AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪಂದನಾ ನಿಧನದ ಬಳಿಕ ಚಿತ್ರರಂಗಕ್ಕೆ ಮತ್ತೊಂದು ಶಾಕ್​; ಹೃದಯಾಘಾತದಿಂದ ಖ್ಯಾತ ನಿರ್ದೇಶಕ ಸಿದ್ಧಿಕಿ ಸ್ಥಿತಿ ಗಂಭೀರ

Siddique Ismail: ‘ಗಾಡ್​ಫಾದರ್​’, ‘ಕಾಬೂಲಿವಾಲಾ’ ಸೇರಿದಂತೆ ಅನೇಕ ಗಮನಾರ್ಹ ಸಿನಿಮಾಗಳಿಗೆ ನಿರ್ದೇಶನ ಮಾಡಿದ ಸಿದ್ಧಿಕಿ ಅವರಿಗೆ ಸೋಮವಾರ (ಆ.7) ಹೃದಯಾಘಾತ ಆಗಿದೆ. ಅವರ ಪರಿಸ್ಥಿತಿ ಗಂಭೀರವಾಗಿದ್ದು, ಹೆಲ್ತ್​ ಅಪ್​ಡೇಟ್​ಗಾಗಿ ನಿರೀಕ್ಷಿಸಲಾಗುತ್ತಿದೆ.

ಸ್ಪಂದನಾ ನಿಧನದ ಬಳಿಕ ಚಿತ್ರರಂಗಕ್ಕೆ ಮತ್ತೊಂದು ಶಾಕ್​; ಹೃದಯಾಘಾತದಿಂದ ಖ್ಯಾತ ನಿರ್ದೇಶಕ ಸಿದ್ಧಿಕಿ ಸ್ಥಿತಿ ಗಂಭೀರ
ಮಲಯಾಳಂ ನಿರ್ದೇಶಕ ಸಿದ್ಧಿಕಿ
ಮದನ್​ ಕುಮಾರ್​
|

Updated on: Aug 07, 2023 | 10:24 PM

Share

ಹೃದಯಾಘಾತ ಪ್ರಕರಣಗಳು ಪದೇಪದೇ ವರದಿ ಆಗುತ್ತಿರುವುದು ಆತಂಕಕ್ಕೆ ಕಾರಣ ಆಗಿದೆ. ವಿಜಯ್​ ರಾಘವೇಂದ್ರ ಅವರ ಪತ್ನಿ ಸ್ಪಂದನಾ (Spandana Vijay Raghavendra) ಅವರು ಹೃದಯಾಘಾತದಿಂದ ಮೃತಪಟ್ಟ ವಿಚಾರ ಎಲ್ಲರಿಗೂ ನೋವುಂಟು ಮಾಡಿದೆ. ಅದರ ಬೆನ್ನಲ್ಲೇ ಚಿತ್ರರಂಗಕ್ಕೆ ಮತ್ತೊಂದು ಶಾಕಿಂಗ್​ ಸುದ್ದಿ ಕೇಳಿಬಂದಿದೆ. ಮಲಯಾಳಂ ಚಿತ್ರರಂಗದ ಖ್ಯಾತ ನಿರ್ದೇಶಕ ಸಿದ್ಧಿಕಿ (Malayalam Director Siddique) ಅವರಿಗೂ ಇಂದು (ಆಗಸ್ಟ್​ 07) ಹೃದಯಾಘಾತ (Heart Attack) ಆಗಿದೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅನೇಕ ಗಮನಾರ್ಹ ಸಿನಿಮಾಗಳಿಗೆ ನಿರ್ದೇಶನ ಮಾಡಿರುವ ಖ್ಯಾತಿ ಸಿದ್ಧಿಕಿ ಅವರಿಗೆ ಇದೆ. ಈಗ ಅವರಿಗೆ 69 ವರ್ಷ ವಯಸ್ಸಾಗಿದ್ದು, ಹೃದಯಾಘಾತದ ಬಳಿಕ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿ ಆಗಿದೆ.

