AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲೂ ಬರ್ತಿದೆ ಮಲಯಾಳಂನ ಹಿಟ್ ಸಿನಿಮಾ; ಹಿಂಸಾತ್ಮಕ ದೃಶ್ಯವೇ ಹೈಲೈಟ್

ಉನ್ನಿ ಮುಕುಂದನ್ ನಟನೆಯ ‘ಮಾರ್ಕೊ’ ಚಿತ್ರ ಜನವರಿ 31 ರಂದು ಕನ್ನಡದಲ್ಲಿ ಬಿಡುಗಡೆಯಾಗಲಿದೆ. ಮಲಯಾಳಂನಲ್ಲಿ ಯಶಸ್ವಿಯಾದ ಈ ಚಿತ್ರ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲೂ ಬಿಡುಗಡೆಯಾಗಿದೆ. ಚಿತ್ರದಲ್ಲಿ ಹಿಂಸಾತ್ಮಕ ದೃಶ್ಯಗಳಿರುವುದರಿಂದ ವಿವಾದಕ್ಕೀಡಾಗಿದೆ. ಆದರೂ, 100 ಕೋಟಿಗೂ ಅಧಿಕ ಗಳಿಕೆ ಮಾಡಿದ ಚಿತ್ರದ ಒಟಿಟಿ ಹಕ್ಕುಗಳಿಗೆ ಭಾರಿ ಬೇಡಿಕೆಯಿದೆ.

ಕನ್ನಡದಲ್ಲೂ ಬರ್ತಿದೆ ಮಲಯಾಳಂನ ಹಿಟ್ ಸಿನಿಮಾ; ಹಿಂಸಾತ್ಮಕ ದೃಶ್ಯವೇ ಹೈಲೈಟ್
ಮಾರ್ಕೊ
ರಾಜೇಶ್ ದುಗ್ಗುಮನೆ
|

Updated on: Jan 21, 2025 | 2:12 PM

Share

‘ಮಾರ್ಕೊ’ ಸಿನಿಮಾ ಮಲಯಾಳಂ ಚಿತ್ರರಂಗದಲ್ಲಿ ಹೊಸ ಅಲೆಸೃಷ್ಟಿಸಿದ ಸಿನಿಮಾಗಳಲ್ಲಿ ಒಂದು. ಉನ್ನಿ ಮುಕುಂದನ್ ನಟನೆಯ ಈ ಚಿತ್ರ 2024ರ ಡಿಸೆಂಬರ್​ನಲ್ಲಿ ತೆರೆಗೆ ಬಂತು. ಈ ಚಿತ್ರವನ್ನು ನೋಡಿ ಒಂದು ವರ್ಗದ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಈ ಸಿನಿಮಾ ಮೊದಲು ಮೂಲ ಭಾಷೆಯಲ್ಲಿ ರಿಲೀಸ್ ಆಗಿ ಹಿಟ್ ಆಯಿತು. ಆ ಬಳಿಕ ಈ ಚಿತ್ರವನ್ನು ಹಿಂದಿ, ತಮಿಳು ಹಾಗೂ ತೆಲುಗು ಭಾಷೆಯಲ್ಲೂ ರಿಲೀಸ್ ಮಾಡಲಾಯಿತು. ಈಗ ಚಿತ್ರದ ಕನ್ನಡ ವರ್ಷನ್ ರಿಲೀಸ್​ಗೆ ದಿನಾಂಕ ಫಿಕ್ಸ್ ಆಗಿದೆ.

ಉನ್ನಿ ಮುಕುಂದನ್ ನಟನೆಯ ‘ಮಾರ್ಕೊ’ ಚಿತ್ರತಂಡ ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ಇದರಲ್ಲಿ ಜನವರಿ 31ರಂದು ಕನ್ನಡದಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ ಎಂಬ ಮಾಹಿತಿ ನೀಡಲಾಗಿದೆ. ಈ ಚಿತ್ರ ಸ್ಯಾಂಡಲ್​ವುಡ್ ಬಾಕ್ಸ್ ಆಫೀಸ್​ನಲ್ಲಿ ಯಾವ ರೀತಿಯಲ್ಲಿ ಗಳಿಕೆ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಈ ಚಿತ್ರ ‘A’ ಸರ್ಟಿಫಿಕೇಟ್ ಪಡೆದುಕೊಂಡಿದ್ದು, ಸಾಕಷ್ಟು ಹಿಂಸಾತ್ಮಕ ದೃಶ್ಯಗಳು ಇವೆ. ಈ ಕಾರಣಕ್ಕೆ ಒಂದು ವರ್ಗದ ಜನರು ಇದನ್ನು ಇಷ್ಟಪಟ್ಟಿಲ್ಲ.

‘ಅನಿಮಲ್’ ಸಿನಿಮಾದಲ್ಲೂ ಸಾಕಷ್ಟು ಹಿಂಸಾತ್ಮಕ ದೃಶ್ಯಗಳು, ಹೆಣ್ಣುಮಕ್ಕಳಿಗೆ ಬೈಯ್ಯುವ ದೃಶ್ಯಗಳು ಇವೆ. ಇದನ್ನು ಒಂದಷ್ಟು ಜನರು ಇಷ್ಟಪಟ್ಟಿದ್ದು, ವಿಜ್ರಂಭಿಸಿದ್ದಾರೆ. ‘ಮಾರ್ಕೊ’ ಚಿತ್ರವನ್ನು ಕೂಡ ಅನೇಕರು ಇದೇ ವರ್ಗಕ್ಕೆ ಹೋಲಿಕೆ ಮಾಡಿದ್ದಾರೆ. ಈ ಚಿತ್ರ ಕೆಲವರಿಗೆ ಇಷ್ಟವಾಗಿಲ್ಲ. ಈ ಸಿನಿಮಾದಲ್ಲಿ ಅತಿಯಾದ ಹಿಂಸೆ ತೋರಿಸಲಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇದನ್ನೂ ಓದಿ: 100 ಕೋಟಿ ಗಳಿಕೆ, ಆದರೂ ಸಿನಿಮಾಕ್ಕೆ ವಿರೋಧ, ಅಂಥದ್ದೇನಿದೆ ‘ಮಾರ್ಕೊ’ನಲ್ಲಿ

‘ಮಾರ್ಕೊ’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಈ ಕಾರಣಕ್ಕೆ ಚಿತ್ರದ ಒಟಿಟಿ ಹಕ್ಕಿಗೆ ಭಾರೀ ಬೇಡಿಕೆ ಸೃಷ್ಟಿ ಆಗಿದೆ. ಈ ಚಿತ್ರದ ಒಟಿಟಿ ರಿಲೀಸ್ ದಿನಾಂಕ ಇನ್ನೂ ರಿವೀಲ್ ಆಗಿಲ್ಲ. ಈ ಚಿತ್ರವನ್ನು ಹನೀಫ್ ಅದೇನಿ ನಿರ್ದೇಶನ ಮಾಡಿದ್ದು, ಶರೀಫ್ ಮೊಹಮದ್ ಅವರು ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ರವಿ ಬಸ್ರೂರು ಅವರು ಸಂಗೀತ ಸಂಯೋಜನೆ ಮಾಡಿದ್ದು, ಇದು ಅನೇಕರಿಗೆ ಇಷ್ಟ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್