Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಟನ್​ ಶಾಪ್​ಗೆ ಸೋನು ಸೂದ್​ ಹೆಸರು; ‘ನಾನು ಸಸ್ಯಾಹಾರಿ, ಹೀಗಾಗಿ ನಿಮಗೆ ತರಕಾರಿ ಅಂಗಡಿ ಇಟ್ಟುಕೊಡ್ತೀನಿ’ ಎಂದ ನಟ

ಸೋನು ಸೂದ್​ ಸಾಕಷ್ಟು ಜನರಿಗೆ ಸಹಾಯ ಮಾಡಿದ್ದಾರೆ. ಕೆಲವರಿಗೆ ಆಮ್ಲಜನಕ ನೀಡಿದರೆ, ಇನ್ನೂ ಕೆಲವರಿಗೆ ಬೆಡ್​ ವ್ಯವಸ್ಥೆ ಮಾಡಿದ್ದಾರೆ. ಸಾಕಷ್ಟು ಜನರ ಆಸ್ಪತ್ರೆ ಖರ್ಚನ್ನು ಸ್ವತಃ ಸೋನು ಸೂದ್​ ಅವರೇ ನೋಡಿಕೊಂಡಿದ್ದಾರೆ.

ಮಟನ್​ ಶಾಪ್​ಗೆ ಸೋನು ಸೂದ್​ ಹೆಸರು; ‘ನಾನು ಸಸ್ಯಾಹಾರಿ, ಹೀಗಾಗಿ ನಿಮಗೆ ತರಕಾರಿ ಅಂಗಡಿ ಇಟ್ಟುಕೊಡ್ತೀನಿ’ ಎಂದ ನಟ
ಸೋನು ಸೂದ್
Follow us
ರಾಜೇಶ್ ದುಗ್ಗುಮನೆ
|

Updated on: May 30, 2021 | 5:02 PM

ಕೊವಿಡ್​ ಮೊದಲನೇ ಅಲೆ ಕಾಣಿಸಿಕೊಂಡಾಗ ಸಹಾಯಕ್ಕೆ ಮುಂದಾಗಿದ್ದ ಸೋನು ಸೂದ್​ ಅದನ್ನು ಈವರೆಗೆ ನಿಲ್ಲಿಸಿಲ್ಲ. ಟ್ವೀಟ್​ ಮಾಡುತ್ತಿದ್ದಂತೆ, ಕಷ್ಟ ಎಂದವರಿಗೆ ಸಹಾಯ ಸಿಗುತ್ತಿದೆ. ಇದೇ ಕಾರಣಕ್ಕೆ ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಸಾಕಷ್ಟು ಶಾಪ್​ಗಳಿಗೆ ಸೋನು ಸೂದ್​ ಹೆಸರಿಡಲಾಗುತ್ತಿದೆ. ಈಗ ಮಟನ್​ ಅಂಗಡಿಗೆ ಸೋನು ಸೂದ್ ಹೆಸರಿಡಲಾಗಿದೆ. ಸೋನು ಸೂದ್​ ಸಸ್ಯಾಹಾರಿ. ಈ ಕಾರಣಕ್ಕೆ ಅಂಗಡಿ ಮಾಲೀಕನಿಗೆ ತರಕಾರಿ ಅಂಗಡಿ ಇಟ್ಟುಕೊಡುವ ಆಲೋಚನೆ ಮಾಡಿದ್ದಾರೆ.

ಸೋನು ಸೂದ್​ ಸಾಕಷ್ಟು ಜನರಿಗೆ ಸಹಾಯ ಮಾಡಿದ್ದಾರೆ. ಕೆಲವರಿಗೆ ಆಮ್ಲಜನಕ ನೀಡಿದರೆ, ಇನ್ನೂ ಕೆಲವರಿಗೆ ಬೆಡ್​ ವ್ಯವಸ್ಥೆ ಮಾಡಿದ್ದಾರೆ. ಸಾಕಷ್ಟು ಜನರ ಆಸ್ಪತ್ರೆ ಖರ್ಚನ್ನು ಸ್ವತಃ ಸೋನು ಸೂದ್​ ಅವರೇ ನೋಡಿಕೊಂಡಿದ್ದಾರೆ. ಹೀಗಾಗಿ, ಜನರಿಗೆ ಸೋನು ಸೂದ್​ ಮೇಲೆ ಭಕ್ತಿ ಭಾವನೆ ಮೂಡಿದೆ. ಕೆಲವರು ಅವರನ್ನು ಪೂಜಿಸುತ್ತಿದ್ದಾರೆ.

