AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಕಿರುತೆರೆ ನಟಿ; ಪೊಲೀಸರಿಂದ ತನಿಖೆ

ರೆಂಜುಶಾ ಅವರು ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಪತಿ ಮನೋಜ್ ಜೊತೆ ಫ್ಲಾಟ್​ನಲ್ಲಿ ವಾಸವಾಗಿದ್ದರು. ಮನೋಜ್ ಕೂಡ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ದೇಹದ ಮೇಲೆ ಯಾವುದೇ ಗಾಯ ಇಲ್ಲ. ಹೀಗಾಗಿ, ಇದು ಕೊಲೆ ಅಲ್ಲ, ಆತ್ಮಹತ್ಯೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.  

ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟ ಕಿರುತೆರೆ ನಟಿ; ಪೊಲೀಸರಿಂದ ತನಿಖೆ
ರೆಂಜುಶಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 30, 2023 | 3:24 PM

Share

ಮಲಯಾಳಂ ಕಿರುತೆರೆ ನಟಿ ರೆಂಜುಶಾ ಮೆನನ್ (Renjusha Menon) ಅವರ ಮೃತದೇಹ ಪತ್ತೆ ಆಗಿದೆ. ನಟಿಗೆ 35 ವರ್ಷ ವಯಸ್ಸಾಗಿತ್ತು. ತಿರುವನಂತಪುರದಲ್ಲಿರುವ ತಮ್ಮ ಫ್ಲಾಟ್​ನಲ್ಲಿ ರೆಂಜುಶಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ (ಅಕ್ಟೋಬರ್ 30) ಮುಂಜಾನೆ ಅವರ ಸಾವಿನ ಸುದ್ದಿ ಹೊರಬಿದ್ದಿದೆ. ಇದು ಆತ್ಮಹತ್ಯೆ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆದಾಗ್ಯೂ ಸೆಲೆಬ್ರಿಟಿ ಎನ್ನುವ ಕಾರಣಕ್ಕೆ ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.

ರೆಂಜುಶಾ ಅವರು ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಪತಿ ಮನೋಜ್ ಜೊತೆ ಫ್ಲಾಟ್​ನಲ್ಲಿ ವಾಸವಾಗಿದ್ದರು. ಮನೋಜ್ ಕೂಡ ಕಿರುತೆರೆಯಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ದೇಹದ ಮೇಲೆ ಯಾವುದೇ ಗಾಯ ಇಲ್ಲ. ಹೀಗಾಗಿ, ಇದು ಕೊಲೆ ಅಲ್ಲ, ಆತ್ಮಹತ್ಯೆ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಧಾರಾವಾಹಿ ಹಾಗೂ ಸಿನಿಮಾಗಳಲ್ಲಿ ಪೋಷಕ ಪಾತ್ರಗಳನ್ನು ಮಾಡುವ ಮೂಲಕ ರೆಂಜುಶಾ ಅವರು ಫೇಮಸ್ ಆದರು. ‘ಆನಂದ ರಾಗಮ್’ ಧಾರಾವಾಹಿಯಲ್ಲಿ ಅವರು ಮುಖ್ಯಭೂಮಿಕೆ ನಿರ್ವಹಿಸಿದ್ದರು. ಇದಲ್ಲದೆ, ಹಲವು ಧಾರಾವಾಹಿಗಳಲ್ಲಿ ಅವರು ಮಾಡಿದ ಪಾತ್ರಗಳು ಗಮನ ಸೆಳೆದಿದ್ದವು. ಇನ್ನು, ರಿಯಾಲಿಟಿ ಶೋ ಮೂಲಕವೂ ಅವರು ಫೇಮಸ್ ಆಗಿದ್ದಾರೆ. ಸೆಲೆಬ್ರಿಟಿ ಕುಕಿಂಗ್ ಶೋ, ‘ಸೆಲೆಬ್ರಿಟಿ ಕಿಚನ್ ಮ್ಯಾಜಿಕ್’ನಲ್ಲಿ ಅವರು ಕಾಣಿಸಿದ್ದರು. ‘ಸಿಟಿ ಆಫ್ ಗಾಡ್’ ಮೊದಲಾದ ಸಿನಿಮಾಗಳಲ್ಲಿ ರೆಂಜುಶಾ ನಟಿಸಿದ್ದಾರೆ.

ರೆಂಜುಶಾ ಅವರು ಧಾರಾವಾಹಿಗಳಲ್ಲಿ ನಟಿಸಿದ ಹೊರತಾಗಿಯೂ ಅವರಿಗೆ ಹೇಳಿಕೊಳ್ಳುವಂಥ ಸಂಭಾವನೆ ಬರುತ್ತಿರಲಿಲ್ಲ. ಹೀಗಾಗಿ, ಅವರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು. ಈ ಕಾರಣದಿಂದಲೇ ರೆಂಜುಶಾ ಅವರು ಆತ್ಮಹತ್ಯೆ ಮಾಡಿಕೊಂಡರು ಎಂದು ಕೂಡ ಹೇಳಲಾಗುತ್ತಿದೆ. ಅವರ ಪತಿ ಮನೋಜ್​ ಅವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ. ಯಾವುದಾದರೂ ವಿಚಾರಕ್ಕೆ ಮನಸ್ತಾಪ ಆಗಿತ್ತೇ ಎನ್ನುವ ಬಗ್ಗೆ ಪ್ರಶ್ನೆ ಮಾಡಲಾಗಿದೆ.

ಇದನ್ನೂ ಓದಿ: ಕೇಳಿದ ತಕ್ಷಣ ಸೊಸೆ ‘ಟೀ’ ಕೊಡಲಿಲ್ಲ ಎಂದು ಪೆಟ್ರೋಲ್ ಸುರಿದು ಆತ್ಮಹತ್ಯೆ ಮಾಡಿಕೊಂಡ ಮಾವ

ಚಿತ್ರರಂಗದ ಅನೇಕರು ಆತ್ಮಹತ್ಯೆ ಮಾಡಿಕೊಂಡ ಉದಾಹರಣೆ ಸಾಕಷ್ಟಿದೆ. ಏನಾದರೂ ಸಾಧನೆ ಮಾಡಬೇಕು ಎಂಬ ಕನಸು ಇಟ್ಟುಕೊಂಡು ಅನೇಕರು ಬಣ್ಣದ ಲೋಕಕ್ಕೆ ಬರುತ್ತಾರೆ. ಆದರೆ, ಒಳ್ಳೆಯ ಅವಕಾಶ ಸಿಗದೆ ಒದ್ದಾಡಿದ ಅನೇಕರಿದ್ದಾರೆ. ಕೆಲವರು ಯಶಸ್ಸು ಪಡೆದ ನಂತರ ಸಾಲು ಸಾಲು ಫ್ಲಾಪ್ ನೀಡಿ ವೃತ್ತಿ ಬದಲಿಸಿದ್ದಾರೆ. ರೆಂಜುಶಾ ಕೂಡ ಬಣ್ಣದ ಲೋಕದಲ್ಲಿ ದೊಡ್ಡ ಗೆಲುವು ಕಾಣದೆ ಮೃತಪಟ್ಟಿರುವುದು ದುಃಖದ ವಿಚಾರ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