AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಕಿ ಮುಖಕ್ಕೆ ಏನಾಯ್ತು, ಆಘಾತಕಾರಿ ವಿಷಯ ಹಂಚಿಕೊಂಡ ನಟಿ

ತೆಲುಗಿನ ಜನಪ್ರಿಯ ನಟಿ ಮಂಚು ಲಕ್ಷ್ಮಿ ಇತ್ತೀಚೆಗೆ ವಿಡಿಯೋ ಒಂದನ್ನು ಹಂಚಿಕೊಂಡಿದ್ದರು, ವಿಡಿಯೋದಲ್ಲಿ ಅವರ ತುಟಿಗಳಿಗೆ ಬ್ಯಾಂಡೇಜ್ ಹಾಕಲಾಗಿತ್ತು. ಅಷ್ಟಕ್ಕೂ ನಟಿಗೆ ಏನಾಗಿತ್ತು? ಈಗ ಹೇಗಿದ್ದಾರೆ ಮಂಚು ಲಕ್ಷ್ಮಿ?

ನಾಯಕಿ ಮುಖಕ್ಕೆ ಏನಾಯ್ತು, ಆಘಾತಕಾರಿ ವಿಷಯ ಹಂಚಿಕೊಂಡ ನಟಿ
ಮಂಜುನಾಥ ಸಿ.
|

Updated on: Aug 27, 2024 | 3:04 PM

Share

ತೆಲುಗು ಚಿತ್ರರಂಗದ ಜನಪ್ರಿಯ ನಟಿಯರಲ್ಲಿ ಒಬ್ಬರಾದ ಮಂಚು ಲಕ್ಷ್ಮಿ ಇತ್ತಿಚೆಗೆ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಅವರ ಆ ವಿಡಿಯೋ ನೋಡಿ ಅಭಿಮಾನಿಗಳು ಗಾಬರಿಯಾಗಿದ್ದರು. ಮಂಚು ಲಕ್ಷ್ಮಿ ಬಾಯಿ, ತುಟಿಗೆ ಬ್ಯಾಂಡೇಜ್ ಹಾಕಲಾಗಿತ್ತು. ನಟಿಗೆ ಒದಗಿದ ಸ್ಥಿತಿ ಕಂಡು ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು. ಸ್ವತಃ ಮಂಚು ಲಕ್ಷ್ಮಿ ಅವರೇ ತಮಗೆ ಏನಾಗಿತ್ತು ಎಂಬುದನ್ನು ಹೇಳಿಕೊಂಡಿದ್ದರು. ಅಂದಹಾಗೆ ಮಂಚು ಲಕ್ಷ್ಮಿ ಈಗ ಆರೋಗ್ಯವಾಗಿದ್ದಾರೆ. ಆದರೆ ಅವರಿಗೆ ಆಗಿದ್ದ ಸಮಸ್ಯೆ ತುಸು ಅಪರೂಪವಾದುದು.

ಇತ್ತೀಚೆಗೆ ನಟಿ ಮಂಚು ಲಕ್ಷ್ಮಿ ಅಮೆರಿಕಕ್ಕೆ ಪ್ರವಾಸಕ್ಕೆಂದು ಹೋಗಿದ್ದರು. ಪ್ರವಾಸಕ್ಕೆ ಹೋದಾಗ ಅಲ್ಲಿ ಅವರಿಗೆ ಜ್ವರ ಕಾಣಿಸಿಕೊಂಡಿತಂತೆ. ಜ್ವರವೇ ಅಲ್ಲವೆ ಎಂದು ಎರಡು ಜ್ವರದ ಮಾತ್ರೆಗಳನ್ನು ಅವರು ತೆಗೆದುಕೊಂಡಿದ್ದಾರೆ. ಕೂಡಲೇ ಅವರ ತುಟಿಗಳು ಊದಿಕೊಳ್ಳಲು ಆರಂಭಿಸಿವೆ. ಬಳಿಕ ಮಂಚು ಲಕ್ಷ್ಮಿ ಅದಕ್ಕೆ ಸೂಕ್ತ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಊದಿಕೊಂಡ ತುಟಿ ಸಾಮಾನ್ಯ ಸ್ಥಿತಿಗೆ ಮರಳಲು ಎರಡು ದಿನಗಳು ತೆಗೆದುಕೊಂಡಿತಂತೆ. ವೈದ್ಯರ ಸಲಹೆ ಮೇರೆಗೆ ಚಿಕಿತ್ಸೆಗಳನ್ನು ತೆಗೆದುಕೊಂಡ ಬಳಿಕ ಅವರು ಈಗ ಆರೋಗ್ಯವಾಗಿದ್ದಾರೆ.

ಇದನ್ನೂ ಓದಿ:ರಿಯಾಗೆ ಬೆಂಬಲಕ್ಕೆ ವಿದ್ಯಾಬಾಲನ್ ಮತ್ತು ಲಕ್ಷ್ಮಿಮಂಚು

ಮಂಚು ಲಕ್ಷ್ಮಿ ಹೇಳಿರುವಂತೆ, ಅವರಿಗೆ ಡ್ರಗ್ ಅಲರ್ಜಿ ಆಗಿತ್ತಂತೆ. ಸಾಮಾನ್ಯ ಜ್ವರವೆಂದು ತೆಗೆದುಕೊಂಡ ಮಾತ್ರೆಗಳು ಅವರ ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದ ಕಾರಣ ಅವರಿಗೆ ಸಮಸ್ಯೆ ಕಾಣಿಸಿಕೊಂಡಿದೆ. ಸೂಕ್ತ ಚಿಕಿತ್ಸೆಯನ್ನು ಸಮಯಕ್ಕೆ ಸರಿಯಾಗಿ ತೆಗೆದುಕೊಳ್ಳದೇ ಹೋಗಿದ್ದಿದ್ದರೆ ಇಡೀ ದೇಹಕ್ಕೆ ಅಲರ್ಜಿ ವ್ಯಾಪಿಸುವ ಅಪಾಯ ಇತ್ತೆಂದು ನಟಿ ಹೇಳಿಕೊಂಡಿದ್ದಾರೆ. ಮುಂದುವರೆದು, ನಮ್ಮ ದೇಹದ ಬಗ್ಗೆ ನಮಗೆ ಚೆನ್ನಾಗಿ ಅರಿವಿರುವುದು ಬಹಳ ಮುಖ್ಯ, ನಮ್ಮ ದೇಹಕ್ಕೆ ಯಾವುದು ಸರಿ ಹೊಂದುತ್ತದೆ? ಯಾವುದು ಸರಿ ಹೊಂದುವುದಿಲ್ಲ? ಯಾವ ವಸ್ತುವಿಗೆ ನಮ್ಮ ದೇಹ ಹೇಗೆ ರಿಯಾಕ್ಟ್ ಮಾಡುತ್ತದೆ ಎಂಬುದರ ಅರಿವು ನಮಗೆ ಇರಬೇಕು ಎಂದು ನಟಿ ಮಂಚು ಲಕ್ಷ್ಮಿ ಹೇಳಿಕೊಂಡಿದ್ದಾರೆ.

ಮಂಚು ಲಕ್ಷ್ಮಿ, ತೆಲುಗಿನ ಜನಪ್ರಿಯ ಹಿರಿಯ ನಟ ಮತ್ತು ರಾಜಕಾರಣಿ ಮೋಹನ್ ಬಾಬು ಅವರ ಪುತ್ರಿ. ತೆಲುಗಿನ ಹಲವು ಸಿನಿಮಾಗಳಲ್ಲಿ ಮಂಚು ಲಕ್ಷ್ಮಿ ನಟಿಸಿದ್ದಾರೆ. ಇದೀಗ ಅವಕಾಶಗಳನ್ನು ಅರಸಿ ಬಾಲಿವುಡ್​ನತ್ತ ಬಂದಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ಅವಕಾಶಗಳ ಹುಡುಕಾಟದಲ್ಲಿ ಮಂಚು ಲಕ್ಷ್ಮಿ ಇದ್ದು, ಕೆಲವು ವೆಬ್ ಸರಣಿಗಳಲ್ಲಿ ಮಂಚು ಲಕ್ಷ್ಮಿ ನಟಿಸುತ್ತಿದ್ದಾರೆ ಎನ್ನಲಾಗಿದೆ. ತೆಲುಗು ಚಿತ್ರರಂಗದ ಜನಪ್ರಿಯ ನಾಯಕ ನಟರಾದ ಮಂಚು ವಿಷ್ಣು ಹಾಗೂ ಮಂಚು ಮನೋಜ್ ಅವರ ಸಹೋದರಿ ಮಂಚು ಲಕ್ಷ್ಮಿ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