ಲಾಕ್​ಡೌನ್​ನಿಂದ ಆರ್ಥಿಕ ಸಂಕಷ್ಟದ ಶಂಕೆ; ಕಿರುತೆರೆ ನಟ ಆತ್ಮಹತ್ಯೆ: ಅನುಮಾನ ಮೂಡಿಸಿದ ಸಾವು

| Updated By: ಮದನ್​ ಕುಮಾರ್​

Updated on: Sep 12, 2021 | 4:14 PM

ಖ್ಯಾತ ಸೀರಿಯಲ್​ ನಟ ರಮೇಶ್​ ವಲಿಯಶಾಲ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ 2 ದಶಕಗಳಿಂದಲೂ ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ಅವರಿಗೆ 54 ವರ್ಷ ವಯಸ್ಸಾಗಿತ್ತು.

ಲಾಕ್​ಡೌನ್​ನಿಂದ ಆರ್ಥಿಕ ಸಂಕಷ್ಟದ ಶಂಕೆ; ಕಿರುತೆರೆ ನಟ ಆತ್ಮಹತ್ಯೆ: ಅನುಮಾನ ಮೂಡಿಸಿದ ಸಾವು
ರಮೇಶ್​ ವಲಿಯಶಾಲ
Follow us on

ಮಲಯಾಳಂ ಕಿರುತೆರೆಯ ಜನಪ್ರಿಯ ನಟ ರಮೇಶ್​ ವಲಿಯಶಾಲ ಅವರು ನಿಧನರಾಗಿದ್ದಾರೆ. ಹಲವಾರು ಸೀರಿಯಲ್​ಗಳಲ್ಲಿ ನಟಿಸಿ ಫೇಮಸ್​ ಆಗಿದ್ದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶೂಟಿಂಗ್​ ಮುಗಿಸಿ ತಿರುವನಂತಪುರಂನಲ್ಲಿರುವ ತಮ್ಮ ಮನೆಗೆ ಬಂದಿದ್ದ ಅವರು ಶನಿವಾರ (ಸೆ.11) ನೇಣು ಹಾಕಿಕೊಂಡಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು. ರಮೇಶ್​ ಅವರ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಅವರು ಇಂಥ ನಿರ್ಧಾರ ತೆಗೆದುಕೊಳ್ಳಲು ಕಾರಣ ಏನಿರಬಹುದು ಎಂಬ ಪ್ರಶ್ನೆ ಮೂಡಿದೆ. ಈ ಬಗ್ಗೆ ಪೊಲೀಸರು ವಿಚಾರಣೆ ಆರಂಭಿಸಿದ್ದು, ತನಿಖೆ ಪೂರ್ಣಗೊಂಡ ನಂತರವೇ ಸತ್ಯಾಸತ್ಯತೆ ಹೊರಬರಬೇಕಿದೆ.

ಮೂಲಗಳ ಪ್ರಕಾರ, ರಮೇಶ್​ ಅವರು ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು. ಕೊರೊನಾ ವೈರಸ್​ನಿಂದ ಜಾರಿಯಾದ ಲಾಕ್​ಡೌನ್​ನಿಂದಾಗಿ ಅವರಿಗೆ ಹಣಕಾಸಿನ ಸಮಸ್ಯೆ ಎದುರಾಗಿತ್ತು. ಆ ಕಾರಣದಿಂದಲೇ ಅವರು ನೇಣಿಗೆ ಶರಣಾಗಿರಬಹುದು ಎಂದು ಪೊಲೀಸ್​ ಮೂಲಗಳು ಅಭಿಪ್ರಾಯಪಟ್ಟಿವೆ. ಐಪಿಸಿ ಸೆಕ್ಷನ್​ 174ರ ಪ್ರಕಾರ (ಅಸಹಜ ಸಾವು) ಕೇಸ್​ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ರಮೇಶ್​ ಅವರು ತಮ್ಮ ಎರಡನೇ ಪತ್ನಿ ಮತ್ತು ಮಗನ ಜೊತೆ ವಲಿಯಶಾಲದ ನಿವಾಸದಲ್ಲಿ ಇರುತ್ತಿದ್ದರು. ಬೆಳಗ್ಗೆ 6.30ರ ಸುಮಾರಿಗೆ ಅವರು ನೇಣು ಬಿಗಿದ ಸ್ಥಿತಿಯಲ್ಲಿ ಇರುವುದನ್ನು ಅವರ ಪತ್ನಿ ಮೊದಲು ನೋಡಿದರು. ನಂತರ ಅವರ ಶವನನ್ನು ಮೆಡಿಕಲ್​ ಕಾಲೇಜ್​ ಶವಾಗಾರಕ್ಕೆ ತೆಗೆದುಕೊಂಡು ಹೋಗಲಾಯಿತು.

‘ಪೌರ್ಣಮಿ ತಿಂಗಳ್​’ ಧಾರಾವಾಹಿಯಲ್ಲಿ ರಮೇಶ್​ ಅವರ ಕೊನೆಯದಾಗಿ ನಟಿಸಿದ್ದರು. ಅವರ ಸಾವಿನಿಂದ ಹಲವು ಅನುಮಾನ ಮೂಡಿದೆ. ರಮೇಶ್​ ನಿಧನಕ್ಕೆ ಸೆಲೆಬ್ರಿಟಿಗಳು, ಸ್ನೇಹಿತರು ಮತ್ತು ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸುತ್ತಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ ಅವರು ಕಳೆದ 22 ವರ್ಷಗಳಿಂದಲೂ ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದರು. ಹಾಗಾಗಿ ಅವರಿಗೆ ಆರ್ಥಿಕ ಸಂಕಷ್ಟ ಇರಲಿಲ್ಲ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

‘ಕೆಲವೇ ವರ್ಷಗಳ ಹಿಂದೆ ರಮೇಶ್​ ಅವರ ಮೊದಲ ಪತ್ನಿ ಕ್ಯಾನ್ಸರ್​ನಿಂದ ಮೃತರಾಗಿದ್ದರು. ಆ ಬಳಿಕ ಅವರಿಗೆ ಒಂಟಿತನ ಕಾಡಲು ಆರಂಭಿಸಿತ್ತು. ಹಾಗಿದ್ದರೂ ಕೂಡ ಆ ಕಷ್ಟಕಾಲವನ್ನು ಅವರು ಧೈರ್ಯದಿಂದ ಎದುರಿಸಿದ್ದರು. ಒಂದು ವೇಳೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿದ್ದರೆ ಆಗಲೇ ಮಾಡಿಕೊಳ್ಳಬೇಕಿತ್ತು. ರಮೇಶ್​ ಅಂಥ ವ್ಯಕ್ತಿ ಆಗಿರಲಿಲ್ಲ’ ಎಂದು ಅವರ ಸ್ನೇಹಿತ ನಟ ಬಾಲಾಜಿ ಶರ್ಮಾ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:

ಬಾಲಮಂದಿರದಲ್ಲಿ ಬಾಲಕಿ ಆತ್ಮಹತ್ಯೆ ಪ್ರಕರಣ: ಡೆತ್ ನೋಟ್ ಆಧರಿಸಿ ಕುಖ್ಯಾತ ರೌಡಿ ಅಶೋಕ್ ಪೈ ಪೊಲೀಸರ ವಶಕ್ಕೆ

Suicide: ಒಂದೇ ಮನೆಯಲ್ಲಿ ಮೂವರು ನೇಣುಬಿಗಿದುಕೊಂಡು ಆತ್ಮಹತ್ಯೆ