AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹನುಮಂತನಿಗೆ ಕಾಯ್ದಿರಿಸಿದ ಸೀಟ್ ಮೇಲೆ ಕುಳಿತು ‘ಆದಿಪುರುಷ್’ ವೀಕ್ಷಣೆ; ನಡೆಯಿತು ಮಾರಣಾಂತಿಕ ಹಲ್ಲೆ

‘ಆದಿಪುರುಷ್​’ ಸಿನಿಮಾ ಪ್ರಸಾರ ಆಗುವಾಗ ಚಿತ್ರಮಂದಿರಕ್ಕೆ ಹನುಮಂತ ಬರುತ್ತಾನೆ ಎಂಬ ನಂಬಿಕೆ ಚಿತ್ರತಂಡದ್ದು. ಈ ಕಾರಣಕ್ಕೆ ಒಂದು ಸೀಟನ್ನು ಖಾಲಿ ಬಿಡಲಾಗಿದೆ. ಇದರ ಮೇಲೆ ಅಭಿಮಾನಿ ಕೂತಿದ್ದಾನೆ!

ಹನುಮಂತನಿಗೆ ಕಾಯ್ದಿರಿಸಿದ ಸೀಟ್ ಮೇಲೆ ಕುಳಿತು ‘ಆದಿಪುರುಷ್’ ವೀಕ್ಷಣೆ; ನಡೆಯಿತು ಮಾರಣಾಂತಿಕ ಹಲ್ಲೆ
ಹನುಮಂತ
ರಾಜೇಶ್ ದುಗ್ಗುಮನೆ
|

Updated on: Jun 16, 2023 | 1:07 PM

Share

ಪ್ರಭಾಸ್ (Prabhas) ನಟನೆಯ, ಓಂ ರಾವತ್ ನಿರ್ದೇಶನದ ‘ಆದಿಪುರುಷ್’ ಸಿನಿಮಾಗೆ (Adipurush Movie) ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ವಿವಿಧ ರೀತಿಯಲ್ಲಿ ಜನರು ಚಿತ್ರವನ್ನು ವಿಮರ್ಶೆ ಮಾಡುತ್ತಿದ್ದಾರೆ. ಈ ಮಧ್ಯೆ ಹನುಮಂತನಿಗಾಗಿ ಸೀಟ್ ಕಾಯ್ದಿರಿಸಲು ಚಿತ್ರತಂಡ ನಿರ್ಧರಿಸಿತ್ತು. ಹೈದರಾಬಾದ್​ನ ಚಿತ್ರಮಂದಿರ ಒಂದರಲ್ಲಿ ಹನುಮಂತನ ಸೀಟ್​ಮೇಲೆ ಕುಳಿತು ಪ್ರೇಕ್ಷಕನೋರ್ವ ಸಿನಿಮಾ ನೋಡಿದ್ದಾನೆ! ಇದನ್ನು ಕಂಡ ಅಭಿಮಾನಿಗಳು ಆತನ ಮೇಲೆ ಹಲ್ಲೆ ಮಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಹನುಮಂತನಿಗಾಗಿ ಸೀಟ್ ಒಂದನ್ನು ಮೀಸಲಿಡುವ ಬಗ್ಗೆ ತಂಡ ಘೋಷಣೆ ಮಾಡಿತು. ರಾಮನ ಆರಾಧನೆ ನಡೆದರೆ ಆ ಸ್ಥಳದಲ್ಲಿ ಹನುಮಂತ ಬರುತ್ತಾನೆ ಎಂಬ ನಂಬಿಕೆ ಅನೇಕರದ್ದು. ‘ಆದಿಪುರುಷ್​’ ಚಿತ್ರದಲ್ಲೂ ಶ್ರೀರಾಮನ ಗುಣಗಾನ ಮಾಡಲಾಗಿದೆ. ರಾಮನ ಕುರಿತಾದ ಹಾಡುಗಳು ಇದರಲ್ಲಿ ಇವೆ. ಹಾಗಾಗಿ ‘ಆದಿಪುರುಷ್​’ ಸಿನಿಮಾ ಪ್ರಸಾರ ಆಗುವಾಗ ಚಿತ್ರಮಂದಿರಕ್ಕೆ ಹನುಮಂತ ಬರುತ್ತಾನೆ ಎಂಬ ನಂಬಿಕೆ ಚಿತ್ರತಂಡದ್ದು. ಈ ಕಾರಣಕ್ಕೆ ಒಂದು ಸೀಟನ್ನು ಖಾಲಿ ಬಿಡಲಾಗಿದೆ. ಇದರ ಮೇಲೆ ಅಭಿಮಾನಿ ಕೂತಿದ್ದಾನೆ!

