AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆವೇಶಂ’ ಚಿತ್ರವನ್ನು ರಿಮೇಕ್ ಮಾಡಲು ಮುಂದಾದ ಟಾಲಿವುಡ್​ ಯುವ ನಟ

Avesham movie: ಫಹಾದ್ ಫಾಸಿಲ್ ನಟನೆಯ ‘ಆವೇಶಂ’ ಮಲಯಾಳಂ ಸಿನಿಮಾ ಭಾರಿ ದೊಡ್ಡ ಹಿಟ್ ಆಗಿತ್ತು. ಸಿನಿಮಾನಲ್ಲಿ ಫಹಾದ್ ನಟನೆಯನ್ನು ಕೊಂಡಾಡದವರೇ ಇಲ್ಲ. ಈ ಸಿನಿಮಾವನ್ನು ತೆಲುಗಿಗೆ ರೀಮೇಕ್ ಮಾಡಬೇಕು ಎಂದು ತೆಲುಗು ನಟ ಅಂದುಕೊಂಡಿದ್ದರಂತೆ. ಆದರೆ ಅವರಿಗೆ ‘ಆವೇಶಂ’ ಸಿನಿಮಾದ ಹಕ್ಕುಗಳು ಸಿಗಲಿಲ್ಲವಂತೆ.

‘ಆವೇಶಂ’ ಚಿತ್ರವನ್ನು ರಿಮೇಕ್ ಮಾಡಲು ಮುಂದಾದ ಟಾಲಿವುಡ್​ ಯುವ ನಟ
Avesham
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 17, 2025 | 7:41 PM

Share

2024ರಲ್ಲಿ ಮಲಯಾಳಂನಲ್ಲಿ ರಿಲೀಸ್ ಆಗಿ ಸೂಪರ್ ಹಿಟ್ ಆದ ಸಿನಿಮಾಗಳಲ್ಲಿ ‘ಆವೇಶಂ’ ಚಿತ್ರ ಕೂಡ ಒಂದು. ಈ ಚಿತ್ರದಲ್ಲಿ ಫಹಾದ್ ಫಾಸಿಲ್ ಅವರು ಮುಖ್ಯ ಪಾತ್ರದಲ್ಲಿ ನಟಿಸಿದರು. ಅವರದ್ದು ವಿಲನ್ ಪಾತ್ರ. ಈ ಚಿತ್ರ ಭಿನ್ನವಾಗಿ ಮೂಡಿ ಬಂದಿತ್ತು. ಈ ಸಿನಿಮಾನ ರಿಮೇಕ್ ಮಾಡಿದರೆ ಬೇರೆ ಭಾಷೆಯಲ್ಲಿ ಯಶಸ್ಸು ಕಾಣುತ್ತದೆ ಎಂದು ಹೇಳಲಾಗದು. ಏಕೆಂದರೆ ಈಗಾಗಲೇ ಆ ಪಾತ್ರ ಹಾಗೂ ಸಿನಿಮಾನ ಎಲ್ಲರೂ ನೋಡಿಯಾಗಿದೆ. ಆದಾಗ್ಯೂ ತೆಲುಗಿನ ಖ್ಯಾತ ಹೀರೋ ವಿಷ್ಣು ಮಂಚುಗೆ ಹೀಗೊಂದು ಐಡಿಯಾ ಬಂದಿದೆ.

‘ಕಣ್ಣಪ್ಪ’ ಸಿನಿಮಾದಲ್ಲಿ ವಿಷ್ಣು ಮಂಚು ನಟಿಸುತ್ತಿದ್ದಾರೆ. ಈ ಸಿನಿಮಾ ಈ ವಾರ ತೆರೆಗೆ ಬರಲಿದೆ. ಈ ಸಿನಿಮಾದಲ್ಲಿ ವಿಷ್ಣು ಅವರು ಕಣ್ಣಪ್ಪನ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಮೋಹನ್ ಬಾಬು, ಅಕ್ಷಯ್ ಕುಮಾರ್, ಮೋಹನ್​ಲಾಲ್, ಪ್ರಭಾಸ್ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ಪ್ರಚಾರದ ವೇಳೆ ಅವರಿಗೆ ವಿವಿಧ ರೀತಿಯ ಪ್ರಶ್ನೆಗಳು ಎದುರಾಗುತ್ತಿವೆ. ಈ ಚಿತ್ರದ ಈವೆಂಟ್ ಕೊಚ್ಚಿಯಲ್ಲಿ ನಡೆದಿದೆ.  ಈ ವೇಳೆ ಅವರಿಗೆ ಮಲಯಾಳಂ ಸಿನಿಮಾಗಳ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರ ನಿಡಿದ್ದಾರೆ.

