AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತನಿಗೆ ಕಾಯ್ದಿರಿಸಿದ ಸೀಟ್ ಮೇಲೆ ಕುಳಿತು ‘ಆದಿಪುರುಷ್’ ವೀಕ್ಷಣೆ; ನಡೆಯಿತು ಮಾರಣಾಂತಿಕ ಹಲ್ಲೆ

‘ಆದಿಪುರುಷ್​’ ಸಿನಿಮಾ ಪ್ರಸಾರ ಆಗುವಾಗ ಚಿತ್ರಮಂದಿರಕ್ಕೆ ಹನುಮಂತ ಬರುತ್ತಾನೆ ಎಂಬ ನಂಬಿಕೆ ಚಿತ್ರತಂಡದ್ದು. ಈ ಕಾರಣಕ್ಕೆ ಒಂದು ಸೀಟನ್ನು ಖಾಲಿ ಬಿಡಲಾಗಿದೆ. ಇದರ ಮೇಲೆ ಅಭಿಮಾನಿ ಕೂತಿದ್ದಾನೆ!

ಹನುಮಂತನಿಗೆ ಕಾಯ್ದಿರಿಸಿದ ಸೀಟ್ ಮೇಲೆ ಕುಳಿತು ‘ಆದಿಪುರುಷ್’ ವೀಕ್ಷಣೆ; ನಡೆಯಿತು ಮಾರಣಾಂತಿಕ ಹಲ್ಲೆ
ಹನುಮಂತ
ರಾಜೇಶ್ ದುಗ್ಗುಮನೆ
|

Updated on: Jun 16, 2023 | 1:07 PM

Share

ಪ್ರಭಾಸ್ (Prabhas) ನಟನೆಯ, ಓಂ ರಾವತ್ ನಿರ್ದೇಶನದ ‘ಆದಿಪುರುಷ್’ ಸಿನಿಮಾಗೆ (Adipurush Movie) ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ರೀತಿಯಲ್ಲಿ ಜನರು ಚಿತ್ರವನ್ನು ವಿಮರ್ಶೆ ಮಾಡುತ್ತಿದ್ದಾರೆ. ಈ ಮಧ್ಯೆ ಹನುಮಂತನಿಗಾಗಿ ಸೀಟ್ ಕಾಯ್ದಿರಿಸಲು ಚಿತ್ರತಂಡ ನಿರ್ಧರಿಸಿತ್ತು. ಹೈದರಾಬಾದ್​ನ ಚಿತ್ರಮಂದಿರ ಒಂದರಲ್ಲಿ ಹನುಮಂತನ ಸೀಟ್​ಮೇಲೆ ಕುಳಿತು ಪ್ರೇಕ್ಷಕನೋರ್ವ ಸಿನಿಮಾ ನೋಡಿದ್ದಾನೆ! ಇದನ್ನು ಕಂಡ ಅಭಿಮಾನಿಗಳು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಹನುಮಂತನಿಗಾಗಿ ಸೀಟ್ ಒಂದನ್ನು ಮೀಸಲಿಡುವ ಬಗ್ಗೆ ತಂಡ ಘೋಷಣೆ ಮಾಡಿತು. ರಾಮನ ಆರಾಧನೆ ನಡೆದರೆ ಆ ಸ್ಥಳದಲ್ಲಿ ಹನುಮಂತ ಬರುತ್ತಾನೆ ಎಂಬ ನಂಬಿಕೆ ಅನೇಕರದ್ದು. ‘ಆದಿಪುರುಷ್​’ ಚಿತ್ರದಲ್ಲೂ ಶ್ರೀರಾಮನ ಗುಣಗಾನ ಮಾಡಲಾಗಿದೆ. ರಾಮನ ಕುರಿತಾದ ಹಾಡುಗಳು ಇದರಲ್ಲಿ ಇವೆ. ಹಾಗಾಗಿ ‘ಆದಿಪುರುಷ್​’ ಸಿನಿಮಾ ಪ್ರಸಾರ ಆಗುವಾಗ ಚಿತ್ರಮಂದಿರಕ್ಕೆ ಹನುಮಂತ ಬರುತ್ತಾನೆ ಎಂಬ ನಂಬಿಕೆ ಚಿತ್ರತಂಡದ್ದು. ಈ ಕಾರಣಕ್ಕೆ ಒಂದು ಸೀಟನ್ನು ಖಾಲಿ ಬಿಡಲಾಗಿದೆ. ಇದರ ಮೇಲೆ ಅಭಿಮಾನಿ ಕೂತಿದ್ದಾನೆ!

ಹೈದರಾಬಾದ್​ನ ಬ್ರಮರಂಭ ಥಿಯೇಟರ್​ನಲ್ಲಿ ಈ ಘಟನೆ ನಡೆದಿದೆ. ಚಿತ್ರಮಂದಿರ ಹೌಸ್​ಫುಲ್ ಇದ್ದಿದ್ದರಿಂದ ವ್ಯಕ್ತಿಯೋರ್ವ ಹನುಮಂತನಿಗೆ ಕಾಯ್ದಿರಿಸಿದ ಸೀಟ್ ಮೇಲೆ ಕುಳಿತಿದ್ದಾನೆ. ಇದನ್ನು ಅಲ್ಲಿದ್ದವರು ಸಹಿಸಿಲ್ಲ. ಹೀಗಾಗಿ ಆತನಮೇಲೆ ದಾಳಿ ಮಾಡಲಾಗಿದೆ. ಕೆಲವರು ಈ ಹಲ್ಲೆಯನ್ನು ತಪ್ಪಿಸಲು ಪ್ರಯತ್ನಿಸಿದ್ದಾರೆ. ಆ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ‘ಓಂ ರಾವತ್​ ದಯವಿಟ್ಟು ನಿಮ್ಮ ಅಡ್ರೆಸ್ ಕೊಡಿ’; ‘ಆದಿಪುರುಷ್’ ಸಿನಿಮಾ ನೋಡಿ ಸಿಟ್ಟಾದ ಫ್ಯಾನ್ಸ್

ಅನೇಕ ಕಡೆಗಳಲ್ಲಿ ಹನುಮಂತನಿಗೆ ಕಾಯ್ದಿರಿಸಿದ ಪೀಠಕ್ಕೆ ಅಲಂಕಾರ ಮಾಡಲಾಗಿದೆ. ಸೀಟ್ ಮೇಲೆ ಒಂದು ಪೀಠವನ್ನು ಇರಿಸಿ, ಅಲ್ಲಿ ಆಂಜನೇಯನ ಫೋಟೋ ಅಥವಾ ಮೂರ್ತಿಯನ್ನು ಇಟ್ಟಿದ್ದಾರೆ. ಸಿನಿಮಾ ಪ್ರದರ್ಶನಕ್ಕೂ ಮುನ್ನ ಪುಷ್ಪಾರ್ಚನೆ ಮಾಡಲಾಗಿದೆ. ಈ ಎಲ್ಲ ಕಾರಣಗಳಿಂದಾಗಿ ರಾಮ ಭಕ್ತರಿಗೆ ಹಾಗೂ ಆಂಜನೇಯನ ಭಕ್ತರಿಗೆ ಈ ಸಿನಿಮಾ ಬಹಳ ವಿಶೇಷ ಎನಿಸಿಕೊಳ್ಳುತ್ತಿದೆ. ಮೊದಲ ದಿನ ಚಿತ್ರ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್