AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Joseph Manu: ನಿರ್ದೇಶಿಸಿದ ಮೊದಲ ಸಿನಿಮಾ ರಿಲೀಸ್ ಸಂದರ್ಭದಲ್ಲೇ ನಿಧನ ಹೊಂದಿದ ಡೈರೆಕ್ಟರ್

ಜೊಸೆಫ್ ಮನು ಅವರಿಗೆ ನಿರ್ದೇಶಕನಾಗಬೇಕು ಎನ್ನುವ ಆಸೆ ಇತ್ತು. ಅವರ ಆಸೆ ಈಡೇರುವುದರಲ್ಲಿತ್ತು. ‘ನಾನ್ಸಿ ರಾಣಿ’ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು.

Joseph Manu: ನಿರ್ದೇಶಿಸಿದ ಮೊದಲ ಸಿನಿಮಾ ರಿಲೀಸ್ ಸಂದರ್ಭದಲ್ಲೇ ನಿಧನ ಹೊಂದಿದ ಡೈರೆಕ್ಟರ್
ಜೊಸೆಫ್
ರಾಜೇಶ್ ದುಗ್ಗುಮನೆ
|

Updated on:Feb 27, 2023 | 10:45 AM

Share

ಮಲಯಾಳಂ ನಿರ್ದೇಶಕ ಜೊಸೆಫ್​ ಮನು ಜೇಮ್ಸ್ (Joseph Manu James)​ ಅವರು ಸಣ್ಣ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 31 ವರ್ಷ ವಯಸ್ಸಾಗಿತ್ತು. ಹೆಪಟೈಟಿಸ್​​ನಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅವರ ನಿರ್ದೇಶನದ ಮೊದಲ ಸಿನಿಮಾ ‘ನಾನ್ಸಿ ರಾಣಿ’ ಸಿನಿಮಾ (Nancy Rani) ಇನ್ನೇನು ರಿಲೀಸ್ ಆಗುವುದರಲ್ಲಿತ್ತು. ಅವರ ನಿಧನಕ್ಕೆ ಕುಟುಂಬದವರು, ಆಪ್ತರು ಹಾಗೂ ಸಿನಿಮಾ ತಂಡದವರು ಸಂತಾಪ ಸೂಚಿಸಿದ್ದಾರೆ.

ಜೊಸೆಫ್ ಮನು ಅವರಿಗೆ ನಿರ್ದೇಶಕನಾಗಬೇಕು ಎನ್ನುವ ಆಸೆ ಇತ್ತು. ಅವರ ಆಸೆ ಈಡೇರುವುದರಲ್ಲಿತ್ತು. ‘ನಾನ್ಸಿ ರಾಣಿ’ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದರು. ಈ ಚಿತ್ರದಲ್ಲಿ ಅರ್ಜುನ್ ಅಶೋಕನ್, ಶ್ರೀನಿವಾಸನ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ರಿಲೀಸ್​ ದಿನಾಂಕಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ ಅವರು ಮೃತಪಟ್ಟಿರುವುದು ಬೇಸರದ ವಿಚಾರ. ‘ನಾನ್ಸಿ ರಾಣಿ’ ಚಿತ್ರದಲ್ಲಿ ನಟಿಸಿರುವ ಅಜು ವರ್ಗೀಶ್ ಮೊದಲಾದವರು ಜೊಸೆಫ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.  ‘ಬೇಗ ತೆರಳಿದೆ ಸಹೋದರ. ಪ್ರಾರ್ಥನೆ’ ಎಂದು ವರ್ಗೀಶ್ ಬರೆದುಕೊಂಡಿದ್ದಾರೆ.

ಜೊಸೆಫ್ ಮನು ಜೇಮ್ಸ್ ಅವರು ಚಿತ್ರರಂಗಕ್ಕೆ ಬಾಲ ಕಲಾವಿದನಾಗಿ ಕಾಲಿಟ್ಟರು. ‘ಐ ಆ್ಯಮ್ ಕ್ಯೂರಿಯಸ್’ ಚಿತ್ರದಲ್ಲಿ ಅವರು ನಟಿಸಿದರು. ಸಬು ಜೇಮ್ಸ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದರು. ಮಲಯಾಳಂ, ಕನ್ನಡ ಹಾಗೂ ಹಿಂದಿ ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಅವರು ಕೆಲಸ ಮಾಡಿದರು. ಭಾನುವಾರ (ಫೆ.27) ಜೊಸೆಫ್​ ಅಂತ್ಯಕ್ರಿಯೆ ನಡೆದಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಮಲಯಾಳಂ ಕೋಲ್ಡ್ ಕೇಸ್ ಸಿನಿಮಾ ಮಾದರಿಯಲ್ಲಿ ಶವ ಪತ್ತೆ: ಮರದ ಮೇಲೆ ಮಹಿಳೆಯ ತಲೆ ಬುರುಡೆ

ಇತ್ತೀಚೆಗೆ ಚಿತ್ರರಂಗಕ್ಕೆ ಒಂದಾದಮೇಲೆ ಒಂದರಂತೆ ಶಾಕಿಂಗ್ ಸುದ್ದಿಗಳು ಎದುರಾಗುತ್ತಲೇ ಇವೆ. ಅನೇಕರನ್ನು ಚಿತ್ರರಂಗ ಕಳೆದುಕೊಳ್ಳುತ್ತಿದೆ. ಚಿತ್ರರಂಗದಲ್ಲಿ ಒಳ್ಳೆಯ ಸಿನಿಮಾಗಳನ್ನು ನೀಡಬೇಕು ಎಂದು ಕನಸು ಇಟ್ಟುಕೊಂಡಿದ್ದ ಜೊಸೆಫ್ ಅವರು ಸಣ್ಣ ವಯಸ್ಸಿಗೆ ನಿಧನ ಹೊಂದಿದ್ದು ನಿಜಕ್ಕೂ ದುಃಖದ ವಿಚಾರ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:44 am, Mon, 27 February 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!