AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕ್ಯಾಪ್ಟನ್ ಮಿಲ್ಲರ್’ ಪ್ರೀ ರಿಲೀಸ್ ಕಾರ್ಯಕ್ರಮ: ಅನುಚಿತವಾಗಿ ವರ್ತಿಸಿದವನ ಹಿಡಿದು ಥಳಿಸಿದ ನಟಿ

Aishwarya Raghupathi: ಶಿವರಾಜ್ ಕುಮಾರ್-ಧನುಶ್ ನಟನೆಯ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದ ಪ್ರೀ ರಿಲೀಸ್ ಇವೆಂಟ್​ನಲ್ಲಿ ವ್ಯಕ್ತಿಯೊಬ್ಬ ನಟಿಯೊಟ್ಟಿಗೆ ಅನುಚಿತವಾಗಿ ವರ್ತಿಸಿದ್ದಾನೆ. ಘಟನೆಯ ವಿಡಿಯೋ ವೈರಲ್ ಆಗಿದೆ.

‘ಕ್ಯಾಪ್ಟನ್ ಮಿಲ್ಲರ್’ ಪ್ರೀ ರಿಲೀಸ್ ಕಾರ್ಯಕ್ರಮ: ಅನುಚಿತವಾಗಿ ವರ್ತಿಸಿದವನ ಹಿಡಿದು ಥಳಿಸಿದ ನಟಿ
ಐಶ್ವರ್ಯಾ
ಮಂಜುನಾಥ ಸಿ.
|

Updated on: Jan 05, 2024 | 3:18 PM

Share

ಶಿವರಾಜ್ ಕುಮಾರ್ (Shiva Rajkumar) ಅಭಿನಯಿಸುತ್ತಿರುವ ಎರಡನೇ ತಮಿಳು ಸಿನಿಮಾ ‘ಕ್ಯಾಪ್ಟನ್ ಮಿಲ್ಲರ್’ನ ಪ್ರೀ ರಿಲೀಸ್ ಕಾರ್ಯಕ್ರಮ ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಇತ್ತೀಚೆಗೆ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್, ಧನುಶ್ ಸೇರದಂತೆ ಹಲವು ನಟ-ನಟಿಯರು ತಮಿಳು ಸಿನಿಮಾರಂಗದ ಪ್ರಮುಖರು ಸಹ ಭಾಗಿಯಾಗಿದ್ದರು. ಕಾರ್ಯಕ್ರಮವೇನೋ ಅದ್ಧೂರಿಯಾಗಿ ನಡೆಯಿತು, ಆದರೆ ಕಾರ್ಯಕ್ರಮದಲ್ಲಿ ನಟಿಯೊಬ್ಬರು ಕಿರುಕುಳ ಎದುರಿಸಿದ್ದು, ಕಿರುಕುಳ ನೀಡಿದವನ ಹಿಡಿದು ನಟಿಯೇ ಥಳಿಸಿದ್ದಾರೆ. ಆ ಘಟನೆಯ ವಿಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿ ನಟಿ ಐಶ್ವರ್ಯಾ ರಘುಪತಿ ಪಾತ್ರವೊಂದರಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ನಡೆದ ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿಯೂ ಈ ನಟಿ ಭಾಗಿಯಾಗಿದ್ದರು. ಆ ಕಾರ್ಯಕ್ರಮದ ನಿರೂಪಣೆಯನ್ನೂ ಸಹ ಐಶ್ವರ್ಯಾ ರಘುಪತಿ ಅವರೇ ನಡೆಸಿಕೊಟ್ಟರು. ಆದರೆ ಕಾರ್ಯಕ್ರಮ ಮುಗಿಸಿ ಹೊರಡುವಾಗ ವ್ಯಕ್ತಿಯೊಬ್ಬ ಐಶ್ವರ್ಯಾ ರಘುಪತಿ ಅವರೊಟ್ಟಿಗೆ ಅನುಚಿತವಾಗಿ ನಡೆದುಕೊಂಡಿದ್ದಾನೆ. ಐಶ್ವರ್ಯಾರ ದೇಹ ಭಾಗವನ್ನು ಅಶ್ಲೀಲವಾಗಿ ಮುಟ್ಟಿದ್ದಾನೆ. ಕೂಡಲೇ ಆಕ್ರೋಶಗೊಂಡ ನಟಿ, ಆತನನ್ನು ಹಿಡಿದು ಎಲ್ಲರೆದರು ಭಾರಿಸಿದ್ದಾರೆ. ಮಾತ್ರವಲ್ಲದೆ ಆತನನ್ನು ನಿಂದಿಸಿ, ಕಾಲಿಗೆ ಬೀಳುವಂತೆ ಮಾಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಸಹ ಹಂಚಿಕೊಂಡಿರುವ ಐಶ್ವರ್ಯಾ ರಘುಪತಿ, ‘ಆ ಜನಜಂಗುಳಿಯಲ್ಲಿ ಒಬ್ಬ ವ್ಯಕ್ತಿ ನನ್ನೊಟ್ಟಿಗೆ ಅನುಚಿತವಾಗಿ ವರ್ತಿಸಿದ. ಕೂಡಲೇ ನಾನು ಅವನನ್ನು ಹಿಡಿದುಕೊಂಡೆ. ನಾನು ಹೊಡೆಯುವ ವರೆಗೆ ನನ್ನ ಬಿಗಿ ಹಿಡಿತ ಸಡಿಸಲಿಲ್ಲ, ಅವನು ಓಡಿ ಹೋಗಲು ಯತ್ನಿಸಿದ, ಬಿಡದೆ ಬೆನ್ನಟ್ಟಿ ಹೊಡೆದು ಕೋಪ ತೀರಿಸಿಕೊಂಡೆ. ಮಹಿಳೆಯ ದೇಹದ ಭಾಗವನ್ನು ಹಿಡಿದುಕೊಳ್ಳು ಅದೆಷ್ಟು ಧೈರ್ಯ ಅವನಿಗೆ, ಇದು ನನಗೆ ಅತೀವ ಕೋಪ ತರಿಸಿತ್ತು, ಹಾಗಾಗಿಯೇ ನಾನು ಅವನನ್ನು ಎದುರಿಸಿದೆ’ ಎಂದಿದ್ದಾರೆ ನಟಿ.

