AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಣ್ಣಪ್ಪ’ 2ನೇ ಟೀಸರ್ ಬಿಡುಗಡೆ: ಇದು ಆಕ್ಷನ್ ಪ್ರಧಾನ ಸಿನಿಮಾ

Kannappa Teaser: ಮಂಚು ವಿಷ್ಣು ನಟನೆಯ ‘ಕಣ್ಣಪ್ಪ’ ಸಿನಿಮಾದ ಎರಡನೇ ಟೀಸರ್ ಬಿಡುಗಡೆ ಆಗಿದೆ. ಪೌರಾಣಿಕ ಪಾತ್ರವಾದ ಬೇಡರ ಕಣ್ಣಪ್ಪನ ಕುರಿತಾದ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಈಗ ಬಿಡುಗಡೆ ಆಗಿರುವ ಟೀಸರ್ ನೋಡಿದರೆ ‘ಕಣ್ಣಪ್ಪ’ ಭಕ್ತಿ ಪ್ರಧಾನ ಸಿನಿಮಾ ಅನಿಸುತ್ತಿಲ್ಲ ಬದಲಿಗೆ ಆಕ್ಷನ್ ಪ್ರಧಾನ ಸಿನಿಮಾ ಎನಿಸುತ್ತಿದೆ.

‘ಕಣ್ಣಪ್ಪ’ 2ನೇ ಟೀಸರ್ ಬಿಡುಗಡೆ: ಇದು ಆಕ್ಷನ್ ಪ್ರಧಾನ ಸಿನಿಮಾ
Kannappa Teasere
Follow us
ಮಂಜುನಾಥ ಸಿ.
|

Updated on: Mar 01, 2025 | 3:09 PM

ಕನ್ನಡ ಚಿತ್ರರಂಗದ ಭಕ್ತಿ ಪ್ರಧಾನ ಸಿನಿಮಾಗಳಲ್ಲಿ ‘ಬೇಡರ ಕಣ್ಣಪ್ಪ’ ಅತ್ಯುತ್ತಮ ಎನ್ನಬಹುದಾದ ಸಿನಿಮಾ. ‘ಬೇಡರ ಕಣ್ಣಪ್ಪ’ ಸಿನಿಮಾ ಬಿಡುಗಡೆ ಆಗಿ 70 ವರ್ಷಗಳಾಗಿದ್ದರೂ ಸಹ ಈಗಲೂ ಅದರ ಹಾಡುಗಳುವ ಜನಪ್ರಿಯ. ಇದೀಗ ಇದೇ ‘ಬೇಡರ ಕಣ್ಣಪ್ಪ’ ಕತೆಯನ್ನು ತೆಲುಗಿನಲ್ಲಿ ‘ಕಣ್ಣಪ್ಪ’ ಹೆಸರಿನಲ್ಲಿ ಸಿನಿಮಾ ಮಾಡಲಾಗುತ್ತಿದ್ದು, ಸಿನಿಮಾದ ಎರಡನೇ ಟೀಸರ್ ಬಿಡುಗಡೆ ಇಂದು (ಮಾರ್ಚ್ 1) ಬಿಡುಗಡೆ ಆಗಿದೆ.

‘ಕಣ್ಣಪ್ಪ’ ಸಿನಿಮಾದ ಹೊಸ ಟೀಸರ್ ನೋಡಿದರೆ ಇದು ಭಕ್ತಿ ಪ್ರಧಾನ ಸಿನಿಮಾ ಅಲ್ಲ ಬದಲಿಗೆ ಇದು ಆಕ್ಷನ್ ಪ್ರಧಾನ ಸಿನಿಮಾ ಅನಿಸುತ್ತಿದೆ. ಸಿನಿಮಾದಲ್ಲಿ ನಾಯಕ ಕಣ್ಣಪ್ಪ, ಬಾಹುಬಲಿ ರೀತಿ ಶತ್ರುಗಳನ್ನು ಹೊಡೆದು ಬಿಸಾಡುತ್ತಿದ್ದಾನೆ. ಗುಂಪುಗಳ ನಡುವೆ ದೊಡ್ಡ ಯುದ್ಧಗಳೇ ನಡೆಯುತ್ತಿವೆ. ಈಗ ಬಿಡುಗಡೆ ಆಗಿರುವ ಟೀಸರ್​ನಲ್ಲಂತೂ ಭಕ್ತಿರಸವುಳ್ಳ ದೃಶ್ಯಗಳು ಹುಡುಕಿದರೂ ಸಿಗುತ್ತಿಲ್ಲ. ಸಿನಿಮಾವನ್ನು ಆಕ್ಷನ್ ಪ್ರಧಾನ ಮಾಡಲೇಬೇಕು ಎಂಬ ಉದ್ದೇಶ ನಿರ್ದೇಶಕರಿಗೆ ಇದ್ದಂತಿದೆ.