ಹೈದರಾಬಾದ್​ನ ಬ್ರಮರಂಭ ಥಿಯೇಟರ್​ನಲ್ಲಿ ಈ ಘಟನೆ ನಡೆದಿದೆ. ಚಿತ್ರಮಂದಿರ ಹೌಸ್​ಫುಲ್ ಇದ್ದಿದ್ದರಿಂದ ವ್ಯಕ್ತಿಯೋರ್ವ ಹನುಮಂತನಿಗೆ ಕಾಯ್ದಿರಿಸಿದ ಸೀಟ್ ಮೇಲೆ ಕುಳಿತಿದ್ದಾನೆ. ಇದನ್ನು ಅಲ್ಲಿದ್ದವರು ಸಹಿಸಿಲ್ಲ. ಹೀಗಾಗಿ ಆತನಮೇಲೆ ದಾಳಿ ಮಾಡಲಾಗಿದೆ. ಕೆಲವರು ಈ ಹಲ್ಲೆಯನ್ನು ತಪ್ಪಿಸಲು ಪ್ರಯತ್ನಿಸಿದ್ದಾರೆ. ಆ ವಿಡಿಯೋ ವೈರಲ್ ಆಗಿದೆ.

ಇದನ್ನೂ ಓದಿ: ‘ಓಂ ರಾವತ್​ ದಯವಿಟ್ಟು ನಿಮ್ಮ ಅಡ್ರೆಸ್ ಕೊಡಿ’; ‘ಆದಿಪುರುಷ್’ ಸಿನಿಮಾ ನೋಡಿ ಸಿಟ್ಟಾದ ಫ್ಯಾನ್ಸ್

ಅನೇಕ ಕಡೆಗಳಲ್ಲಿ ಹನುಮಂತನಿಗೆ ಕಾಯ್ದಿರಿಸಿದ ಪೀಠಕ್ಕೆ ಅಲಂಕಾರ ಮಾಡಲಾಗಿದೆ. ಸೀಟ್ ಮೇಲೆ ಒಂದು ಪೀಠವನ್ನು ಇರಿಸಿ, ಅಲ್ಲಿ ಆಂಜನೇಯನ ಫೋಟೋ ಅಥವಾ ಮೂರ್ತಿಯನ್ನು ಇಟ್ಟಿದ್ದಾರೆ. ಸಿನಿಮಾ ಪ್ರದರ್ಶನಕ್ಕೂ ಮುನ್ನ ಪುಷ್ಪಾರ್ಚನೆ ಮಾಡಲಾಗಿದೆ. ಈ ಎಲ್ಲ ಕಾರಣಗಳಿಂದಾಗಿ ರಾಮ ಭಕ್ತರಿಗೆ ಹಾಗೂ ಆಂಜನೇಯನ ಭಕ್ತರಿಗೆ ಈ ಸಿನಿಮಾ ಬಹಳ ವಿಶೇಷ ಎನಿಸಿಕೊಳ್ಳುತ್ತಿದೆ. ಮೊದಲ ದಿನ ಚಿತ್ರ ಎಷ್ಟು ಕಲೆಕ್ಷನ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!