AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ನಿಂದ ಆರ್ಥಿಕ ಸಂಕಷ್ಟದ ಶಂಕೆ; ಕಿರುತೆರೆ ನಟ ಆತ್ಮಹತ್ಯೆ: ಅನುಮಾನ ಮೂಡಿಸಿದ ಸಾವು

ಖ್ಯಾತ ಸೀರಿಯಲ್​ ನಟ ರಮೇಶ್​ ವಲಿಯಶಾಲ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 2 ದಶಕಗಳಿಂದಲೂ ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ಅವರಿಗೆ 54 ವರ್ಷ ವಯಸ್ಸಾಗಿತ್ತು.

ಲಾಕ್​ಡೌನ್​ನಿಂದ ಆರ್ಥಿಕ ಸಂಕಷ್ಟದ ಶಂಕೆ; ಕಿರುತೆರೆ ನಟ ಆತ್ಮಹತ್ಯೆ: ಅನುಮಾನ ಮೂಡಿಸಿದ ಸಾವು
ರಮೇಶ್​ ವಲಿಯಶಾಲ
TV9 Web
| Edited By: |

Updated on: Sep 12, 2021 | 4:14 PM

Share

ಮಲಯಾಳಂ ಕಿರುತೆರೆಯ ಜನಪ್ರಿಯ ನಟ ರಮೇಶ್​ ವಲಿಯಶಾಲ ಅವರು ನಿಧನರಾಗಿದ್ದಾರೆ. ಹಲವಾರು ಸೀರಿಯಲ್​ಗಳಲ್ಲಿ ನಟಿಸಿ ಫೇಮಸ್​ ಆಗಿದ್ದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶೂಟಿಂಗ್​ ಮುಗಿಸಿ ತಿರುವನಂತಪುರಂನಲ್ಲಿರುವ ತಮ್ಮ ಮನೆಗೆ ಬಂದಿದ್ದ ಅವರು ಶನಿವಾರ (ಸೆ.11) ನೇಣು ಹಾಕಿಕೊಂಡಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ರಮೇಶ್​ ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅವರು ಇಂಥ ನಿರ್ಧಾರ ತೆಗೆದುಕೊಳ್ಳಲು ಕಾರಣ ಏನಿರಬಹುದು ಎಂಬ ಪ್ರಶ್ನೆ ಮೂಡಿದೆ. ಈ ಬಗ್ಗೆ ಪೊಲೀಸರು ವಿಚಾರಣೆ ಆರಂಭಿಸಿದ್ದು, ತನಿಖೆ ಪೂರ್ಣಗೊಂಡ ನಂತರವೇ ಸತ್ಯಾಸತ್ಯತೆ ಹೊರಬರಬೇಕಿದೆ.

ಮೂಲಗಳ ಪ್ರಕಾರ, ರಮೇಶ್​ ಅವರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು. ಕೊರೊನಾ ವೈರಸ್​ನಿಂದ ಜಾರಿಯಾದ ಲಾಕ್​ಡೌನ್​ನಿಂದಾಗಿ ಅವರಿಗೆ ಹಣಕಾಸಿನ ಸಮಸ್ಯೆ ಎದುರಾಗಿತ್ತು. ಆ ಕಾರಣದಿಂದಲೇ ಅವರು ನೇಣಿಗೆ ಶರಣಾಗಿರಬಹುದು ಎಂದು ಪೊಲೀಸ್​ ಮೂಲಗಳು ಅಭಿಪ್ರಾಯಪಟ್ಟಿವೆ. ಐಪಿಸಿ ಸೆಕ್ಷನ್​ 174ರ ಪ್ರಕಾರ (ಅಸಹಜ ಸಾವು) ಕೇಸ್​ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ರಮೇಶ್​ ಅವರು ತಮ್ಮ ಎರಡನೇ ಪತ್ನಿ ಮತ್ತು ಮಗನ ಜೊತೆ ವಲಿಯಶಾಲದ ನಿವಾಸದಲ್ಲಿ ಇರುತ್ತಿದ್ದರು. ಬೆಳಗ್ಗೆ 6.30ರ ಸುಮಾರಿಗೆ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಇರುವುದನ್ನು ಅವರ ಪತ್ನಿ ಮೊದಲು ನೋಡಿದರು. ನಂತರ ಅವರ ಶವನನ್ನು ಮೆಡಿಕಲ್​ ಕಾಲೇಜ್​ ಶವಾಗಾರಕ್ಕೆ ತೆಗೆದುಕೊಂಡು ಹೋಗಲಾಯಿತು.

‘ಪೌರ್ಣಮಿ ತಿಂಗಳ್​’ ಧಾರಾವಾಹಿಯಲ್ಲಿ ರಮೇಶ್​ ಅವರ ಕೊನೆಯದಾಗಿ ನಟಿಸಿದ್ದರು. ಅವರ ಸಾವಿನಿಂದ ಹಲವು ಅನುಮಾನ ಮೂಡಿದೆ. ರಮೇಶ್​ ನಿಧನಕ್ಕೆ ಸೆಲೆಬ್ರಿಟಿಗಳು, ಸ್ನೇಹಿತರು ಮತ್ತು ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ಅವರು ಕಳೆದ 22 ವರ್ಷಗಳಿಂದಲೂ ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದರು. ಹಾಗಾಗಿ ಅವರಿಗೆ ಆರ್ಥಿಕ ಸಂಕಷ್ಟ ಇರಲಿಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

‘ಕೆಲವೇ ವರ್ಷಗಳ ಹಿಂದೆ ರಮೇಶ್​ ಅವರ ಮೊದಲ ಪತ್ನಿ ಕ್ಯಾನ್ಸರ್​ನಿಂದ ಮೃತರಾಗಿದ್ದರು. ಆ ಬಳಿಕ ಅವರಿಗೆ ಒಂಟಿತನ ಕಾಡಲು ಆರಂಭಿಸಿತ್ತು. ಹಾಗಿದ್ದರೂ ಕೂಡ ಆ ಕಷ್ಟಕಾಲವನ್ನು ಅವರು ಧೈರ್ಯದಿಂದ ಎದುರಿಸಿದ್ದರು. ಒಂದು ವೇಳೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿದ್ದರೆ ಆಗಲೇ ಮಾಡಿಕೊಳ್ಳಬೇಕಿತ್ತು. ರಮೇಶ್​ ಅಂಥ ವ್ಯಕ್ತಿ ಆಗಿರಲಿಲ್ಲ’ ಎಂದು ಅವರ ಸ್ನೇಹಿತ ನಟ ಬಾಲಾಜಿ ಶರ್ಮಾ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:

ಬಾಲಮಂದಿರದಲ್ಲಿ ಬಾಲಕಿ ಆತ್ಮಹತ್ಯೆ ಪ್ರಕರಣ: ಡೆತ್ ನೋಟ್ ಆಧರಿಸಿ ಕುಖ್ಯಾತ ರೌಡಿ ಅಶೋಕ್ ಪೈ ಪೊಲೀಸರ ವಶಕ್ಕೆ

Suicide: ಒಂದೇ ಮನೆಯಲ್ಲಿ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