AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲಯಾಳಂನ ಈ ಸೂಪರ್ ಹಿಟ್ ಕ್ರೈಮ್ ಥ್ರಿಲ್ಲರ್ ಸಿನಿಮಾ ಒಟಿಟಿಗೆ; ಕನ್ನಡದಲ್ಲೂ ಲಭ್ಯ

ಜನವರಿ 9ರಂದು ಬಿಡುಗಡೆಯಾದ ಮಲಯಾಳಂ ಕ್ರೈಮ್ ಥ್ರಿಲ್ಲರ್ ಚಿತ್ರವು 8.8 ರೇಟಿಂಗ್‌ನೊಂದಿಗೆ ಭಾರಿ ಯಶಸ್ಸು ಕಂಡಿತು. ಈಗ ಈ ಚಿತ್ರವು ಮಲಯಾಳಂ, ಕನ್ನಡ, ತೆಲುಗು ಮತ್ತು ಹಿಂದಿ ಭಾಷೆಗಳಲ್ಲಿ ಸೋನಿಲಿವ್‌ನಲ್ಲಿ ಮಾರ್ಚ್ 7 ರಿಂದ ಲಭ್ಯವಾಗಲಿದೆ. ಆಸಿಫ್ ಅಲಿ ಮತ್ತು ಅನಸ್ವರ ರಂಜನ್ ನಟಿಸಿರುವ ಈ ಚಿತ್ರವು ಕೊಲೆಗಳ ಸರಣಿಯ ಮೇಲಿದೆ.

ಮಲಯಾಳಂನ ಈ ಸೂಪರ್ ಹಿಟ್ ಕ್ರೈಮ್ ಥ್ರಿಲ್ಲರ್ ಸಿನಿಮಾ ಒಟಿಟಿಗೆ; ಕನ್ನಡದಲ್ಲೂ ಲಭ್ಯ
ಮಲಯಾಳಂ ಸಿನಿಮಾ ಪೋಸ್ಟರ್
ರಾಜೇಶ್ ದುಗ್ಗುಮನೆ
|

Updated on: Mar 04, 2025 | 7:32 AM

Share

ಮಲಯಾಳಂನಲ್ಲಿ ಇತ್ತೀಚೆಗೆ ಸಾಕಷ್ಟು ಚಿತ್ರಗಳು ರಿಲೀಸ್ ಆಗಿ ಹಿಟ್ ಆಗುತ್ತಾ ಇವೆ. ಅದರಲ್ಲೂ ಕ್ರೈಮ್ ಥ್ರಿಲ್ಲರ್ ಚಿತ್ರಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಅವರು ನಿರ್ಮಾಣ ಮಾಡುತ್ತಾ ಇದ್ದಾರೆ. ಈಗ  ಮಲಯಾಳಂನಲ್ಲಿ ಯಶಸ್ಸು ಕಂಡ ಚಿತ್ರವೊಂದು ಒಟಿಟಿಗೆ ಬರೋಕೆ ರೆಡಿ ಆಗಿದೆ. ಮಿಸ್ ಮಾಡದೇ ಈ ಚಿತ್ರವನ್ನು ಒಟಿಟಿಯಲ್ಲಿ ನೋಡಬೇಕು ಎಂಬುದು ಕೆಲವರ ಸಲಹೆ. ಹಾಗಾದರೆ, ಈ ಚಿತ್ರದಲ್ಲಿ ಏನಿದೆ? ಇದಕ್ಕೆ ಸಿಕ್ಕ ರೇಟಿಂಗ್ ಎಷ್ಟು ಎನ್ನುವ ಬಗ್ಗೆ ಇಲ್ಲಿದೆ ಮಾಹಿತಿ.

