Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೀಕರ ರಸ್ತೆ ಅಪಘಾತ; ಖ್ಯಾತ ಕಿರುತೆರೆ ನಟ ನಿಧನ, ಮೂವರ ಸ್ಥಿತಿ ಗಂಭೀರ

Kollam Sudhi Death: ‘ಕಾರು ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ. ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ಕರೆತರಲಾಯಿತು. ಮೂವರ ಸ್ಥಿತಿ ಚಿಂತಾಜನಕ ಆಗಿದ್ದು, ಚಿಕಿತ್ಸೆ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಭೀಕರ ರಸ್ತೆ ಅಪಘಾತ; ಖ್ಯಾತ ಕಿರುತೆರೆ ನಟ ನಿಧನ, ಮೂವರ ಸ್ಥಿತಿ ಗಂಭೀರ
ಸುಧಿ
Follow us
ರಾಜೇಶ್ ದುಗ್ಗುಮನೆ
|

Updated on:Jun 05, 2023 | 3:06 PM

ಮಲಯಾಳಂನಲ್ಲಿ ಹಾಸ್ಯ ಪಾತ್ರಗಳ ಮೂಲಕ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಗುರುತಿಸಿಕೊಂಡಿದ್ದ ಕೊಲ್ಲಂ ಸುಧಿ (Kollam Sudhi) ಅವರು ನಿಧನ ಹೊಂದಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. ಕಾರು ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಇಂದು (ಜೂನ್ 5) ಮುಂಜಾನೆ ಈ ಅಪಘಾತ ನಡೆದಿದೆ. ಅವರ ಸಾವಿಗೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಅವರ ಅಕಾಲಿಕ ಮರಣವು ಕುಟುಂಬದವರಿಗೆ ಹಾಗೂ ಫ್ಯಾನ್ಸ್​ಗೆ ಅತೀವ ದುಃಖ ತಂದಿದೆ. ಸೋಶಿಯಲ್ ಮೀಡಿಯಾ (Social Media) ಮೂಲಕ ಸಂತಾಪ ಸೂಚಿಸಲಾಗುತ್ತಿದೆ.

ತ್ರಿಶೂರ್ ಸಮೀಪ ಮುಂಜಾನೆ 4.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅವರು ವಡಕರಾದಲ್ಲಿ ಕಾರ್ಯಕ್ರಮ ಒಂದನ್ನು ಮುಗಿಸಿ ಮರಳುತ್ತಿದ್ದರು. ಆಗ ಇವರ ಕಾರು ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಟ್ರಕ್​ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ತೀವ್ರವಾಗಿ ಗಾಯಗೊಂಡ ಕೊಲ್ಲಂ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ.

ಇದನ್ನೂ ಓದಿ: ಅಭಿಷೇಕ್ ಅಂಬರೀಷ್​-ಅವಿವಾ ಮದುವೆಗೆ ಆಗಮಿಸಿದ ರಜನಿಕಾಂತ್; ಇಲ್ಲಿದೆ ಫೋಟೋ ಆಲ್ಬಂ

‘ಕಾರು ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ. ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ಕರೆತರಲಾಯಿತು. ಸುಧಿ ಅವರು ಮೊದಲು ಮೃತಪಟ್ಟರು. ಉಳಿದ ಮೂವರ ಸ್ಥಿತಿ ಚಿಂತಾಜನಕ ಆಗಿದ್ದು, ಚಿಕಿತ್ಸೆ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 83 ವರ್ಷ ವಯಸ್ಸಿನ ನಟನಿಗೆ 29ರ ಪ್ರೇಯಸಿ; ಗರ್ಭಿಣಿ ಆದ ಬಳಿಕ ತಂದೆ ಯಾರೆಂದು ತಿಳಿಯಲು ಪರೀಕ್ಷೆ: ಕಾದಿತ್ತು ಅಚ್ಚರಿ

2015ರಲ್ಲಿ ಸುಧಿ ಚಿತ್ರರಂಗಕ್ಕೆ ಬಂದರು. ಸುಧಿ ಅವರು ಕಿರುತೆರೆಯಲ್ಲಿ ಹೆಚ್ಚು ಗುರುತಿಸಿಕೊಂಡಿದ್ದರು. ಹಾಸ್ಯ ಪಾತ್ರಗಳ ಮೂಲಕ ಅವರು ಗಮನ ಸೆಳೆದಿದ್ದರು. ಸುಧಿ ಅವರು ಸಿನಿಮಾದಲ್ಲೂ ನಟಿಸಿದ್ದಾರೆ. ‘ಕಟ್ಟಪ್ಪನೆಯಿಲೆ ಹೃತಿಕ್ ರೋಷನ್’, ‘ಆ್ಯನ್ ಇಂಟರ್​ನ್ಯಾಷನಲ್​ ಲೋಕಲ್ ಸ್ಟೋರಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.  ಸುಧಿ ಸಾವಿಗೆ ಅವರ ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಸಂತಾಪ ಸೂಚಿಸಿದ್ದಾರೆ. ಅವರನ್ನು ಕಳೆದುಕೊಂಡಿದ್ದು ಫ್ಯಾನ್ಸ್​ಗೆ ದುಃಖ ತಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:37 am, Mon, 5 June 23

ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
ಚಿಕ್ಕಬಳ್ಳಾಪುರದಲ್ಲಿ ಅಗ್ನಿ ಅವಘಡ: ಬಸ್​, ಬೈಕ್​ಗಳು ಬೆಂಕಿಗಾಹುತಿ
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Devotional: ಕಾಲಭೈರವೇಶ್ವರನಿಗೆ ನೈವೇದ್ಯೆ ಹೇಗೆ ಸಮರ್ಪಿಸಬೇಕು?
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
Daily Horoscope: ಈ ರಾಶಿಯವರು ಆರ್ಥಿಕವಾಗಿ ಸ್ವಲ್ಪ ಸಂಕಷ್ಟ ಎದುರಿಸಬಹುದು
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು