ಭೀಕರ ರಸ್ತೆ ಅಪಘಾತ; ಖ್ಯಾತ ಕಿರುತೆರೆ ನಟ ನಿಧನ, ಮೂವರ ಸ್ಥಿತಿ ಗಂಭೀರ

Kollam Sudhi Death: ‘ಕಾರು ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ. ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ಕರೆತರಲಾಯಿತು. ಮೂವರ ಸ್ಥಿತಿ ಚಿಂತಾಜನಕ ಆಗಿದ್ದು, ಚಿಕಿತ್ಸೆ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಭೀಕರ ರಸ್ತೆ ಅಪಘಾತ; ಖ್ಯಾತ ಕಿರುತೆರೆ ನಟ ನಿಧನ, ಮೂವರ ಸ್ಥಿತಿ ಗಂಭೀರ
ಸುಧಿ
Follow us
|

Updated on:Jun 05, 2023 | 3:06 PM

ಮಲಯಾಳಂನಲ್ಲಿ ಹಾಸ್ಯ ಪಾತ್ರಗಳ ಮೂಲಕ ಕಿರುತೆರೆ ಹಾಗೂ ಹಿರಿತೆರೆಯಲ್ಲಿ ಗುರುತಿಸಿಕೊಂಡಿದ್ದ ಕೊಲ್ಲಂ ಸುಧಿ (Kollam Sudhi) ಅವರು ನಿಧನ ಹೊಂದಿದ್ದಾರೆ. ಅವರಿಗೆ 39 ವರ್ಷ ವಯಸ್ಸಾಗಿತ್ತು. ಕಾರು ಅಪಘಾತದಲ್ಲಿ ಅವರು ಮೃತಪಟ್ಟಿದ್ದಾರೆ. ಇಂದು (ಜೂನ್ 5) ಮುಂಜಾನೆ ಈ ಅಪಘಾತ ನಡೆದಿದೆ. ಅವರ ಸಾವಿಗೆ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸಿದ್ದಾರೆ. ಅವರ ಅಕಾಲಿಕ ಮರಣವು ಕುಟುಂಬದವರಿಗೆ ಹಾಗೂ ಫ್ಯಾನ್ಸ್​ಗೆ ಅತೀವ ದುಃಖ ತಂದಿದೆ. ಸೋಶಿಯಲ್ ಮೀಡಿಯಾ (Social Media) ಮೂಲಕ ಸಂತಾಪ ಸೂಚಿಸಲಾಗುತ್ತಿದೆ.

ತ್ರಿಶೂರ್ ಸಮೀಪ ಮುಂಜಾನೆ 4.30ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಅವರು ವಡಕರಾದಲ್ಲಿ ಕಾರ್ಯಕ್ರಮ ಒಂದನ್ನು ಮುಗಿಸಿ ಮರಳುತ್ತಿದ್ದರು. ಆಗ ಇವರ ಕಾರು ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಟ್ರಕ್​ ಗುದ್ದಿದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ತೀವ್ರವಾಗಿ ಗಾಯಗೊಂಡ ಕೊಲ್ಲಂ ಅವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ.

ಇದನ್ನೂ ಓದಿ: ಅಭಿಷೇಕ್ ಅಂಬರೀಷ್​-ಅವಿವಾ ಮದುವೆಗೆ ಆಗಮಿಸಿದ ರಜನಿಕಾಂತ್; ಇಲ್ಲಿದೆ ಫೋಟೋ ಆಲ್ಬಂ

‘ಕಾರು ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿ ಆಗಿದೆ. ಗಾಯಗೊಂಡ ಎಲ್ಲರನ್ನೂ ಆಸ್ಪತ್ರೆಗೆ ಕರೆತರಲಾಯಿತು. ಸುಧಿ ಅವರು ಮೊದಲು ಮೃತಪಟ್ಟರು. ಉಳಿದ ಮೂವರ ಸ್ಥಿತಿ ಚಿಂತಾಜನಕ ಆಗಿದ್ದು, ಚಿಕಿತ್ಸೆ ಮುಂದುವರಿದಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: 83 ವರ್ಷ ವಯಸ್ಸಿನ ನಟನಿಗೆ 29ರ ಪ್ರೇಯಸಿ; ಗರ್ಭಿಣಿ ಆದ ಬಳಿಕ ತಂದೆ ಯಾರೆಂದು ತಿಳಿಯಲು ಪರೀಕ್ಷೆ: ಕಾದಿತ್ತು ಅಚ್ಚರಿ

2015ರಲ್ಲಿ ಸುಧಿ ಚಿತ್ರರಂಗಕ್ಕೆ ಬಂದರು. ಸುಧಿ ಅವರು ಕಿರುತೆರೆಯಲ್ಲಿ ಹೆಚ್ಚು ಗುರುತಿಸಿಕೊಂಡಿದ್ದರು. ಹಾಸ್ಯ ಪಾತ್ರಗಳ ಮೂಲಕ ಅವರು ಗಮನ ಸೆಳೆದಿದ್ದರು. ಸುಧಿ ಅವರು ಸಿನಿಮಾದಲ್ಲೂ ನಟಿಸಿದ್ದಾರೆ. ‘ಕಟ್ಟಪ್ಪನೆಯಿಲೆ ಹೃತಿಕ್ ರೋಷನ್’, ‘ಆ್ಯನ್ ಇಂಟರ್​ನ್ಯಾಷನಲ್​ ಲೋಕಲ್ ಸ್ಟೋರಿ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.  ಸುಧಿ ಸಾವಿಗೆ ಅವರ ಅಭಿಮಾನಿಗಳು ಸೋಶಿಯಲ್ ಮೀಡಿಯಾ ಮೂಲಕ ಸಂತಾಪ ಸೂಚಿಸಿದ್ದಾರೆ. ಅವರನ್ನು ಕಳೆದುಕೊಂಡಿದ್ದು ಫ್ಯಾನ್ಸ್​ಗೆ ದುಃಖ ತಂದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:37 am, Mon, 5 June 23

ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