‘ನಾನು ಮೋಹನ್​ಲಾಲ್ ಹಾಗೂ ಮಮ್ಮೂಟಿ ಸಿನಿಮಾಗಳನ್ನು ಮಿಸ್ ಮಾಡಿಕೊಳ್ಳುವುದಿಲ್ಲ. ಫಹಾದ್ ಫಾಸಿಲ್ ಅವರ ನಟನೆ ನಂಗೆ ತುಂಬಾನೇ ಇಷ್ಟ. ಅವರ ಇಂಟೆನ್ಸಿಟಿ ಬೇರೆಯದೇ ಹಂತದಲ್ಲಿ ಇರುತ್ತದೆ’ ಎಂದು ವಿಷ್ಣು ಮಂಚು ಅವರು ಹೇಳಿದರು.

ಇದನ್ನೂ ಓದಿ:ಬಿಡುಗಡೆಗೂ ಮುನ್ನವೇ ‘ಕಣ್ಣಪ್ಪ’ ಸಿನಿಮಾ ನೋಡಿ ಭೇಷ್ ಎಂದ ರಜನಿಕಾಂತ್

2024ರಲ್ಲಿ ರಿಲೀಸ್ ಆದ ‘ಆವೇಶಂ’ ಸಿನಿಮಾ ಬಗ್ಗೆ ಅವರು ಮಾತನಾಡಿದರು. ‘ಆವೇಶಂ ಸಿನಿಮಾನ ನನಗೆ ತೆಲುಗಿಗೆ ರಿಮೇಕ್ ಮಾಡಬೇಕಿತ್ತು. ಆದರೆ, ದುರಾದೃಷ್ಟ ಎಂದರೆ ಇದರ ಹಕ್ಕನ್ನು ಈಗಾಗಲೇ ಯಾರೋ ಪಡೆದುಕೊಂಡು ಬಿಟ್ಟಿದ್ದಾರೆ’ ಎಂದು ಬೇಸರ ಹೊರಹಾಕಿದರು.

‘ಆವೇಶಂ’ ಸಿನಿಮಾ  ಮಲಾಯಳಂನಲ್ಲಿ ಹಿಟ್ ಆಯಿತು. ಇದಕ್ಕೆ ಕಾರಣ ಫಹಾದ್ ಫಾಸಿಲ್ ಅವರ ನಟನೆ. ಅವರು ಇದಕ್ಕೆ ಬೇರೆಯದೇ ರೀತಿಯ ಚಾರ್ಮ್ ಕೊಟ್ಟರು. ಆದರೆ, ಈ ಸಿನಿಮಾ ಬೇರೆ ಭಾಷೆಗೆ ರಿಮೇಕ್ ಆದರೆ ಹಿಟ್ ಆಗೋದು ಅನುಮಾನವೇ. ಈ ಚಿತ್ರವನ್ನು ತೆಲುಗಿನಲ್ಲಿ ಯಾರು ಮಾಡುತ್ತಾರೆ ಎಂಬ ಕುತೂಹಲ ಮೂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಡಿಕೆಶಿ ದಿಲ್ಲಿಗೆ ಹೋಗುತ್ತಿದ್ದಂತೆಯೇ ಇತ್ತ ಅಹಿಂದ ಸಮಾವೇಶಕ್ಕೆ ಸಿದ್ಧತೆ
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಹುಬ್ಬಳ್ಳಿ ಮರ್ಯಾದಾ ಹತ್ಯೆ​​: ಗರ್ಭಿಣಿ ಕೊಂದ 24 ಗಂಟೆಯಲ್ಲೇ ಅರೆಸ್ಟ್​
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಧರ್ಮದ ಸಂರಕ್ಷಕರಾಗಲು ಆರ್‌ಎಸ್‌ಎಸ್‌ಗೆ ಯಾರು ಅಧಿಕಾರ ನೀಡಿದ್ದು
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕೈಕೊಟ್ಟ ಕೇಂದ್ರದ ವಾಹನ್-4: ಬೇರೆ ರಾಜ್ಯಗಳಿಗೆ ತೆರಳುವ ವಾಹನಗಳ ಪರದಾಟ
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ?
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
GBA ಕಂದಾಯ ಆಯುಕ್ತ ಮುನೀಶ್ ಮೌದ್ಗಿಲ್ ವಿರುದ್ಧ ಸಿಡಿದೆದ್ದ ನೌಕರರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಜ್ಯುವೆಲ್ಲರಿ ಅಂಗಡಿಗೆ ಕನ್ನ: ಸಿಸಿಟಿವಿಯ ಡಿವಿಆರ್ ಕದ್ದೊಯ್ದ ಖದೀಮರು
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಮದ್ವೆಯಾದ ಹತ್ತೇ ದಿನದಲ್ಲಿ ನವವಿವಾಹಿತ ಜೈಲು ಪಾಲು!
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ಅಲೋಕ್ ಕುಮಾರ್ ವಿಶೇಷ ಕಾರ್ಯಾಚರಣೆ:ಮಂಗಳೂರು ಜೈಲು ಪರಿಶೀಲನೆ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ
ವಾಹನ ಸವಾರರೇ ಎಚ್ಚರ ಎಚ್ಚರ: ಬೆಂಗಳೂರಲ್ಲಿ ಪಂಕ್ಚರ್ ಮಾಫಿಯಾ ಮತ್ತೆ ಸಕ್ರಿಯ