AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನ ತಂದೆ ದೇವರು’ ಮೋಹನ್ ಬಾಬು ಪರವಾಗಿ ಕ್ಷಮೆ ಕೇಳಿ ಕಣ್ಣೀರು ಹಾಕಿದ ಮಂಚು ಮನೋಜ್

Manchu Family: ತೆಲುಗು ಚಿತ್ರರಂಗದ ತಾರಾ ಕುಟುಂಬವಾದ ಮಂಚು ಕುಟುಂಬದ ಆಸ್ತಿ ವಿವಾದ ಹಾದಿ-ಬೀದಿ ಜಗಳವಾಗಿ ಮಾರ್ಪಟ್ಟಿದೆ. ಹಿರಿಯ ನಟ ಮೋಹನ್ ಬಾಬು ನಿನ್ನೆ ವರದಿಗಾರರ ಮೇಲೆ ಹಲ್ಲೆ ಮಾಡಿದ್ದಾರೆ. ಇದೀಗ ಮಂಚು ಮನೋಜ್ ತಂದೆಯ ಪರವಾಗಿ ಕ್ಷಮೆ ಕೇಳಿದ್ದು, ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ.

‘ನನ್ನ ತಂದೆ ದೇವರು’ ಮೋಹನ್ ಬಾಬು ಪರವಾಗಿ ಕ್ಷಮೆ ಕೇಳಿ ಕಣ್ಣೀರು ಹಾಕಿದ ಮಂಚು ಮನೋಜ್
ಮಂಚು ಮನೋಜ್-ಮೋಹನ್ ಬಾಬು
ಮಂಜುನಾಥ ಸಿ.
|

Updated on: Dec 11, 2024 | 12:36 PM

Share

ತೆಲುಗು ಚಿತ್ರರಂಗದ ತಾರಾ ಕುಟುಂಬಗಳಲ್ಲಿ ಒಂದಾದ ಮೋಹನ್ ಬಾಬು ಕುಟುಂಬದ ಜಗಳ ಬೀದಿಗೆ ಬಂದಿದೆ. ಮೋಹನ್ ಬಾಬು ಕಿರಿಯ ಪುತ್ರ ಮಂಚು ಮನೋಜ್ ಅನ್ನು ಮನೆಯಿಂದ ಹೊರಗೆ ಹಾಕಲಾಗಿದ್ದು, ನಿನ್ನೆ ರಾತ್ರಿ ಮೋಹನ್ ಬಾಬು ಮನೆಗೆ ಮಂಚು ಮನೋಜ್ ಹೋಗಲು ಯತ್ನಿಸಿದಾಗ ಮೋಹನ್ ಬಾಬು, ಮಗನನ್ನು ತಡೆದಿದ್ದಲ್ಲದೆ ಆ ವೇಳೆ ಹಾಜರಿದ್ದ ಟಿವಿ9 ವರದಿಗಾರನ ಮೇಲೆ ಹಲ್ಲೆ ಸಹ ಮಾಡಿದ್ದರು.

ವರದಿಗಾರನ ಮೇಲೆ ಮೋಹನ್ ಬಾಬು ಹಲ್ಲೆ ಖಂಡಿಸಿ ಮೋಹನ್ ಬಾಬು ಮನೆಯ ಎದುರು ಇಂದು ತೆಲುಗು ಮಾಧ್ಯಮ ವರದಿಗಾರರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಮಾಧ್ಯಮಗಳ ಬಳಿ ಮಾತನಾಡಿದ ಮಂಚು ಮನೋಜ್, ‘ನನ್ನ ತಂದೆ ನನಗೆ ದೇವರಿದ್ದಂತೆ, ಅವರು ಮಾಧ್ಯಮಗಳ ಮೇಲೆ ಹಲ್ಲೆ ಮಾಡಿದ್ದಕ್ಕೆ ಅವರ ಪರವಾಗಿ ನಾನು ಕ್ಷಮೆ ಕೇಳುತ್ತೇನೆ’ ಎಂದು ಕಣ್ಣೀರು ಹಾಕಿದ್ದಾರೆ.

