AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಣ್ಣಪ್ಪ’ ಸಿನಿಮಾ ಬಿಡುಗಡೆ ಮುಂದೂಡಿದ ಮಂಚು ಮನೋಜ್, ಯಾವುದರ ಭಯ?

Kannappa: ಮಂಚು ವಿಷ್ಣು ನಟನೆಯ ‘ಕಣ್ಣಪ್ಪ’ ಸಿನಿಮಾ ಬಿಡುಗಡೆ ದಿನಾಂಕ ಈಗಾಗಲೇ ಘೋಷಣೆ ಆಗಿತ್ತು. ಸಿನಿಮಾದ ಪ್ರಚಾರ ಕಾರ್ಯ ಈಗಾಗಲೇ ಚಾಲ್ತಿಯಲ್ಲಿತ್ತು. ಆದರೆ ಈಗ ಹಠಾತ್ತನೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ. ಸಿನಿಮಾ ಬಿಡುಗಡೆ ಮುಂದೂಡಿಕೆಗೆ ಕಾರಣ ಏನೆಂದು ಮಂಚು ವಿಷ್ಣು ವಿವರಿಸಿದ್ದಾರೆ.

‘ಕಣ್ಣಪ್ಪ’ ಸಿನಿಮಾ ಬಿಡುಗಡೆ ಮುಂದೂಡಿದ ಮಂಚು ಮನೋಜ್, ಯಾವುದರ ಭಯ?
Kannappa
ಮಂಜುನಾಥ ಸಿ.
|

Updated on: Mar 30, 2025 | 8:52 AM

Share

ಪ್ರಭಾಸ್ (Prabhas), ಅಕ್ಷಯ್ ಕುಮಾರ್ (Akshay Kumar), ಮೋಹನ್​ಲಾಲ್ ಇನ್ನೂ ಕೆಲವು ಸ್ಟಾರ್ ನಟರು ಅತಿಥಿ ಪಾತ್ರಗಳಲ್ಲಿ ನಟಿಸಿರುವ ‘ಕಣ್ಣಪ್ಪ’ ಸಿನಿಮಾ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದು. ಸಿನಿಮಾದ ಪ್ರಚಾರವನ್ನೂ ಸಹ ಚಿತ್ರತಂಡ ಆರಂಭ ಮಾಡಿ ಆಗಿದೆ. ಆದರೆ ಈಗ ಇದ್ದಕ್ಕಿದ್ದಂತೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಸಿನಿಮಾ ಸಿದ್ಧವಾಗಿ, ಪ್ರಚಾರ ನಡೆಯುತ್ತಿರುವ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಈ ನಿರ್ಣಯ ಹೊರಬಿದ್ದಿರುವುದು ಸಿನಿಮಾಕ್ಕಾಗಿ ಕಾಯುತ್ತಿದ್ದವರಿಗೆ ಆಶ್ಚರ್ಯ ಮೂಡಿಸಿದೆ.

ಏಪ್ರಿಲ್ 25ಕ್ಕೆ ‘ಕಣ್ಣಪ್ಪ’ ಸಿನಿಮಾ ಬಿಡುಗಡೆ ಆಗಲಿದೆ ಎಂದು ಈ ಹಿಂದೆ ಘೋಷಿಸಲಾಗಿತ್ತು. ಆದರೆ ಇದೀಗ ಮಂಚು ವಿಷ್ಣು ಸಾಮಾಜಿಕ ಜಾಲತಾಣದಲ್ಲಿ ಸಂದೇಶವೊಂದನ್ನು ಹಂಚಿಕೊಂಡಿದ್ದು, ಸಿನಿಮಾದ ಬಿಡುಗಡೆ ವಿಳಂಬ ಆಗಲಿದೆ ಎಂದಿದ್ದಾರೆ. ಸಿನಿಮಾದ ಪ್ರಮುಖವಾದ ಭಾಗವೊಂದರ ವಿಎಫ್​ಎಕ್ಸ್​ ಸೂಕ್ತವಾಗಿ, ಪರಿಣಾಮಕಾರಿಯಾಗಿ ಮಾಡಬೇಕಿದ್ದು, ಇದು ಹೆಚ್ಚು ಸಮಯ ಹಿಡಿಯಲಿದೆ. ನಾವು ಪರಿಪೂರ್ಣವಾದ ಸಿನಿಮಾ ಅನ್ನು ಪ್ರೇಕ್ಷಕರಿಗೆ ನೀಡಬೇಕು ಎಂದುಕೊಂಡಿದ್ದೇವೆ ಹಾಗಾಗಿ ಇನ್ನಷ್ಟು ಸಮಯ ತೆಗೆದುಕೊಳ್ಳಲಿದ್ದೇವೆ ಎಂದಿದ್ದಾರೆ ಮಂಚು ಮನೋಜ್.

ಸಿನಿಮಾದ ಕೆಲ ಭಾಗಗಳ ವಿಎಫ್​ಎಕ್ಸ್​ ಆಗಿದೆಯಾದರೂ ಚಿತ್ರತಂಡ ನಿರೀಕ್ಷಿತ ಮಟ್ಟದ ಫಲಿತಾಂಶ ಬಂದಿಲ್ಲವಂತೆ ಹಾಗಾಗಿ ಈಗ ವಿಎಫ್​ಎಕ್ಸ್​ ಅನ್ನು ಸರಿ ಮಾಡಲಾಗುತ್ತಿದ್ದು, ಇದಕ್ಕಾಗಿ ಹೆಚ್ಚಿನ ಸಮಯ ವ್ಯಯವಾಗುತ್ತಿದೆ. ಇದರ ಜೊತೆಗೆ ಪ್ರಸ್ತುತ ಐಪಿಎಲ್ ಸೀಸನ್ ಸಹ ನಡೆಯುತ್ತಿದ್ದು ಈ ಸಮಯದಲ್ಲಿ ಸಿನಿಮಾ ಬಿಡುಗಡೆ ಮಾಡುವುದು ಸೂಕ್ತವಲ್ಲ ಎಂದು ನಿರ್ಧರಿಸಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ
Image
ರಶ್ಮಿಕಾಗೆ ಹಿಂದಿ ಕಲಿಯಲು ಆಗಲ್ಲ, ಕಾರಣ ಹೇಳಿದ ಸಲ್ಮಾನ್ ಖಾನ್
Image
ಎಷ್ಟು ದಿನ ಬದುಕುತ್ತೇನೋ ಗೊತ್ತಿಲ್ಲ, ದೇವರಿಗೆ ಬಿಟ್ಟಿದ್ದು: ಸಲ್ಮಾನ್ ಖಾನ್
Image
‘ಮಾಣಿಕ್ಯ’ ಚಿತ್ರದ ನಟಿ ರನ್ಯಾ ಬಳಿ ಸಿಕ್ಕಿದ್ದು ಬರೋಬ್ಬರಿ 15 ಕೆಜಿ ಚಿನ್ನ
Image
ಪುಡಿರೌಡಿ ತರ ಆಡೋದು ಬಿಡಿ, ಸಿಎಂ ಆದ್ರೆ ಕಷ್ಟ ಇದೆ’; ಡಿಕೆಶಿಗೆ ಕೌಂಟರ್

ಇದನ್ನೂ ಓದಿ:ಕಡೆಗೂ ಮದುವೆಗೆ ಮನಸ್ಸು ಮಾಡಿದ ಟಾಲಿವುಡ್ ನಟ ಪ್ರಭಾಸ್

‘ಕಣ್ಣಪ್ಪ’ ಸಿನಿಮಾ ಬೇಡರ ಕಣ್ಣಪ್ಪನ ಕತೆಯುಳ್ಳ ಸಿನಿಮಾ ಆಗಿದೆ. ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ‘ಬೇಡರ ಕಣ್ಣಪ್ಪ’ನ ಕತೆಯನ್ನು ಭಕ್ತಿಯ ಸಿನಿಮಾ ಆಗಿಸುವ ಬದಲಿಗೆ ಆಕ್ಷನ್ ಸಿನಿಮಾ ರೀತಿ ಪ್ರೆಸೆಂಟ್ ಮಾಡಿರುವುದು ತಿಳಿದು ಬರುತ್ತಿದೆ. ಸಿನಿಮಾದಲ್ಲಿ ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್​ ಲಾಲ್ ಅವರುಗಳು ಅತಿಥಿ ಪಾತ್ರಗಳಲ್ಲಿ ನಟಿಸಿದ್ದಾರೆ. ಇವರ ಜೊತೆಗೆ ಮೋಹನ್​ ಬಾಬು, ಕನ್ನಡದ ದೇವರಾಜ್, ಪ್ರೀತಿ ಮುಕುಂದನ್, ಜೋಸಿತಾ ಅನೋಲಾ, ಬ್ರಹ್ಮಾನಂದಂ, ಶರತ್ ಕುಮಾರ್ ಇನ್ನೂ ಹಲವಾರು ಜನಪ್ರಿಯ ನಟ-ನಟಿಯರು ನಟಿಸಿದ್ದಾರೆ. ಸಿನಿಮಾ ಮೇ ಅಂತ್ಯದ ವೇಳೆಗೆ ಬಿಡುಗಡೆ ಆಗುವ ಸಾಧ್ಯತೆ ಇದೆ.

‘ಕಣ್ಣಪ್ಪ’ ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ತೆಲುಗು, ಕನ್ನಡ, ಹಿಂದಿ, ತಮಿಳು, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ. ಕೆಲ ದಿನಗಳ ಹಿಂದಷ್ಟೆ ಮೋಹನ್ ಬಾಬು, ಮಂಚು ವಿಷ್ಣು ಅವರುಗಳು ಬೆಂಗಳೂರಿಗೆ ಆಗಮಿಸಿ ಇಲ್ಲಿ ಸಿನಿಮಾದ ಹಾಡೊಂದನ್ನು ಬಿಡುಗಡೆ ಮಾಡಿದ್ದರು. ಕಾರ್ಯಕ್ರಮಕ್ಕೆ ಸುಮಲತಾ, ರಾಕ್​ಲೈನ್ ವೆಂಕಟೇಶ್, ಭಾರತಿ ವಿಷ್ಣುವರ್ಧನ್ ಅವರುಗಳು ಅತಿಥಿಗಳಾಗಿ ಆಗಮಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