ಈ ವರ್ಷ ಜನವರಿ 9ರಂದು ಮಲಯಾಳಂನಲ್ಲಿ ‘ರೇಖಾಚಿತ್ರಂ’ ಸಿನಮಾ ರಿಲೀಸ್ ಆಯಿತು. ಆಸಿಫ್ ಅಲಿ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡರೆ, ಅನಸ್ವರ ರಂಜನ್ ನಟಿಯ ಪಾತ್ರದಲ್ಲಿದ್ದಾರೆ. ಮನೋಜ್ ಜಯನ್, ಸಿದ್ದಿಖಿ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ. ಇದು ಪಕ್ಕಾ ಕ್ರೈಮ್ ಥ್ರಿಲ್ಲರ್ ಸಿನಿಮಾ. ಈ ವಿಧದ ಚಿತ್ರಗಳನ್ನು ಇಷ್ಟಪಡುವವರಿಗೆ ಸಿನಿಮಾ ಸಖತ್ ಇಷ್ಟ ಆಗಲಿದೆ.

ಇದನ್ನೂ ಓದಿ
Image
ನಟ ಯಶ್​ಗೆ ಅವಮಾನ ಮಾಡಿದ ಮಲಯಾಳಂ ಸಿನಿಮಾ
Image
ಜೂನ್ 1 ರಿಂದ ಮಲಯಾಳಂ ಚಿತ್ರರಂಗ ಬಂದ್, ಸಂಭಾವನೆಯದ್ದೇ ಸಮಸ್ಯೆ
Image
ಕನ್ನಡದಲ್ಲೂ ಬರ್ತಿದೆ ಮಲಯಾಳಂನ ಹಿಟ್ ಸಿನಿಮಾ; ಹಿಂಸಾತ್ಮಕ ದೃಶ್ಯವೇ ಹೈಲೈಟ್

ಒಂದು ಊರಿನಲ್ಲಿ ಸಾಲು ಸಾಲು ಕೊಲೆಗಳು ನಡೆಯುತ್ತವೆ. ಅದರ ಬೆನ್ನು ಹತ್ತಿ ಹೋಗುತ್ತಾನೆ ಕಥಾ ನಾಯಕ. ಈ ಕೊಲೆಗಳ ಹಿಂದೆ ಇರೋರು ಯಾರು ಎನ್ನುವುದನ್ನು ಹುಡುಕುವ ಪ್ರಯತ್ನದಲ್ಲಿ ಕಥಾ ನಾಯಕ ತನ್ನ ಜೀವನ ಸವೆಸುತ್ತಾನೆ. ಈ ಚಿತ್ರಕ್ಕೆ ಬುಕ್ ಮೈ ಶೋನಲ್ಲಿ 40 ಸಾವಿರಕ್ಕೂ ಅಧಿಕ ಜನ ವೋಟ್ ಮಾಡಿದ್ದು, 8.8 ರೇಟಿಂಗ್ ಸಿಕ್ಕಿದೆ. ಐಎಂಡಿಬಿಯಲ್ಲೂ ಚಿತ್ರಕ್ಕೆ 8+ ರೇಟಿಂಗ್ ಸಿಕ್ಕಿದೆ.

ಇದನ್ನೂ ಓದಿ: ನಟ ಯಶ್​ಗೆ ಅವಮಾನ ಮಾಡಿದ ಮಲಯಾಳಂ ಸಿನಿಮಾ

ಈ ಚಿತ್ರ ಥಿಯೇಟರ್​ನಲ್ಲಿ ಮಲಯಾಳಂ ಭಾಷೆಯಲ್ಲಿ ಮಾತ್ರ ರಿಲೀಸ್ ಆಗಿತ್ತು. ಆದರೆ, ಒಟಿಟಿಯಲ್ಲಿ ಬಿಡುಗಡೆ ಆಗುವಾಗ ಈ ಸಿನಿಮಾ ಮಲಯಾಳಂ, ಕನ್ನಡ, ತೆಲುಗು ಹಾಗೂ ಹಿಂದಿ ಭಾಷೆಯಲ್ಲೂ ಲಭ್ಯವಿದೆ. ಸೋನಿ ಲಿವ್ ಆ್ಯಪ್ ಮೂಲಕ ಈ ಚಿತ್ರವನ್ನು ನೀವು ವೀಕ್ಷಿಸಬಹುದು. ಮಾರ್ಚ್ 7ರಿಂದ ಸಿನಿಮಾ ಪ್ರಸಾರ ಆರಂಭಿಸಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?