AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Prakash Raj: ಸ್ಟಾರ್ ನಟರೇ ಮತದಾನ ಮಾಡಲಿಲ್ಲ; ಚುನಾವಣೆಯಲ್ಲಿ ಪ್ರಕಾಶ್ ರಾಜ್ ಪಡೆದ ಮತಗಳೆಷ್ಟು?

MAA Elections 2021: ತೆಲುಗು ಚಿತ್ರರಂಗದ ಮೂವೀ ಆರ್ಟಿಸ್ಟ್ ಅಸೋಸಿಯೇಷನ್​ನ 925 ಸದಸ್ಯರಲ್ಲಿ 883 ಸದಸ್ಯರಿಗೆ ಮತದಾನ ಹಕ್ಕು ಲಭ್ಯವಿತ್ತು. ಈ ಪೈಕಿ 655 ಮತಗಳಷ್ಟೇ ಚಲಾವಣೆಗೊಂಡಿದ್ದವು.

Prakash Raj: ಸ್ಟಾರ್ ನಟರೇ ಮತದಾನ ಮಾಡಲಿಲ್ಲ; ಚುನಾವಣೆಯಲ್ಲಿ ಪ್ರಕಾಶ್ ರಾಜ್ ಪಡೆದ ಮತಗಳೆಷ್ಟು?
ಪ್ರಕಾಶ್​-ವಿಷ್ಣು ಮಂಚು
TV9 Web
| Edited By: |

Updated on: Oct 11, 2021 | 10:40 AM

Share

ಹೈದರಾಬಾದ್: ತೆಲುಗು ಚಿತ್ರರಂಗದ ಮೂವೀ ಆರ್ಟಿಸ್ಟ್ ಅಸೋಸಿಯೇಷನ್ (MAA) ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ತೆಲುಗು ನಟ ವಿಷ್ಣು ಮಂಚು ಮತ್ತು ಪ್ರಕಾಶ್ ರಾಜ್ ನಡುವೆ ಭಾರಿ ಹಣಾಹಣಿಯೇ ನಡೆದಿತ್ತು. ಆದರೆ ಅಂತಿಮವಾಗಿ ವಿಷ್ಣು ಮಂಚು 381 ಮತ ಗಳಿದಸಿದರೆ ಪ್ರಕಾಶ್ ರಾಜ್ 274 ಮತ ಗಳಿಸಲಷ್ಟೇ ಶಕ್ಯರಾದರು. ತೆಲುಗು ಚಿತ್ರರಂಗದ ಮೂವೀ ಆರ್ಟಿಸ್ಟ್ ಅಸೋಸಿಯೇಷನ್​ನ (MAA) ಇನ್ನುಳಿದ ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶ ಸೋಮವಾರವಷ್ಟೇ ಘೋಷಣೆಯಾಗಬೇಕಿದೆ.

ಅಧ್ಯಕ್ಷ ಸ್ಥಾನದ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಪ್ರತಿಕ್ರಿಯೆ ನೀಡಿರುವ ಪ್ರಕಾಶ್ ರಾಜ್, ‘ಫಲಿತಾಂಶವನ್ನು ಗೌರವಿಸುತ್ತೇನೆ. ವಿಷ್ಣು ಮಂಚು ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ’ ಎಂದು ತಿಳಿಸಿದ್ದಾರೆ. ಅಲ್ಲದೇ ಸೋಲು ಗೆಲುವನ್ನೂ ಮೀರಿ ಚಿತ್ರರಂಗದ ಹಿತಕ್ಕಾಗಿ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಸಹ ಪ್ರಕಾಶ್ ರಾಜ್ ಕರೆ ಕೊಟ್ಟಿದ್ದಾರೆ.

ತೆಲುಗು ಚಿತ್ರರಂಗದ ಮೂವೀ ಆರ್ಟಿಸ್ಟ್ ಅಸೋಸಿಯೇಷನ್​ನ 925 ಸದಸ್ಯರಲ್ಲಿ 883 ಸದಸ್ಯರಿಗೆ ಮತದಾನ ಹಕ್ಕು ಲಭ್ಯವಿತ್ತು. ಈ ಪೈಕಿ 655 ಮತಗಳಷ್ಟೇ ಚಲಾವಣೆಗೊಂಡಿದ್ದವು. ಮತ ಚಲಾಯಿಸದವರ ಪೈಕಿ ಖ್ಯಾತನಾಮರಾದ ಮಹೇಶ್ ಬಾಬು, ವೆಂಕಟೇಶ್, ಅಲ್ಲು ಅರ್ಜುನ್, ಎನ್​ಟಿಆರ್ ಮತ್ತು ನಾಗ ಚೈತನ್ಯ ಸಹ ಸೇರಿದ್ದಾರೆ.

ಪ್ರಕಾಶ್ ರೈ ಅವರು ಮೂಲತಃ ತೆಲುಗು ನಟ ಅಲ್ಲ. ಹಾಗಾಗಿ ಅವರು ಈ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ವಿರೋಧ ವ್ಯಕ್ತಪಡಿಸಲಾಗಿತ್ತು. ಆದರೆ ಹಲವು ಸ್ಟಾರ್ ಕಲಾವಿದರು ಪ್ರಕಾಶ್ ರಾಜ್ ಪರ ನಿಂತಿದ್ದರೂ. ಆದರೂ ಅವರು ಚುನಾವಣೆಯಲ್ಲಿ ಸೋಲನುಭವಿಸಬೇಕಾಯಿತು.

ಇದನ್ನೂ ಓದಿ: 

MAA Election Result: ಕನ್ನಡದ ಪ್ರಕಾಶ್​ ರಾಜ್​ಗೆ ಮುಖಭಂಗ; ತೆಲುಗು ನಟ ವಿಷ್ಣು ಮಂಚುಗೆ ಜಯ

‘ತಾಯಿ ಆಗಲು ಬಯಸಿದ್ರು ಸಮಂತಾ, ಆದರೆ..’; ನಾಗ ಚೈತನ್ಯ ಜತೆಗಿನ ಡಿವೋರ್ಸ್​ ಬಳಿಕ ನಿರ್ಮಾಪಕಿ ಅಚ್ಚರಿ ಹೇಳಿಕೆ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