AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲೂ ಬರ್ತಿದೆ ಮಲಯಾಳಂನ ಹಿಟ್ ಸಿನಿಮಾ; ಹಿಂಸಾತ್ಮಕ ದೃಶ್ಯವೇ ಹೈಲೈಟ್

ಉನ್ನಿ ಮುಕುಂದನ್ ನಟನೆಯ ‘ಮಾರ್ಕೊ’ ಚಿತ್ರ ಜನವರಿ 31 ರಂದು ಕನ್ನಡದಲ್ಲಿ ಬಿಡುಗಡೆಯಾಗಲಿದೆ. ಮಲಯಾಳಂನಲ್ಲಿ ಯಶಸ್ವಿಯಾದ ಈ ಚಿತ್ರ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲೂ ಬಿಡುಗಡೆಯಾಗಿದೆ. ಚಿತ್ರದಲ್ಲಿ ಹಿಂಸಾತ್ಮಕ ದೃಶ್ಯಗಳಿರುವುದರಿಂದ ವಿವಾದಕ್ಕೀಡಾಗಿದೆ. ಆದರೂ, 100 ಕೋಟಿಗೂ ಅಧಿಕ ಗಳಿಕೆ ಮಾಡಿದ ಚಿತ್ರದ ಒಟಿಟಿ ಹಕ್ಕುಗಳಿಗೆ ಭಾರಿ ಬೇಡಿಕೆಯಿದೆ.

ಕನ್ನಡದಲ್ಲೂ ಬರ್ತಿದೆ ಮಲಯಾಳಂನ ಹಿಟ್ ಸಿನಿಮಾ; ಹಿಂಸಾತ್ಮಕ ದೃಶ್ಯವೇ ಹೈಲೈಟ್
ಮಾರ್ಕೊ
ರಾಜೇಶ್ ದುಗ್ಗುಮನೆ
|

Updated on: Jan 21, 2025 | 2:12 PM

Share

‘ಮಾರ್ಕೊ’ ಸಿನಿಮಾ ಮಲಯಾಳಂ ಚಿತ್ರರಂಗದಲ್ಲಿ ಹೊಸ ಅಲೆಸೃಷ್ಟಿಸಿದ ಸಿನಿಮಾಗಳಲ್ಲಿ ಒಂದು. ಉನ್ನಿ ಮುಕುಂದನ್ ನಟನೆಯ ಈ ಚಿತ್ರ 2024ರ ಡಿಸೆಂಬರ್​ನಲ್ಲಿ ತೆರೆಗೆ ಬಂತು. ಈ ಚಿತ್ರವನ್ನು ನೋಡಿ ಒಂದು ವರ್ಗದ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಈ ಸಿನಿಮಾ ಮೊದಲು ಮೂಲ ಭಾಷೆಯಲ್ಲಿ ರಿಲೀಸ್ ಆಗಿ ಹಿಟ್ ಆಯಿತು. ಆ ಬಳಿಕ ಈ ಚಿತ್ರವನ್ನು ಹಿಂದಿ, ತಮಿಳು ಹಾಗೂ ತೆಲುಗು ಭಾಷೆಯಲ್ಲೂ ರಿಲೀಸ್ ಮಾಡಲಾಯಿತು. ಈಗ ಚಿತ್ರದ ಕನ್ನಡ ವರ್ಷನ್ ರಿಲೀಸ್​ಗೆ ದಿನಾಂಕ ಫಿಕ್ಸ್ ಆಗಿದೆ.

ಉನ್ನಿ ಮುಕುಂದನ್ ನಟನೆಯ ‘ಮಾರ್ಕೊ’ ಚಿತ್ರತಂಡ ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ಇದರಲ್ಲಿ ಜನವರಿ 31ರಂದು ಕನ್ನಡದಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ ಎಂಬ ಮಾಹಿತಿ ನೀಡಲಾಗಿದೆ. ಈ ಚಿತ್ರ ಸ್ಯಾಂಡಲ್​ವುಡ್ ಬಾಕ್ಸ್ ಆಫೀಸ್​ನಲ್ಲಿ ಯಾವ ರೀತಿಯಲ್ಲಿ ಗಳಿಕೆ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಈ ಚಿತ್ರ ‘A’ ಸರ್ಟಿಫಿಕೇಟ್ ಪಡೆದುಕೊಂಡಿದ್ದು, ಸಾಕಷ್ಟು ಹಿಂಸಾತ್ಮಕ ದೃಶ್ಯಗಳು ಇವೆ. ಈ ಕಾರಣಕ್ಕೆ ಒಂದು ವರ್ಗದ ಜನರು ಇದನ್ನು ಇಷ್ಟಪಟ್ಟಿಲ್ಲ.

‘ಅನಿಮಲ್’ ಸಿನಿಮಾದಲ್ಲೂ ಸಾಕಷ್ಟು ಹಿಂಸಾತ್ಮಕ ದೃಶ್ಯಗಳು, ಹೆಣ್ಣುಮಕ್ಕಳಿಗೆ ಬೈಯ್ಯುವ ದೃಶ್ಯಗಳು ಇವೆ. ಇದನ್ನು ಒಂದಷ್ಟು ಜನರು ಇಷ್ಟಪಟ್ಟಿದ್ದು, ವಿಜ್ರಂಭಿಸಿದ್ದಾರೆ. ‘ಮಾರ್ಕೊ’ ಚಿತ್ರವನ್ನು ಕೂಡ ಅನೇಕರು ಇದೇ ವರ್ಗಕ್ಕೆ ಹೋಲಿಕೆ ಮಾಡಿದ್ದಾರೆ. ಈ ಚಿತ್ರ ಕೆಲವರಿಗೆ ಇಷ್ಟವಾಗಿಲ್ಲ. ಈ ಸಿನಿಮಾದಲ್ಲಿ ಅತಿಯಾದ ಹಿಂಸೆ ತೋರಿಸಲಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇದನ್ನೂ ಓದಿ: 100 ಕೋಟಿ ಗಳಿಕೆ, ಆದರೂ ಸಿನಿಮಾಕ್ಕೆ ವಿರೋಧ, ಅಂಥದ್ದೇನಿದೆ ‘ಮಾರ್ಕೊ’ನಲ್ಲಿ

‘ಮಾರ್ಕೊ’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಈ ಕಾರಣಕ್ಕೆ ಚಿತ್ರದ ಒಟಿಟಿ ಹಕ್ಕಿಗೆ ಭಾರೀ ಬೇಡಿಕೆ ಸೃಷ್ಟಿ ಆಗಿದೆ. ಈ ಚಿತ್ರದ ಒಟಿಟಿ ರಿಲೀಸ್ ದಿನಾಂಕ ಇನ್ನೂ ರಿವೀಲ್ ಆಗಿಲ್ಲ. ಈ ಚಿತ್ರವನ್ನು ಹನೀಫ್ ಅದೇನಿ ನಿರ್ದೇಶನ ಮಾಡಿದ್ದು, ಶರೀಫ್ ಮೊಹಮದ್ ಅವರು ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ರವಿ ಬಸ್ರೂರು ಅವರು ಸಂಗೀತ ಸಂಯೋಜನೆ ಮಾಡಿದ್ದು, ಇದು ಅನೇಕರಿಗೆ ಇಷ್ಟ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​