ಹಲವು ವರ್ಷಗಳಿಂದ ಸಿದ್ಧಿಕಿ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಗೆಳೆಯ ಲಾಲ್​ ಜೊತೆ ಸೇರಿ ಅವರು ಅನೇಕ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದಾರೆ. ಸಿದ್ಧಿಕಿ-ಲಾಲ್​ ಎಂದೇ ಖ್ಯಾತರಾದ ಅವರಿಬ್ಬರು ಜಂಟಿಯಾಗಿ ಅನೇಕ ಸಿನಿಮಾಗಳಿಗೆ ಕಥೆ-ಚಿತ್ರಕಥೆಯನ್ನೂ ಬರೆದಿದ್ದಾರೆ. ಸಿದ್ಧಿಕಿ ಅವರಿಗೆ ಹೃದಯಾಘಾತ ಆಗಿರುವ ಸುದ್ದಿ ತಿಳಿದು ಅವರ ಅಭಿಮಾನಿಗಳಿಗೆ ಆತಂಕ ಆಗಿದೆ. ಅವರ ಹೆಲ್ತ್​ ಅಪ್​ಡೇಟ್​ ತಿಳಿಯಲು ಎಲ್ಲರೂ ಕಾಯುತ್ತಿದ್ದಾರೆ. ಸಿದ್ಧಿಕಿ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಪ್ತರು ಮತ್ತು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಇದನ್ನೂ ಓದಿ: ರಿಲೇ ಓಟದಲ್ಲಿ ದ್ವಿತೀಯ ಸ್ಥಾನ ಗೆದ್ದ ಕೆಲವೇ ನಿಮಿಷಗಳಲ್ಲಿ 15 ವರ್ಷದ ಬಾಲಕ ಹೃದಯಾಘಾತಕ್ಕೆ ಬಲಿ

ಕೊಚ್ಚಿಯ ಆಸ್ಪತ್ರೆಯಲ್ಲಿ ಸಿದ್ಧಿಕಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮಲಯಾಳಂನ ‘ರಾಮ್​ಜಿ ರಾವ್​ ಸ್ಪೀಕಿಂಗ್​’, ‘ಇನ್​ ಹರಿಹರ್​ ನಗರ್​’, ‘ಗಾಡ್​ಫಾದರ್​’, ‘ವಿಯಾಟ್ನಾಂ ಕಾಲೋನಿ’, ‘ಕಾಬೂಲಿವಾಲಾ’ ಮುಂತಾದ ಸಿನಿಮಾಗಳಿಗೆ ಸಿದ್ಧಿಕಿ ನಿರ್ದೇಶನ ಮಾಡಿದ್ದಾರೆ. ಸಿದ್ಧಿಕಿ ಇಸ್ಮಾಯಿಲ್​ ಎಂಬುದು ಅವರ ಪೂರ್ಣ ಹೆಸರು. ನಿರ್ದೇಶನದ ಜೊತೆಗೆ ಕೆಲವು ಸಿನಿಮಾಗಳಲ್ಲಿ ಅವರು ಅತಿಥಿ ಪಾತ್ರ ಮಾಡುವ ಮೂಲಕವೂ ಪ್ರೇಕ್ಷಕರಿಗೆ ಪರಿಚಿತರಾಗಿದ್ದಾರೆ.

ಇದನ್ನೂ ಓದಿ: Spandana Passed Away: ನಟ ವಿಜಯ್ ರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ನಿಧನ

ಕಿರುತೆರೆಯಲ್ಲೂ ಸಿದ್ಧಿಕಿ ಅವರು ಸಕ್ರಿಯರಾಗಿದ್ದರು. ಅನೇಕ ರಿಯಾಲಿಟಿ ಶೋಗಳಲ್ಲಿ ಅವರು ಜಡ್ಜ್​ ಆಗಿ ಕಾಣಿಸಿಕೊಳ್ಳುತ್ತಿದ್ದರು. ಆ ಮೂಲಕ ಟಿವಿ ಪ್ರೇಕ್ಷಕರಿಗೂ ಅವರು ಹೆಚ್ಚು ಕನೆಕ್ಟ್​ ಆಗಿದ್ದಾರೆ. ಸಿದ್ಧಿಕಿ ಅವರು ಕೊನೆಯದಾಗಿ ನಿರ್ದೇಶನ ಮಾಡಿದ್ದು ಮೋಹನ್​ಲಾಲ್​ ನಟನೆಯ ‘ಬಿಗ್​ ಬ್ರದರ್’ ಚಿತ್ರಕ್ಕೆ. ಆ ಸಿನಿಮಾ 2020ರಲ್ಲಿ ತೆರೆಕಂಡಿತ್ತು. ಈಗ ಸಿದ್ಧಿಕಿ ಅವರಿಗೆ ಹೃದಯಾಘಾತವಾಗಿದ್ದು, ಪರಿಸ್ಥಿತಿ ಗಂಭೀರವಾಗಿದೆ. ಅವರ ಆರೋಗ್ಯಕ್ಕಾಗಿ ಸೆಲೆಬ್ರಿಟಿಗಳು, ಆಪ್ತರು, ಅಭಿಮಾನಿಗಳು ಮತ್ತು ಕುಟುಂಬದವರು ಪ್ರಾರ್ಥಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