AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಮಹಾಮಂಡಲೇಶ್ವರಿ’ ಪಟ್ಟ ಪಡೆಯಲು 10 ಕೋಟಿ ರೂಪಾಯಿ ನೀಡಿದ ನಟಿ ಮಮತಾ?

ಮಮತಾ ಕುಲಕರ್ಣಿ ಅವರು ಕಿನ್ನರ ಅಖಾಡದಿಂದ ಮಹಾಮಂಡಲೇಶ್ವರ ಪಟ್ಟ ಪಡೆದುಕೊಂಡು ನಂತರ ವಾರದೊಳಗೆ ತೆಗೆದುಹಾಕಲ್ಪಟ್ಟಿದ್ದಾರೆ. ಈ ವಿಷಯ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. 10 ಕೋಟಿ ರೂಪಾಯಿ ಲಂಚ ನೀಡಿದ್ದಾರೆ ಎಂಬ ಆರೋಪಕ್ಕೆ ಅವರು ಉತ್ತರಿಸಿದ್ದಾರೆ. ಅವರ ಆಧ್ಯಾತ್ಮಿಕ ಒಲವು ಮತ್ತು ಗ್ಲಾಮರ್ ಜೀವನದಿಂದ ಆಧ್ಯಾತ್ಮಕ್ಕೆ ಬದಲಾವಣೆ ಕುರಿತು ಚರ್ಚೆ ನಡೆಯುತ್ತಿದೆ.

‘ಮಹಾಮಂಡಲೇಶ್ವರಿ’ ಪಟ್ಟ ಪಡೆಯಲು 10 ಕೋಟಿ ರೂಪಾಯಿ ನೀಡಿದ ನಟಿ ಮಮತಾ?
ಮಮತಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Feb 03, 2025 | 11:05 AM

Share

ಮಮತಾ ಕುಲಕರ್ಣಿ ಅವರು ಸದ್ಯ ಸುದ್ದಿಯಲ್ಲಿ ಇದ್ದಾರೆ. ಅವರು ಕಿನ್ನರ ಅಖಾಡದಿಂದ ‘ಮಹಾಮಂಡಲೇಶ್ವರ’ ಪಟ್ಟ ಪಡೆದುಕೊಂಡಿದ್ದರು. ಇದಾದ ಒಂದೇ ವಾರದಲ್ಲಿ ಅವರನ್ನು ಅಖಾಡದಿಂದ ತೆಗೆದು ಹಾಕಲಾಯಿತು. ಇದು ಸಾಕಷ್ಟು ಚರ್ಚೆಗೆ ಕಾರಣ ಆಗಿದೆ. ಮಮತಾ ವಿರುದ್ಧ ಅನೇಕರು ಸಿಟ್ಟಾಗಿದ್ದಾರೆ. ಗ್ಲಾಮರ್ ಲೋಕದಲ್ಲಿ ಇದ್ದ ಅವರು ಈಗ ಅಧ್ಯಾತ್ಮದ ಕಡೆ ಒಲವು ತೋರಿಸಿದ್ದು ಏಕೆ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು. ಅಲ್ಲದೆ, ‘ಮಹಾಮಂಡಲೇಶ್ವರ’ ಟೈಟಲ್ ಪಡೆಯಲು 10 ಕೋಟಿ ರೂಪಾಯಿ ನೀಡಿದ್ದರು ಎನ್ನುವ ಆರೋಪವೂ ಬಂದಿತ್ತು. ಇದಕ್ಕೆ ಅವರ ಕಡೆಯಿಂದ ಉತ್ತರ ಸಿಕ್ಕಿದೆ.

ಕಿನ್ನರ ಅಖಾಡ ಅಥವಾ ಕಿನ್ನರ ಅಖಾರ ಧಾರ್ಮಿಕ ಆಚರಣೆಗಳಲ್ಲಿ ತೊಡಗಿಕೊಂಡಿರುವ ತೃತೀಯ ಲಿಂಗಿಗಳ ಸಂಘವಾಗಿದೆ. 2015 ರಲ್ಲಿ ಪ್ರಾರಂಭವಾದ ಕಿನ್ನರ ಅಖಾಡ ಇದೀಗ ನಟಿ ಮಮತಾ ಕುಲಕರ್ಣಿಯನ್ನು ತಮ್ಮ ಮಹಾಮಂಡಲೇಶ್ವರಿಯನ್ನಾಗಿ ನೇಮಕ ಮಾಡಿತ್ತು. ವಿರೋಧದ ಬಳಿಕ ಅವರನ್ನು ತೆಗೆದು ಹಾಕಲಾಯಿತು.

