AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದಲ್ಲೂ ಬರ್ತಿದೆ ಮಲಯಾಳಂನ ಹಿಟ್ ಸಿನಿಮಾ; ಹಿಂಸಾತ್ಮಕ ದೃಶ್ಯವೇ ಹೈಲೈಟ್

ಉನ್ನಿ ಮುಕುಂದನ್ ನಟನೆಯ ‘ಮಾರ್ಕೊ’ ಚಿತ್ರ ಜನವರಿ 31 ರಂದು ಕನ್ನಡದಲ್ಲಿ ಬಿಡುಗಡೆಯಾಗಲಿದೆ. ಮಲಯಾಳಂನಲ್ಲಿ ಯಶಸ್ವಿಯಾದ ಈ ಚಿತ್ರ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲೂ ಬಿಡುಗಡೆಯಾಗಿದೆ. ಚಿತ್ರದಲ್ಲಿ ಹಿಂಸಾತ್ಮಕ ದೃಶ್ಯಗಳಿರುವುದರಿಂದ ವಿವಾದಕ್ಕೀಡಾಗಿದೆ. ಆದರೂ, 100 ಕೋಟಿಗೂ ಅಧಿಕ ಗಳಿಕೆ ಮಾಡಿದ ಚಿತ್ರದ ಒಟಿಟಿ ಹಕ್ಕುಗಳಿಗೆ ಭಾರಿ ಬೇಡಿಕೆಯಿದೆ.

ಕನ್ನಡದಲ್ಲೂ ಬರ್ತಿದೆ ಮಲಯಾಳಂನ ಹಿಟ್ ಸಿನಿಮಾ; ಹಿಂಸಾತ್ಮಕ ದೃಶ್ಯವೇ ಹೈಲೈಟ್
ಮಾರ್ಕೊ
ರಾಜೇಶ್ ದುಗ್ಗುಮನೆ
|

Updated on: Jan 21, 2025 | 2:12 PM

Share

‘ಮಾರ್ಕೊ’ ಸಿನಿಮಾ ಮಲಯಾಳಂ ಚಿತ್ರರಂಗದಲ್ಲಿ ಹೊಸ ಅಲೆಸೃಷ್ಟಿಸಿದ ಸಿನಿಮಾಗಳಲ್ಲಿ ಒಂದು. ಉನ್ನಿ ಮುಕುಂದನ್ ನಟನೆಯ ಈ ಚಿತ್ರ 2024ರ ಡಿಸೆಂಬರ್​ನಲ್ಲಿ ತೆರೆಗೆ ಬಂತು. ಈ ಚಿತ್ರವನ್ನು ನೋಡಿ ಒಂದು ವರ್ಗದ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ. ಈ ಸಿನಿಮಾ ಮೊದಲು ಮೂಲ ಭಾಷೆಯಲ್ಲಿ ರಿಲೀಸ್ ಆಗಿ ಹಿಟ್ ಆಯಿತು. ಆ ಬಳಿಕ ಈ ಚಿತ್ರವನ್ನು ಹಿಂದಿ, ತಮಿಳು ಹಾಗೂ ತೆಲುಗು ಭಾಷೆಯಲ್ಲೂ ರಿಲೀಸ್ ಮಾಡಲಾಯಿತು. ಈಗ ಚಿತ್ರದ ಕನ್ನಡ ವರ್ಷನ್ ರಿಲೀಸ್​ಗೆ ದಿನಾಂಕ ಫಿಕ್ಸ್ ಆಗಿದೆ.

