AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೆಸಿ ಪಾತ್ರ ಮಾಡಿಸಿಕೊಂಡು ಪ್ರಭಾಸ್ ಬಗ್ಗೆ ಲಘುವಾಗಿ ಮಾತನಾಡಿದ ನಟ

Prabhas and Manchu Vishnu: ಮಂಚು ವಿಷ್ಣು ನಟನೆಯ ‘ಕಣ್ಣಪ್ಪ’ ಸಿನಿಮಾನಲ್ಲಿ ಪ್ರಭಾಸ್ ಒಂದು ರೂಪಾಯಿ ಸಹ ಹಣ ಪಡೆಯದೆ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಅದರಿಂದಾಗಿ ಸಿನಿಮಾಕ್ಕೆ ಹೆಚ್ಚಿನ ಮೌಲ್ಯ ಬಂದಿದೆ. ಆದರೆ ಈಗ ತಮಗೆ ಸಹಾಯ ಮಾಡಿದ ಪ್ರಭಾಸ್ ನಟನೆ ಬಗ್ಗೆ ಮಂಚು ವಿಷ್ಣು ಲಘುವಾಗಿ ಮಾತನಾಡಿದ್ದಾರೆ.

ಕರೆಸಿ ಪಾತ್ರ ಮಾಡಿಸಿಕೊಂಡು ಪ್ರಭಾಸ್ ಬಗ್ಗೆ ಲಘುವಾಗಿ ಮಾತನಾಡಿದ ನಟ
Manchu Vishnu Prabhas
ಮಂಜುನಾಥ ಸಿ.
|

Updated on: Apr 26, 2025 | 8:09 AM

Share

ನಟ ಪ್ರಭಾಸ್ (Prabhas) ಅತಿಥಿ ಪಾತ್ರಗಳಲ್ಲಿ ನಟಿಸುವುದು ಬಹಳ ವಿರಳ. ಬಾಲಿವುಡ್​ನ ಸ್ಟಾರ್ ನಟರ ಸಿನಿಮಾಗಳಲ್ಲಿ ಅತಿಥಿ ಪಾತ್ರ ಮಾಡುವಂತೆ ಆಹ್ವಾನ ಬಂದಾಗಲೂ ಅವರು ಸರಳವಾಗಿ ನಿರಾಕರಿಸಿದ್ದಾರೆ. ಆದರೆ ಇತ್ತೀಚೆಗೆ ಅವರು ‘ಕಣ್ಣಪ್ಪ’ ಸಿನಿಮಾದ ಅತಿಥಿ ಪಾತ್ರದಲ್ಲಿ ನಟಿಸಿದ್ದಾರೆ. ಆ ಸಿನಿಮಾದ ನಾಯಕ ಮಂಚು ವಿಷ್ಣು, ಸ್ಟಾರ್ ನಟನೇನೂ ಅಲ್ಲ. ಅವರ ತಂದೆ ಮೋಹನ್ ಬಾಬು ಮೇಲಿನ ಪ್ರೀತಿಗೆ, ಗೆಳೆಯ ಮಂಚು ವಿಷ್ಣುಗೆ ಸಹಾಯ ಆಗಲೆಂದು ಒಂದು ರೂಪಾಯಿ ಸಹ ಹಣ ಪಡೆಯದೆ ಅತಿಥಿ ಪಾತ್ರದಲ್ಲಿ ಪ್ರಭಾಸ್ ನಟಿಸಿದ್ದರು. ಆದರೆ ಈಗ ಮಂಚು ವಿಷ್ಣು, ತಮಗೆ ಸಹಾಯ ಮಾಡಿದ ಪ್ರಭಾಸ್ ಬಗ್ಗೆ ಲಘುವಾಗಿ ಮಾತನಾಡಿದ್ದಾರೆ.

‘ಕಣ್ಣಪ್ಪ’ ಸಿನಿಮಾದ ಪ್ರಚಾರದಲ್ಲಿ ಭಾಗಿ ಆಗಿರುವ ಮಂಚು ವಿಷ್ಣು, ಸಂದರ್ಶನವೊಂದರಲ್ಲಿ ಮಾತನಾಡುತ್ತಾ, ‘ಪ್ರಭಾಸ್ ಒಬ್ಬ ಸಾಮಾನ್ಯ ನಟ. ಆತನ ನಟನೆ ನನಗೆ ಸಾಮಾನ್ಯ ಎನಿಸಿತು. ಆತ ಲೆಂಜೆಂಡರಿ ನಟ ಅಲ್ಲ. ಆತ ಲೆಂಜಡರಿ ನಟ ಎನಿಸಿಕೊಳ್ಳಲು ಇನ್ನೂ ಸಾಕಷ್ಟು ಸಮಯ ಇದೆ. ಆತ ಈಗಿನ್ನೂ ಸಾಮಾನ್ಯ ನಟ. ಆದರೆ ಮೋಹನ್​ಲಾಲ್ ಒಬ್ಬ ಲೆಜೆಂಡರಿ ನಟ’ ಎಂದಿದ್ದಾರೆ. ಪ್ರಭಾಸ್ ಅನ್ನು ಸಾಮಾನ್ಯ ನಟ ಎನ್ನುವ ಮೂಲಕ ಅವರ ಅಭಿಮಾನಿಗಳ ಕೆಂಗಣ್ಣಿಗೆ ಗುರಿ ಆಗಿದ್ದಾರೆ.

ಆದರೆ ಅದೇ ಸಂದರ್ಶನದಲ್ಲಿ ಮಾತನಾಡಿರುವ ಮಂಚು ವಿಷ್ಣು, ‘ಸಮಯ ಕಳೆದಂತೆ ಪ್ರಭಾಸ್ ಸಹ ಖಂಡಿತವಾಗಿ ಲೆಜೆಂಡರಿ ನಟ ಆಗುತ್ತಾರೆ. ಮೋಹನ್​ಲಾಲ್ ಅವರನ್ನು ಸಮಯವೇ ಲೆಜೆಂಡರಿ ನಟನನ್ನಾಗಿ ಮಾಡಿದೆ. ಪ್ರಭಾಸ್ ಸಹ ಲೆಜೆಂಡರಿ ನಟ ಆಗುತ್ತಾರೆಂಬ ವಿಶ್ವಾಸ ನನಗೆ ಇದೆ’ ಎಂದಿದ್ದಾರೆ ಮಂಚು ವಿಷ್ಣು.

ಇದನ್ನೂ ಓದಿ:ವಿಡಿಯೋ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ: ಮಂಚು ವಿಷ್ಣು ಎಚ್ಚರಿಕೆ

‘ಕಣ್ಣಪ್ಪ’ ಸಿನಿಮಾ ಬೇಡರ ಕಣ್ಣಪ್ಪನ ಕತೆಯನ್ನು ಒಳಗೊಂಡಿದೆ. ಆದರೆ ಸಿನಿಮಾದ ಟ್ರೈಲರ್ ನೋಡಿದರೆ ಇದೊಂದು ಭಕ್ತಿ ಪ್ರಧಾನ ಸಿನಿಮಾ ಇದ್ದಂತಿಲ್ಲ ಬದಲಿಗೆ ಆಕ್ಷನ್ ಸಿನಿಮಾ ಇದ್ದಂತಿದೆ. ಸತತ ಸೋಲು ಕಂಡು ತೆಲುಗು ಚಿತ್ರರಂಗದಲ್ಲಿ ಸ್ಥಾನವೇ ಇಲ್ಲದಂತಾಗಿರುವ ಮಂಚು ವಿಷ್ಣು ಅನ್ನು ಮತ್ತೆ ತೆಲುಗು ಚಿತ್ರರಂಗದಲ್ಲಿ ನೆಲೆಗೊಳಿಸಲು ಅವರ ತಂದೆ ಮೋಹನ್ ಬಾಬು ‘ಕಣ್ಣಪ್ಪ’ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಸಿನಿಮಾ ಅನ್ನು ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ಬಿಡುಗಡೆ ಮಾಡುತ್ತಿದ್ದು, ಸಿನಿಮಾದಲ್ಲಿ ಬಾಲಿವುಡ್ ನಟ ಅಕ್ಷಯ್ ಕುಮಾರ್, ಮಲಯಾಳಂ ಸ್ಟಾರ್ ನಟ ಮೋಹನ್​ಲಾಲ್ ಅವರನ್ನು ಸಹ ಅತಿಥಿ ಪಾತ್ರಗಳಲ್ಲಿ ಹಾಕಿಕೊಂಡಿದ್ದಾರೆ. ಸಿನಿಮಾ ಶೀಘ್ರವೇ ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು