AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಟನ್​ ಶಾಪ್​ಗೆ ಸೋನು ಸೂದ್​ ಹೆಸರು; ‘ನಾನು ಸಸ್ಯಾಹಾರಿ, ಹೀಗಾಗಿ ನಿಮಗೆ ತರಕಾರಿ ಅಂಗಡಿ ಇಟ್ಟುಕೊಡ್ತೀನಿ’ ಎಂದ ನಟ

ಸೋನು ಸೂದ್​ ಸಾಕಷ್ಟು ಜನರಿಗೆ ಸಹಾಯ ಮಾಡಿದ್ದಾರೆ. ಕೆಲವರಿಗೆ ಆಮ್ಲಜನಕ ನೀಡಿದರೆ, ಇನ್ನೂ ಕೆಲವರಿಗೆ ಬೆಡ್​ ವ್ಯವಸ್ಥೆ ಮಾಡಿದ್ದಾರೆ. ಸಾಕಷ್ಟು ಜನರ ಆಸ್ಪತ್ರೆ ಖರ್ಚನ್ನು ಸ್ವತಃ ಸೋನು ಸೂದ್​ ಅವರೇ ನೋಡಿಕೊಂಡಿದ್ದಾರೆ.

ಮಟನ್​ ಶಾಪ್​ಗೆ ಸೋನು ಸೂದ್​ ಹೆಸರು; ‘ನಾನು ಸಸ್ಯಾಹಾರಿ, ಹೀಗಾಗಿ ನಿಮಗೆ ತರಕಾರಿ ಅಂಗಡಿ ಇಟ್ಟುಕೊಡ್ತೀನಿ’ ಎಂದ ನಟ
ಸೋನು ಸೂದ್
ರಾಜೇಶ್ ದುಗ್ಗುಮನೆ
|

Updated on: May 30, 2021 | 5:02 PM

Share

ಕೊವಿಡ್​ ಮೊದಲನೇ ಅಲೆ ಕಾಣಿಸಿಕೊಂಡಾಗ ಸಹಾಯಕ್ಕೆ ಮುಂದಾಗಿದ್ದ ಸೋನು ಸೂದ್​ ಅದನ್ನು ಈವರೆಗೆ ನಿಲ್ಲಿಸಿಲ್ಲ. ಟ್ವೀಟ್​ ಮಾಡುತ್ತಿದ್ದಂತೆ, ಕಷ್ಟ ಎಂದವರಿಗೆ ಸಹಾಯ ಸಿಗುತ್ತಿದೆ. ಇದೇ ಕಾರಣಕ್ಕೆ ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಸಾಕಷ್ಟು ಶಾಪ್​ಗಳಿಗೆ ಸೋನು ಸೂದ್​ ಹೆಸರಿಡಲಾಗುತ್ತಿದೆ. ಈಗ ಮಟನ್​ ಅಂಗಡಿಗೆ ಸೋನು ಸೂದ್ ಹೆಸರಿಡಲಾಗಿದೆ. ಸೋನು ಸೂದ್​ ಸಸ್ಯಾಹಾರಿ. ಈ ಕಾರಣಕ್ಕೆ ಅಂಗಡಿ ಮಾಲೀಕನಿಗೆ ತರಕಾರಿ ಅಂಗಡಿ ಇಟ್ಟುಕೊಡುವ ಆಲೋಚನೆ ಮಾಡಿದ್ದಾರೆ.

ಸೋನು ಸೂದ್​ ಸಾಕಷ್ಟು ಜನರಿಗೆ ಸಹಾಯ ಮಾಡಿದ್ದಾರೆ. ಕೆಲವರಿಗೆ ಆಮ್ಲಜನಕ ನೀಡಿದರೆ, ಇನ್ನೂ ಕೆಲವರಿಗೆ ಬೆಡ್​ ವ್ಯವಸ್ಥೆ ಮಾಡಿದ್ದಾರೆ. ಸಾಕಷ್ಟು ಜನರ ಆಸ್ಪತ್ರೆ ಖರ್ಚನ್ನು ಸ್ವತಃ ಸೋನು ಸೂದ್​ ಅವರೇ ನೋಡಿಕೊಂಡಿದ್ದಾರೆ. ಹೀಗಾಗಿ, ಜನರಿಗೆ ಸೋನು ಸೂದ್​ ಮೇಲೆ ಭಕ್ತಿ ಭಾವನೆ ಮೂಡಿದೆ. ಕೆಲವರು ಅವರನ್ನು ಪೂಜಿಸುತ್ತಿದ್ದಾರೆ.

ಸೋನು ಸೂದ್​ ಅವರಿಂದ ಸಹಾಯ ಪಡೆದ ಅನೇಕರು ಋಣ ಹೇಗೆ ತೀರಿಸಬೇಕು ಎಂಬುದು ತಿಳಿಯದೇ ತಮ್ಮ ಮಕ್ಕಳಿಗೆ ಅವರದೇ ಹೆಸರಿಟ್ಟಿದ್ದಾರೆ. ಇನ್ನೂ ಕೆಲವರು ಅಂಗಡಿ ಹೆಸರನ್ನು ಬದಲಾಯಿಸಿದ್ದಾರೆ. ಅದೇ ರೀತಿ ತೆಲಂಗಾಣದ ಕರೀಮ್ ​ನಗರದಲ್ಲಿ ಮಟನ್​ ಶಾಪ್​ಗೆ ಸೋನು ಸೂದ್​ ಹೆಸರಿಡಲಾಗಿದೆ. ಇದು ಸೋನು ಸೂದ್​ ಗಮನಕ್ಕೆ ಬಂದಿದೆ. ಈ ಬಗ್ಗೆ ಅವರು ಅಚ್ಚರಿಯ ಟ್ವೀಟ್ ಒಂದನ್ನು ಮಾಡಿದ್ದಾರೆ.

ಸೋನು ಸೂದ್ ಸಸ್ಯಾಹಾರಿ. ಪ್ರಾಣಿಗಳನ್ನು ಕಡಿದು ತಿನ್ನುವುದನ್ನು ಅವರು ವಿರೋಧಿಸುತ್ತಾರೆ. ಬಾಲಿವುಡ್​ನ ಸಾಕಷ್ಟು ಸ್ಟಾರ್​ಗಳು ಇದೇ ಹಾದಿ ಹಿಡಿದಿದ್ದಾರೆ. ಹೀಗಾಗಿ ಮಟನ್​ ಶಾಪ್​ಗೆ ತಮ್ಮ ಹೆಸರು ಇಟ್ಟಿರೋದು ಸೋನು ಸೂದ್​ಗೆ ಅಷ್ಟಾಗಿ ಹಿಡಿಸಿದಂತೆ ಕಾಣಿಸಿಲ್ಲ. ಹೀಗಾಗಿ, ಅವರು ಇದಕ್ಕೆ ಉತ್ತರ ನೀಡಿದ್ದಾರೆ.

ನಾನು ಸಸ್ಯಾಹಾರಿ. ಹೀಗಿರುವಾಗ ನನ್ನ ಹೆಸರಲ್ಲಿ ಮಟನ್​ ಶಾಪ್​​? ಸಸ್ಯಾಹಾರಕ್ಕೆ ಸಂಬಂಧಿಸಿದ ಅಂಗಡಿ ತೆರೆಯಲು ನಾನು ಅವರಿಗೆ ಸಹಾಯ ಮಾಡಲೇ ಎಂದು ಪ್ರಶ್ನೆ ಮಾಡಿದ್ದಾರೆ. ಈ ಟ್ವೀಟ್ ಸಾಕಷ್ಟು ವೈರಲ್​​ ಆಗಿದೆ.

 ಇದನ್ನೂ ಓದಿ: ಸೋನು ಸೂದ್​ ಮಾತ್ರವಲ್ಲ, ಕರುನಾಡಿಗೆ ಕೊವಿಡ್ ಕಷ್ಟದಲ್ಲಿ ನೆರವಾದ ಇನ್ನಿಬ್ಬರು ಬಾಲಿವುಡ್​ ಸ್ಟಾರ್​ಗಳು

ಅಂದು ರಿಜೆಕ್ಟ್​ ಆಗಿದ್ದ ಮ್ಯಾಗಜಿನ್​ನಲ್ಲೇ ಸೋನು ಸೂದ್ ಫೋಟೋ; ಇದಲ್ಲವೇ ಯಶಸ್ಸು?

Follow Us
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
ಕಾರಿಗೆ ಡಿಕ್ಕಿ ಹೊಡೆದು 1.5 ಕಿ.ಮೀ ಎಳೆದೊಯ್ದ ಟ್ರಕ್
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
2ನೇ ಇನ್ನಿಂಗ್ಸ್​ಗೂ ಮುನ್ನ ಮಾರಿಕಾಂಬಾ ದರ್ಶನ ಪಡೆದ ಅನಂತ್ ಕುಮಾರ್ ಹೆಗಡೆ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಕುಸ್ತಿ ಕಾಳಗದಲ್ಲಿ ದಾವಣಗೆರೆ ಜನರ ಗಮನ ಸೆಳೆದ ಇರಾನ್ ಪೈಲ್ವಾನ್ ಮಿರ್ಜಾ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಆನೇಕಲ್: ರೈಲು ಹಳಿಯ ಮೇಲೆಯೇ ಕೆಟ್ಟು ನಿಂತ BMTC ಬಸ್, ಆಮೇಲೇನಾಯ್ತು ನೋಡಿ
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