ಉನ್ನಿ ಮುಕುಂದನ್ ನಟನೆಯ ‘ಮಾರ್ಕೊ’ ಚಿತ್ರತಂಡ ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ಇದರಲ್ಲಿ ಜನವರಿ 31ರಂದು ಕನ್ನಡದಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ ಎಂಬ ಮಾಹಿತಿ ನೀಡಲಾಗಿದೆ. ಈ ಚಿತ್ರ ಸ್ಯಾಂಡಲ್​ವುಡ್ ಬಾಕ್ಸ್ ಆಫೀಸ್​ನಲ್ಲಿ ಯಾವ ರೀತಿಯಲ್ಲಿ ಗಳಿಕೆ ಮಾಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಈ ಚಿತ್ರ ‘A’ ಸರ್ಟಿಫಿಕೇಟ್ ಪಡೆದುಕೊಂಡಿದ್ದು, ಸಾಕಷ್ಟು ಹಿಂಸಾತ್ಮಕ ದೃಶ್ಯಗಳು ಇವೆ. ಈ ಕಾರಣಕ್ಕೆ ಒಂದು ವರ್ಗದ ಜನರು ಇದನ್ನು ಇಷ್ಟಪಟ್ಟಿಲ್ಲ.

‘ಅನಿಮಲ್’ ಸಿನಿಮಾದಲ್ಲೂ ಸಾಕಷ್ಟು ಹಿಂಸಾತ್ಮಕ ದೃಶ್ಯಗಳು, ಹೆಣ್ಣುಮಕ್ಕಳಿಗೆ ಬೈಯ್ಯುವ ದೃಶ್ಯಗಳು ಇವೆ. ಇದನ್ನು ಒಂದಷ್ಟು ಜನರು ಇಷ್ಟಪಟ್ಟಿದ್ದು, ವಿಜ್ರಂಭಿಸಿದ್ದಾರೆ. ‘ಮಾರ್ಕೊ’ ಚಿತ್ರವನ್ನು ಕೂಡ ಅನೇಕರು ಇದೇ ವರ್ಗಕ್ಕೆ ಹೋಲಿಕೆ ಮಾಡಿದ್ದಾರೆ. ಈ ಚಿತ್ರ ಕೆಲವರಿಗೆ ಇಷ್ಟವಾಗಿಲ್ಲ. ಈ ಸಿನಿಮಾದಲ್ಲಿ ಅತಿಯಾದ ಹಿಂಸೆ ತೋರಿಸಲಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಇದನ್ನೂ ಓದಿ: 100 ಕೋಟಿ ಗಳಿಕೆ, ಆದರೂ ಸಿನಿಮಾಕ್ಕೆ ವಿರೋಧ, ಅಂಥದ್ದೇನಿದೆ ‘ಮಾರ್ಕೊ’ನಲ್ಲಿ

‘ಮಾರ್ಕೊ’ ಚಿತ್ರ ಬಾಕ್ಸ್ ಆಫೀಸ್​ನಲ್ಲಿ 100 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎನ್ನಲಾಗಿದೆ. ಈ ಕಾರಣಕ್ಕೆ ಚಿತ್ರದ ಒಟಿಟಿ ಹಕ್ಕಿಗೆ ಭಾರೀ ಬೇಡಿಕೆ ಸೃಷ್ಟಿ ಆಗಿದೆ. ಈ ಚಿತ್ರದ ಒಟಿಟಿ ರಿಲೀಸ್ ದಿನಾಂಕ ಇನ್ನೂ ರಿವೀಲ್ ಆಗಿಲ್ಲ. ಈ ಚಿತ್ರವನ್ನು ಹನೀಫ್ ಅದೇನಿ ನಿರ್ದೇಶನ ಮಾಡಿದ್ದು, ಶರೀಫ್ ಮೊಹಮದ್ ಅವರು ನಿರ್ಮಾಣ ಮಾಡಿದ್ದಾರೆ. ಈ ಚಿತ್ರಕ್ಕೆ ರವಿ ಬಸ್ರೂರು ಅವರು ಸಂಗೀತ ಸಂಯೋಜನೆ ಮಾಡಿದ್ದು, ಇದು ಅನೇಕರಿಗೆ ಇಷ್ಟ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್