‘ನಾನು ಕುಟುಂಬದಿಂದ ಯಾವುದೇ ಹಣ ಅಥವಾ ಆಸ್ತಿ ಕೇಳಿಲ್ಲ. ನಾನು ನನ್ನ ಆತ್ಮಗೌರವಕ್ಕಾಗಿ ಈ ಹೋರಾಟ ಮಾಡುತ್ತಿದ್ದೇನೆ. ನಾನು ಹಾಗೂ ನನ್ನ ಪತ್ನಿ ಕುಟುಂಬದಿಂದ ದೂರವೇ ಇದ್ದೆವು. ನನ್ನ ಸಹೋದರ ಮಂಚು ವಿಷ್ಣು ದುಬೈಗೆ ಶಿಫ್ಟ್ ಆದ. ಆಗ ನಮ್ಮ ಕುಟುಂಬದ ಆಪ್ತರು ಕೆಲವರು ಒತ್ತಾಯ ಮಾಡಿದ ಕಾರಣ ಕುಟುಂಬಕ್ಕೆ ಬೆಂಬಲವಾಗಿರಲೆಂದು ನಾನು ಮನೆಗೆ ಮರಳಿದೆ. ಆದರೆ ಈಗ ನನ್ನನ್ನು ಹೊರಗೆ ಹಾಕುವ ಪ್ರಯತ್ನ ನಡೆದಿದೆ. ವಿಜಯ್ ಎಂಬಾತ ಹಾಗೂ ಮಂಚು ವಿಷ್ಣು ಅವರ ಮಾತು ಕೇಳಿ ನನ್ನ ತಂದೆಯೇ ನನ್ನನ್ನು ದೂರ ಮಾಡುತ್ತಿದ್ದಾರೆ’ ಎಂದಿದ್ದಾರೆ ಮಂಚು ಮನೋಜ್.

ಇದನ್ನೂ ಓದಿ:ಅಪ್ಪನ ಮೇಲೆ ದೂರು ನೀಡಿದ ನಟ, ಈಗ ಅಣ್ಣನ ಮೇಲೂ ಆರೋಪ

‘ನನ್ನ ಮನೆಯಲ್ಲಿಯೇ ನನ್ನ ಮೇಲೆ ವಿನಯ್ ಹಾಗೂ ಕಿರಣ್ ಎಂಬುವರು ಹಲ್ಲೆ ಮಾಡಿದರು. ಶೂಟಿಂಗ್ ವೇಳೆ ನನ್ನ ಕಾಲಿಗೆ ಗಾಯ ಆಗಿತ್ತು. ಆ ಗಾಯ ಈಗ ಇನ್ನಷ್ಟು ಹೆಚ್ಚಾಗಿದೆ. ನನ್ನ ಪತ್ನಿ ಹಾಗೂ ಏಳು ತಿಂಗಳ ಮಗುವನ್ನು ಸಹ ಅವರು ನಿಂದಿಸಿದ್ದಾರೆ. ಈಗ ನಾನು ಈ ಹೋರಾಟವನ್ನು ನನ್ನ ಆತ್ಮಗೌರವಕ್ಕಾಗಿ ಮಾಡುತ್ತಿದ್ದೇನೆ’ ಎಂದಿದ್ದಾರೆ ಮಂಚು ಮನೋಜ್.

ಮೋಹನ್ ಬಾಬು, ಪುತ್ರ ಮಂಚು ಮನೋಜ್ ಪತ್ನಿಯ ಮಾತು ಕೇಳಿ ಗಲಾಟೆ ಆರಂಭಿಸಿದ್ದಾನೆ. ನನ್ನ ಮೇಲೂ ಹಲ್ಲೆ ಮಾಡಿದ್ದಾನೆ ಎಂದು ಆರೋಪ ಮಾಡಿದ್ದಾರೆ. ನಿನ್ನೆ ರಾತ್ರಿ ನಡೆದ ಗಲಾಟೆಯ ಬಳಿಕ ಮೋಹನ್ ಬಾಬು ಆಸ್ಪತ್ರೆಗೆ ದಾಖಲಾಗಿದ್ದು, ಅವರ ತಲೆಗೆ ಪೆಟ್ಟಾಗಿದೆ ಎನ್ನಲಾಗುತ್ತಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