ಇದನ್ನೂ ಓದಿ:‘ಕ್ಯಾಪ್ಟನ್ ಮಿಲ್ಲರ್’ ಹಾಡು ಬಿಡುಗಡೆ: ಈರಪ್ಪನ ನೆನೆಯುತ ಧನುಶ್ ಜೊತೆ ಶಿವಣ್ಣನ ಕುಣಿತ

ಮುಂದುವರೆದು, ‘ನನ್ನ ಸುತ್ತಲೂ ಬಹಳ ಒಳ್ಳೆಯ ಜನರಿದ್ದಾರೆ. ಜಗತ್ತಿನಲ್ಲಿ ಸಾಕಷ್ಟು ಮಂದಿ ಬಹಳ ವಿನಯವಂತ, ಜಂಟಲ್​ಮೆನ್​ ಇದ್ದಾರೆಂಬುದರ ಅರಿವು ನನಗೆ ಇದೆ. ಆದರೆ ಇಂಥಹಾ ಕೆಟ್ಟ ಕೊಳಕು ಮನಸ್ಥಿತಿಯ ಕೆಲವರು ಅವರ ನಡುವೆ ಸೇರಿಕೊಂಡಿದ್ದಾರೆ. ಇದರ ಬಗ್ಗೆ ನನಗೆ ಬಹಳ ಭಯವಿದೆ’ ಎಂದು ಐಶ್ವರ್ಯಾ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಐಶ್ವರ್ಯಾ ರಘುಪತಿ ತಮಿಳಿನ ಜನಪ್ರಿಯ ನಿರೂಪಕಿಯರಲ್ಲಿ ಒಬ್ಬರು ಕೆಲವು ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಇದೀಗ ‘ಕ್ಯಾಪ್ಟನ್ ಮಿಲ್ಲರ್’ ಸಿನಿಮಾದಲ್ಲಿಯೂ ನಟಿಸಿದ್ದಾರೆ. ಕೆಲ ತಿಂಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ನಿರ್ದೇಶಕನೊಬ್ಬ ಐಶ್ವರ್ಯಾ ರಘುಪತಿಗೆ ಬಲವಂತದಿಂದ ಹಾರ ಹಾಕಿದ್ದು ವಿವಾದವಾಗಿತ್ತು. ಬಳಿಕ ಆ ವ್ಯಕ್ತಿ ಬಹಿರಂಗವಾಗಿ ಕ್ಷಮೆ ಕೇಳಿದ್ದ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
ಪೊಲೀಸರು ಹಿಡಿದಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!
12 ವೈಡ್, 1 ನೋ ಬಾಲ್... ಓವರ್ ಮುಗಿಯುವ ಮುನ್ನವೇ ಪಂದ್ಯವೇ ಮುಗಿದು ಹೋಯ್ತು!
ಧರ್ಮಸ್ಥಳ ಠಾಣೆಯಲ್ಲಿ ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ ಎಸ್​ಐಟಿ
ಧರ್ಮಸ್ಥಳ ಠಾಣೆಯಲ್ಲಿ ಕೆಲಸ ಮಾಡಿದ ಪೊಲೀಸರ ಪಟ್ಟಿ ಕೇಳಿದ ಎಸ್​ಐಟಿ