‘ಮಹಾಮಂಡಲೇಶ್ವರ’ ಬಿರುದನ್ನು ಅವರಿಗೆ ನೀಡಿದ್ದಕ್ಕೆ ಅನೇಕ ಧಾರ್ಮಿಕ ನಾಯಕರು ವಿರೋಧ ವ್ಯಕ್ತಪಡಿಸಿದ್ದರು. ರಾಮ್​ದೇವ್​ ಕೂಡ ಈ ಬಗ್ಗೆ ಅಪಸ್ವರ ತೆಗೆದಿದ್ದರು. ಗ್ಲಾಮರ್ ಲೋಕ ಹಾಗೂ ಅವರ ಬಗ್ಗೆ ಇರುವ ಕ್ರಿಮಿನಲ್ ಹಿಸ್ಟರಿ ಬಗ್ಗೆ ಅಪಸ್ವರ ತೆಗೆದಿದ್ದರು. ಈ ಎಲ್ಲಾ ಪ್ರಶ್ನೆಗೆ ಈಗ ಮಮತಾ ಅವರೇ ಉತ್ತರಿಸಿದ್ದಾರೆ.

ಕುಂಭಮೇಳದಿಂದ ಹೊರ ಬರುತ್ತಿದ್ದಂತೆ ರಜತ್ ಶರ್ಮಾ ನಡೆಸಿಕೊಡುವ ‘ಆಪ್​ ಕಿ ಅದಾಲತ್’ ಕಾರ್ಯಕ್ರಮಕ್ಕೆ ಆಗಮಿಸಿದರು ಮಮತಾ. ಈ ವೇಳೆ ಅವರು ಬಾಬಾ ರಾಮ್​ ದೇವ್ ಮೊದಲಾದವರ ಹೇಳಿಕೆಗೆ ಉತ್ತರಿಸಿದ್ದಾರೆ. ‘ಬಾಬಾ ರಾಮ್​ದೇವ್ ಅವರಿಗೆ ಮಹಾಕಾಳ ಹಾಗೂ ಮಹಾಕಾಳಿ ಬಗ್ಗೆ ಭಯ ಇರಬೇಕು’ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಒಂದು ಕಾಲದ ಹಾಟ್ ನಟಿ ಈಗ ಸಾಧು ಸನ್ಯಾಸಿನಿ

ಬಾಬಾ ರಾಮ್​ದೇವ್ ಆರೋಪ ಏನು?

‘ಒಂದು ದಿನದಲ್ಲಿ ಯಾರೂ ಸಂತತ್ವವನ್ನು ಸಾಧಿಸಲು ಸಾಧ್ಯವಿಲ್ಲ. ಇಂದಿನ ದಿನಗಳಲ್ಲಿ ಯಾರನ್ನಾದರೂ ಹಿಡಿದು ಮಹಾಮಂಡಲೇಶ್ವರಿಯಾಗಿ ಮಾಡುತ್ತಿರುವುದನ್ನು ನಾನು ನೋಡುತ್ತಿದ್ದೇನೆ’ ಎಂದು ಅವರು ಹೇಳಿದ್ದಾರೆ.

10 ಕೋಟಿ ರೂಪಾಯಿ ಆರೋಪ

ಮಹಾಮಂಡಲೇಶ್ವರಿ ಬಿರುದು ಪಡೆಯಲು ಮಮತಾ ಕುಲಕರ್ಣಿ ಅವರು 10 ಕೋಟಿ ರೂಪಾಯಿ ನೀಡಿದ್ದಾರೆ ಎನ್ನುವ ಆರೋಪ ಇದೆ. ಆದರೆ, ಈ ಆರೋಪವನ್ನು ಅವರು ಒಪ್ಪಿಲ್ಲ. ಗುರುದಕ್ಷಿಣೆ ರೂಪದಲ್ಲಿ ಅವರು 2 ಲಕ್ಷ ರೂಪಾಯಿ ನೀಡಿದ್ದಾರೆ. ‘ನಾನು ಗುರುದಕ್ಷಿಣೆ ರೂಪದಲ್ಲಿ 2 ಲಕ್ಷ ರೂಪಾಯಿ ನೀಡಿದ್ದೇನೆ. ನನ್ನೆಲ್ಲ ಬ್ಯಾಂಕ್ ಖಾತೆ ಫ್ರೀಜ್ ಆಗಿದೆ. ಹೀಗಾಗಿ, ನಾನು ಬೇರೆಯವರಿಂದ ಹಣ ಪಡೆದು ಇದನ್ನು ನೀಡಿದ್ದೇನೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು