AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಟನ್​ ಶಾಪ್​ಗೆ ಸೋನು ಸೂದ್​ ಹೆಸರು; ‘ನಾನು ಸಸ್ಯಾಹಾರಿ, ಹೀಗಾಗಿ ನಿಮಗೆ ತರಕಾರಿ ಅಂಗಡಿ ಇಟ್ಟುಕೊಡ್ತೀನಿ’ ಎಂದ ನಟ

ಸೋನು ಸೂದ್​ ಸಾಕಷ್ಟು ಜನರಿಗೆ ಸಹಾಯ ಮಾಡಿದ್ದಾರೆ. ಕೆಲವರಿಗೆ ಆಮ್ಲಜನಕ ನೀಡಿದರೆ, ಇನ್ನೂ ಕೆಲವರಿಗೆ ಬೆಡ್​ ವ್ಯವಸ್ಥೆ ಮಾಡಿದ್ದಾರೆ. ಸಾಕಷ್ಟು ಜನರ ಆಸ್ಪತ್ರೆ ಖರ್ಚನ್ನು ಸ್ವತಃ ಸೋನು ಸೂದ್​ ಅವರೇ ನೋಡಿಕೊಂಡಿದ್ದಾರೆ.

ಮಟನ್​ ಶಾಪ್​ಗೆ ಸೋನು ಸೂದ್​ ಹೆಸರು; ‘ನಾನು ಸಸ್ಯಾಹಾರಿ, ಹೀಗಾಗಿ ನಿಮಗೆ ತರಕಾರಿ ಅಂಗಡಿ ಇಟ್ಟುಕೊಡ್ತೀನಿ’ ಎಂದ ನಟ
ಸೋನು ಸೂದ್
ರಾಜೇಶ್ ದುಗ್ಗುಮನೆ
|

Updated on: May 30, 2021 | 5:02 PM

Share

ಕೊವಿಡ್​ ಮೊದಲನೇ ಅಲೆ ಕಾಣಿಸಿಕೊಂಡಾಗ ಸಹಾಯಕ್ಕೆ ಮುಂದಾಗಿದ್ದ ಸೋನು ಸೂದ್​ ಅದನ್ನು ಈವರೆಗೆ ನಿಲ್ಲಿಸಿಲ್ಲ. ಟ್ವೀಟ್​ ಮಾಡುತ್ತಿದ್ದಂತೆ, ಕಷ್ಟ ಎಂದವರಿಗೆ ಸಹಾಯ ಸಿಗುತ್ತಿದೆ. ಇದೇ ಕಾರಣಕ್ಕೆ ಅವರ ಅಭಿಮಾನಿ ಬಳಗ ದೊಡ್ಡದಾಗಿದೆ. ಸಾಕಷ್ಟು ಶಾಪ್​ಗಳಿಗೆ ಸೋನು ಸೂದ್​ ಹೆಸರಿಡಲಾಗುತ್ತಿದೆ. ಈಗ ಮಟನ್​ ಅಂಗಡಿಗೆ ಸೋನು ಸೂದ್ ಹೆಸರಿಡಲಾಗಿದೆ. ಸೋನು ಸೂದ್​ ಸಸ್ಯಾಹಾರಿ. ಈ ಕಾರಣಕ್ಕೆ ಅಂಗಡಿ ಮಾಲೀಕನಿಗೆ ತರಕಾರಿ ಅಂಗಡಿ ಇಟ್ಟುಕೊಡುವ ಆಲೋಚನೆ ಮಾಡಿದ್ದಾರೆ.

ಸೋನು ಸೂದ್​ ಸಾಕಷ್ಟು ಜನರಿಗೆ ಸಹಾಯ ಮಾಡಿದ್ದಾರೆ. ಕೆಲವರಿಗೆ ಆಮ್ಲಜನಕ ನೀಡಿದರೆ, ಇನ್ನೂ ಕೆಲವರಿಗೆ ಬೆಡ್​ ವ್ಯವಸ್ಥೆ ಮಾಡಿದ್ದಾರೆ. ಸಾಕಷ್ಟು ಜನರ ಆಸ್ಪತ್ರೆ ಖರ್ಚನ್ನು ಸ್ವತಃ ಸೋನು ಸೂದ್​ ಅವರೇ ನೋಡಿಕೊಂಡಿದ್ದಾರೆ. ಹೀಗಾಗಿ, ಜನರಿಗೆ ಸೋನು ಸೂದ್​ ಮೇಲೆ ಭಕ್ತಿ ಭಾವನೆ ಮೂಡಿದೆ. ಕೆಲವರು ಅವರನ್ನು ಪೂಜಿಸುತ್ತಿದ್ದಾರೆ.

ಸೋನು ಸೂದ್​ ಅವರಿಂದ ಸಹಾಯ ಪಡೆದ ಅನೇಕರು ಋಣ ಹೇಗೆ ತೀರಿಸಬೇಕು ಎಂಬುದು ತಿಳಿಯದೇ ತಮ್ಮ ಮಕ್ಕಳಿಗೆ ಅವರದೇ ಹೆಸರಿಟ್ಟಿದ್ದಾರೆ. ಇನ್ನೂ ಕೆಲವರು ಅಂಗಡಿ ಹೆಸರನ್ನು ಬದಲಾಯಿಸಿದ್ದಾರೆ. ಅದೇ ರೀತಿ ತೆಲಂಗಾಣದ ಕರೀಮ್ ​ನಗರದಲ್ಲಿ ಮಟನ್​ ಶಾಪ್​ಗೆ ಸೋನು ಸೂದ್​ ಹೆಸರಿಡಲಾಗಿದೆ. ಇದು ಸೋನು ಸೂದ್​ ಗಮನಕ್ಕೆ ಬಂದಿದೆ. ಈ ಬಗ್ಗೆ ಅವರು ಅಚ್ಚರಿಯ ಟ್ವೀಟ್ ಒಂದನ್ನು ಮಾಡಿದ್ದಾರೆ.

ಸೋನು ಸೂದ್ ಸಸ್ಯಾಹಾರಿ. ಪ್ರಾಣಿಗಳನ್ನು ಕಡಿದು ತಿನ್ನುವುದನ್ನು ಅವರು ವಿರೋಧಿಸುತ್ತಾರೆ. ಬಾಲಿವುಡ್​ನ ಸಾಕಷ್ಟು ಸ್ಟಾರ್​ಗಳು ಇದೇ ಹಾದಿ ಹಿಡಿದಿದ್ದಾರೆ. ಹೀಗಾಗಿ ಮಟನ್​ ಶಾಪ್​ಗೆ ತಮ್ಮ ಹೆಸರು ಇಟ್ಟಿರೋದು ಸೋನು ಸೂದ್​ಗೆ ಅಷ್ಟಾಗಿ ಹಿಡಿಸಿದಂತೆ ಕಾಣಿಸಿಲ್ಲ. ಹೀಗಾಗಿ, ಅವರು ಇದಕ್ಕೆ ಉತ್ತರ ನೀಡಿದ್ದಾರೆ.

ನಾನು ಸಸ್ಯಾಹಾರಿ. ಹೀಗಿರುವಾಗ ನನ್ನ ಹೆಸರಲ್ಲಿ ಮಟನ್​ ಶಾಪ್​​? ಸಸ್ಯಾಹಾರಕ್ಕೆ ಸಂಬಂಧಿಸಿದ ಅಂಗಡಿ ತೆರೆಯಲು ನಾನು ಅವರಿಗೆ ಸಹಾಯ ಮಾಡಲೇ ಎಂದು ಪ್ರಶ್ನೆ ಮಾಡಿದ್ದಾರೆ. ಈ ಟ್ವೀಟ್ ಸಾಕಷ್ಟು ವೈರಲ್​​ ಆಗಿದೆ.

 ಇದನ್ನೂ ಓದಿ: ಸೋನು ಸೂದ್​ ಮಾತ್ರವಲ್ಲ, ಕರುನಾಡಿಗೆ ಕೊವಿಡ್ ಕಷ್ಟದಲ್ಲಿ ನೆರವಾದ ಇನ್ನಿಬ್ಬರು ಬಾಲಿವುಡ್​ ಸ್ಟಾರ್​ಗಳು

ಅಂದು ರಿಜೆಕ್ಟ್​ ಆಗಿದ್ದ ಮ್ಯಾಗಜಿನ್​ನಲ್ಲೇ ಸೋನು ಸೂದ್ ಫೋಟೋ; ಇದಲ್ಲವೇ ಯಶಸ್ಸು?

Follow Us
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು