದ್ದಾರೆ. ಬಿಪಿನ್​ ರಾವತ್​ (Bipin Rawat) ಅವರ ನಿಧನಕ್ಕೆ ಸಂಬಂಧಿಸಿದ ಸೋಶಿಯಲ್​ ಮೀಡಿಯಾ ಪೋಸ್ಟ್​ಗಳಿಗೆ ಕೆಲವು ಮುಸ್ಲಿಮರು ಖುಷಿಯ ಎಮೋಜಿಗಳನ್ನು ಕಮೆಂಟ್​ ಮಾಡಿದ್ದನ್ನು ಖಂಡಿಸಿ ಅಲಿ ಅಕ್ಬರ್​ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಮುಸ್ಲಿಂ ಧರ್ಮದಲ್ಲಿನ ನಂಬಿಕೆಗಳನ್ನು ಕೈ ಬಿಡುವುದಾಗಿ ಅವರು ತಿಳಿಸಿದ್ದಾರೆ.

ಮಿಲಿಟರಿ ಅಧಿಕಾರಿ ಬಿಪಿನ್​ ರಾವತ್​ ಅವರ ಸಾವಿಗೆ ಅಗೌರವ ಸೂಚಿಸಿದ ದೇಶವಿರೋಧಿ ಮುಸ್ಲಿಮರ ಕೃತ್ಯವನ್ನು ಯಾವುದೇ ಮುಸ್ಲಿಂ ನಾಯಕರೂ ಖಂಡಿಸಿಲ್ಲ. ಹಾಗಾಗಿ ಈ ಧರ್ಮದ ಬಗ್ಗೆ ತಮಗೆ ನಂಬಿಕೆ ಉಳಿದಿಲ್ಲ ಎಂದು ಅಲಿ ಅಕ್ಬರ್​ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೇಸ್​ಬುಕ್​ನಲ್ಲಿ ವಿಡಿಯೋ ಹಂಚಿಕೊಳ್ಳುವ ಮೂಲಕ ಈ ವಿಚಾರವನ್ನು ಅವರು ತಿಳಿಸಿದ್ದಾರೆ.

‘ಹುಟ್ಟಿನಿಂದ ನಾನು ಪಡೆದ ಗುರುತನ್ನು ಇಂದು ತ್ಯಜಿಸುತ್ತಿದ್ದೇನೆ. ಇಂದಿನಿಂದ ನಾನು ಮುಸ್ಲಿಂ ಅಲ್ಲ. ಇಂದಿನಿಂದ ನಾನು ಭಾರತೀಯ. ಭಾರತದ ವಿರುದ್ಧ ನಗುವ ಎಮೋಜಿಗಳನ್ನು ಪೋಸ್ಟ್​ ಮಾಡಿದ ಜನರಿಗೆ ಇದೇ ನನ್ನ ಉತ್ತರ’ ಎಂದು ಅಲಿ ಅಕ್ಬರ್​ ಹೇಳಿದ್ದಾರೆ. ಅಲಿ ಅಕ್ಬರ್ ಮಾಡಿರುವ ಈ ಪೋಸ್ಟ್​ಗೆ ಅನೇಕರು ಬೆಂಬಲ ಸೂಚಿಸಿದ್ದಾರೆ. ಅದೇ ರೀತಿ ಕೆಲವು ಮುಸ್ಲಿಮರಿಂದ ವಿರೋಧ ಕೂಡ ವ್ಯಕ್ತವಾಗಿದೆ. ಕೆಲವರು ಅವಾಚ್ಯ ಶಬ್ಧಗಳಿಂದ ಅಲಿ ಅಕ್ಬರ್​ ಅವರನ್ನು ನಿಂದಿಸಿದ್ದಾರೆ. ಅಂಥವರಿಗೆ ಅದೇ ರೀತಿಯ ಭಾಷೆಯಲ್ಲಿ ಅಲಿ ಅಕ್ಬರ್​ ಉತ್ತರ ನೀಡಿದ್ದಾರೆ.

ಈ ವಿಡಿಯೋ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಫೇಸ್​ಬುಕ್​ನಿಂದ ಅದು ಕಾಣೆ ಆಗಿದೆ. ಬಳಿಕ ವಾಟ್ಸಪ್​ ಮೂಲಕ ವೈರಲ್​ ಆಗಿದೆ. ಬಿಪಿನ್​ ರಾವತ್ ಅವರ ಸಾವನ್ನು ಸಂಭ್ರಮಿಸುವವರನ್ನು ಪತ್ತೆ ಹಚ್ಚಿ ಸೂಕ್ತ ಶಿಕ್ಷೆ ನೀಡಬೇಕು ಎಂದು ಅಲಿ ಅಕ್ಬರ್​ ಅವರು ಆಗ್ರಹಿಸಿದ್ದಾರೆ.

ಇದನ್ನೂ ಓದಿ:

ಹರಿದ್ವಾರದಲ್ಲಿ ಬಿಪಿನ್​ ರಾವತ್​ ಚಿತಾಭಸ್ಮ ವಿಸರ್ಜನೆ; ಸಿಡಿಎಸ್​ ಸ್ಮರಣಾರ್ಥ ಉತ್ತರಾಖಂಡ್​​ನಲ್ಲಿ ಶಹೀದ್​ ಸೈನ್ಯ ಧಾಮ ನಿರ್ಮಾಣ

ಅಂದು ಪಾಕ್​ ಸೇನಾ ಮುಖ್ಯಸ್ಥ ಬಜ್ವಾರನ್ನು ತಬ್ಬಿದ್ದ ನವಜೋತ್​ ಸಿಂಗ್ ಸಿಧು, ಇಂದು ಬಿಪಿನ್​ ರಾವತ್​ ನಿಧನಕ್ಕೆ ಸಂತಾಪ ಸೂಚಿಸಿಲ್ಲ-ಬಿಜೆಪಿ ಆಕ್ಷೇಪ

Published On - 9:54 am, Sat, 11 December 21

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು