AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ರಸ್ತೆ ಅಪಘಾತ; ಖ್ಯಾತ ಕಿರುತೆರೆ ನಟ ನಿಧನ, ಮೂವರ ಸ್ಥಿತಿ ಗಂಭೀರ

Kollam Sudhi Death: ‘ಕಾರು ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ. ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ಕರೆತರಲಾಯಿತು. ಮೂವರ ಸ್ಥಿತಿ ಚಿಂತಾಜನಕ ಆಗಿದ್ದು, ಚಿಕಿತ್ಸೆ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಭೀಕರ ರಸ್ತೆ ಅಪಘಾತ; ಖ್ಯಾತ ಕಿರುತೆರೆ ನಟ ನಿಧನ, ಮೂವರ ಸ್ಥಿತಿ ಗಂಭೀರ
ಸುಧಿ
ರಾಜೇಶ್ ದುಗ್ಗುಮನೆ
|

Updated on:Jun 05, 2023 | 3:06 PM

Share

ಮಲಯಾಳಂನಲ್ಲಿ ಹಾಸ್ಯ ಪಾತ್ರಗಳ ಮೂಲಕ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಗುರುತಿಸಿಕೊಂಡಿದ್ದ ಕೊಲ್ಲಂ ಸುಧಿ (Kollam Sudhi) ಅವರು ನಿಧನ ಹೊಂದಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. ಕಾರು ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಇಂದು (ಜೂನ್ 5) ಮುಂಜಾನೆ ಈ ಅಪಘಾತ ನಡೆದಿದೆ. ಅವರ ಸಾವಿಗೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಅವರ ಅಕಾಲಿಕ ಮರಣವು ಕುಟುಂಬದವರಿಗೆ ಹಾಗೂ ಫ್ಯಾನ್ಸ್​ಗೆ ಅತೀವ ದುಃಖ ತಂದಿದೆ. ಸೋಶಿಯಲ್ ಮೀಡಿಯಾ (Social Media) ಮೂಲಕ ಸಂತಾಪ ಸೂಚಿಸಲಾಗುತ್ತಿದೆ.

ತ್ರಿಶೂರ್ ಸಮೀಪ ಮುಂಜಾನೆ 4.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅವರು ವಡಕರಾದಲ್ಲಿ ಕಾರ್ಯಕ್ರಮ ಒಂದನ್ನು ಮುಗಿಸಿ ಮರಳುತ್ತಿದ್ದರು. ಆಗ ಇವರ ಕಾರು ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಟ್ರಕ್​ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ತೀವ್ರವಾಗಿ ಗಾಯಗೊಂಡ ಕೊಲ್ಲಂ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ.

ಇದನ್ನೂ ಓದಿ: ಅಭಿಷೇಕ್ ಅಂಬರೀಷ್​-ಅವಿವಾ ಮದುವೆಗೆ ಆಗಮಿಸಿದ ರಜನಿಕಾಂತ್; ಇಲ್ಲಿದೆ ಫೋಟೋ ಆಲ್ಬಂ

‘ಕಾರು ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ. ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ಕರೆತರಲಾಯಿತು. ಸುಧಿ ಅವರು ಮೊದಲು ಮೃತಪಟ್ಟರು. ಉಳಿದ ಮೂವರ ಸ್ಥಿತಿ ಚಿಂತಾಜನಕ ಆಗಿದ್ದು, ಚಿಕಿತ್ಸೆ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 83 ವರ್ಷ ವಯಸ್ಸಿನ ನಟನಿಗೆ 29ರ ಪ್ರೇಯಸಿ; ಗರ್ಭಿಣಿ ಆದ ಬಳಿಕ ತಂದೆ ಯಾರೆಂದು ತಿಳಿಯಲು ಪರೀಕ್ಷೆ: ಕಾದಿತ್ತು ಅಚ್ಚರಿ

2015ರಲ್ಲಿ ಸುಧಿ ಚಿತ್ರರಂಗಕ್ಕೆ ಬಂದರು. ಸುಧಿ ಅವರು ಕಿರುತೆರೆಯಲ್ಲಿ ಹೆಚ್ಚು ಗುರುತಿಸಿಕೊಂಡಿದ್ದರು. ಹಾಸ್ಯ ಪಾತ್ರಗಳ ಮೂಲಕ ಅವರು ಗಮನ ಸೆಳೆದಿದ್ದರು. ಸುಧಿ ಅವರು ಸಿನಿಮಾದಲ್ಲೂ ನಟಿಸಿದ್ದಾರೆ. ‘ಕಟ್ಟಪ್ಪನೆಯಿಲೆ ಹೃತಿಕ್ ರೋಷನ್’, ‘ಆ್ಯನ್ ಇಂಟರ್​ನ್ಯಾಷನಲ್​ ಲೋಕಲ್ ಸ್ಟೋರಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.  ಸುಧಿ ಸಾವಿಗೆ ಅವರ ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಸಂತಾಪ ಸೂಚಿಸಿದ್ದಾರೆ. ಅವರನ್ನು ಕಳೆದುಕೊಂಡಿದ್ದು ಫ್ಯಾನ್ಸ್​ಗೆ ದುಃಖ ತಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:37 am, Mon, 5 June 23

ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!