ಸೋನು ಸೂದ್​ ಅವರಿಂದ ಸಹಾಯ ಪಡೆದ ಅನೇಕರು ಋಣ ಹೇಗೆ ತೀರಿಸಬೇಕು ಎಂಬುದು ತಿಳಿಯದೇ ತಮ್ಮ ಮಕ್ಕಳಿಗೆ ಅವರದೇ ಹೆಸರಿಟ್ಟಿದ್ದಾರೆ. ಇನ್ನೂ ಕೆಲವರು ಅಂಗಡಿ ಹೆಸರನ್ನು ಬದಲಾಯಿಸಿದ್ದಾರೆ. ಅದೇ ರೀತಿ ತೆಲಂಗಾಣದ ಕರೀಮ್ ​ನಗರದಲ್ಲಿ ಮಟನ್​ ಶಾಪ್​ಗೆ ಸೋನು ಸೂದ್​ ಹೆಸರಿಡಲಾಗಿದೆ. ಇದು ಸೋನು ಸೂದ್​ ಗಮನಕ್ಕೆ ಬಂದಿದೆ. ಈ ಬಗ್ಗೆ ಅವರು ಅಚ್ಚರಿಯ ಟ್ವೀಟ್ ಒಂದನ್ನು ಮಾಡಿದ್ದಾರೆ.

ಸೋನು ಸೂದ್ ಸಸ್ಯಾಹಾರಿ. ಪ್ರಾಣಿಗಳನ್ನು ಕಡಿದು ತಿನ್ನುವುದನ್ನು ಅವರು ವಿರೋಧಿಸುತ್ತಾರೆ. ಬಾಲಿವುಡ್​ನ ಸಾಕಷ್ಟು ಸ್ಟಾರ್​ಗಳು ಇದೇ ಹಾದಿ ಹಿಡಿದಿದ್ದಾರೆ. ಹೀಗಾಗಿ ಮಟನ್​ ಶಾಪ್​ಗೆ ತಮ್ಮ ಹೆಸರು ಇಟ್ಟಿರೋದು ಸೋನು ಸೂದ್​ಗೆ ಅಷ್ಟಾಗಿ ಹಿಡಿಸಿದಂತೆ ಕಾಣಿಸಿಲ್ಲ. ಹೀಗಾಗಿ, ಅವರು ಇದಕ್ಕೆ ಉತ್ತರ ನೀಡಿದ್ದಾರೆ.

ನಾನು ಸಸ್ಯಾಹಾರಿ. ಹೀಗಿರುವಾಗ ನನ್ನ ಹೆಸರಲ್ಲಿ ಮಟನ್​ ಶಾಪ್​​? ಸಸ್ಯಾಹಾರಕ್ಕೆ ಸಂಬಂಧಿಸಿದ ಅಂಗಡಿ ತೆರೆಯಲು ನಾನು ಅವರಿಗೆ ಸಹಾಯ ಮಾಡಲೇ ಎಂದು ಪ್ರಶ್ನೆ ಮಾಡಿದ್ದಾರೆ. ಈ ಟ್ವೀಟ್ ಸಾಕಷ್ಟು ವೈರಲ್​​ ಆಗಿದೆ.

 ಇದನ್ನೂ ಓದಿ: ಸೋನು ಸೂದ್​ ಮಾತ್ರವಲ್ಲ, ಕರುನಾಡಿಗೆ ಕೊವಿಡ್ ಕಷ್ಟದಲ್ಲಿ ನೆರವಾದ ಇನ್ನಿಬ್ಬರು ಬಾಲಿವುಡ್​ ಸ್ಟಾರ್​ಗಳು

ಅಂದು ರಿಜೆಕ್ಟ್​ ಆಗಿದ್ದ ಮ್ಯಾಗಜಿನ್​ನಲ್ಲೇ ಸೋನು ಸೂದ್ ಫೋಟೋ; ಇದಲ್ಲವೇ ಯಶಸ್ಸು?

ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ನನ್ನ ವಿರುದ್ಧ ವಿನಾಕಾರಣ ದೂರು ಸಲ್ಲಿಸಲಾಗಿದೆ: ರಾಕೇಶ್ ಮಲ್ಲಿ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ರ‍್ಯಾಂಡಮ್ಮಾಗಿ ಗುಂಡು ಹಾರಿದ ಕಾರಣ ಪ್ರಾಣ ಉಳಿದಿದ್ದೇ ಹೆಚ್ಚು: ದೊಡ್ಡಬಸಯ್ಯ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಪಹಲ್ಗಾಮ್ ಸ್ವರ್ಗದಲ್ಲಿ ತೇಲಾಡುವಾಗ ಉಗ್ರರ ಭೀಕರತೆ ಬಿಚ್ಚಿಟ್ಟ ಪಲ್ಲವಿ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ
ಚಿತೆಯಲ್ಲಿ ಮಲಗಿದ ಪತಿಯ ಕೈ ಹುಡುಕಿ ಹಿಡಿದ ಪತ್ನಿ: ಹೃದಯ ಹಿಂಡುವ ದೃಶ್ಯ