ಸಿನಿಮಾದ ಟೀಸರ್​ನ ಬಹುತೇಕ ಭಾಗ ಆಕ್ಷನ್​ ದೃಶ್ಯಗಳಿಂದಲೇ ತುಂಬಿವೆ. ಸಿನಿಮಾದ ನಾಯಕ ಮಂಚು ವಿಷ್ಣು ಮಾಸ್ ಹೀರೋಗಳ ರೀತಿ ಭರ್ಜರಿ ಡೈಲಾಗ್​ಗಳನ್ನು ಹೊಡೆಯುತ್ತಾ ಫೈಟಿಂಗ್​ಗಳಲ್ಲಿ ನಿರತರಾಗಿರುವ ದೃಶ್ಯಗಳಿವೆ. ಅದರ ಜೊತೆಗೆ ಕೆಲವು ರೊಮ್ಯಾಂಟಿಕ್ ದೃಶ್ಯಗಳೂ ಸಹ ಇವೆ. ಸಿನಿಮಾದಲ್ಲಿ ನಟರಾದ ಪ್ರಭಾಸ್, ಅಕ್ಷಯ್ ಕುಮಾರ್, ಮೋಹನ್ ಲಾಲ್ ಅವರುಗಳು ಅತಿಥಿ ಪಾತ್ರಗಳಲ್ಲಿ ನಟಿಸಿದ್ದು, ಈಗ ಬಿಡುಗಡೆ ಆಗಿರುವ ಟೀಸರ್​ನಲ್ಲಿ ಎಲ್ಲರ ಪಾತ್ರದ ಝಲಕ್ ತೋರಿಸಲಾಗಿದೆ. ಕನ್ನಡದ ನಟ ದೇವರಾಜ್ ಸಹ ಪ್ರಮುಖ ಪಾತ್ರವೊಂದರಲ್ಲಿ ನಟಿಸಿದ್ದು ಟೀಸರ್​ನಲ್ಲಿ ಅವರ ದೃಶ್ಯದ ತುಣುಕು ಸಹ ಇದೆ.

ಇದನ್ನೂ ಓದಿ:ವಿಡಿಯೋ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ: ಮಂಚು ವಿಷ್ಣು ಎಚ್ಚರಿಕೆ

‘ಕಣ್ಣಪ್ಪ’ ಸಿನಿಮಾವನ್ನು ಮುಖೇಶ್ ಕುಮಾರ್ ಸಿಂಗ್ ನಿರ್ದೇಶನ ಮಾಡಿದ್ದಾರೆ. ಸಿನಿಮಾಕ್ಕೆ ಬಂಡವಾಳ ಹೂಡಿರುವುದು ನಟ ಮಂಚು ವಿಷ್ಣು ತಂದೆ ಮೋಹನ್ ಬಾಬು. ಸಿನಿಮಾವನ್ನು ಪ್ಯಾನ್ ಇಂಡಿಯಾ ಲೆವೆಲ್​ನಲ್ಲಿ ನಿರ್ಮಾಣ ಮಾಡಲಾಗಿದೆ. ಸಿನಿಮಾದ ಪ್ರಚಾರವನ್ನು ಸಹ ಜೋರಾಗಿಯೆ ಮಾಡಲಾಗುತ್ತಿದೆ. ಹೊಂಬಾಳೆ ಫಿಲಮ್ಸ್​ನವರು ಕರ್ನಾಟಕದಲ್ಲಿ ಈ ಸಿನಿಮಾದ ವಿತರಣೆ ಮಾಡಲಿದ್ದಾರೆ. ಸಿನಿಮಾ, ಮಹಾಶಿವರಾತ್ರಿಗೆ ಬಿಡುಗಡೆ ಆಗಬೇಕಿತ್ತು ಆದರೆ ತುಸು ತಡವಾಗಿದ್ದು ಏಪ್ರಿಲ್ 25 ಕ್ಕೆ ಸಿನಿಮಾ ತೆರೆಗೆ ಬರಲಿದೆ.

ನಟ ಮಂಚು ವಿಷ್ಣು ವೃತ್ತಿ ಬದುಕಿಗೆ ಇದು ಮಹತ್ತರ ಸಿನಿಮಾ ಆಗಿರಲಿದ್ದು, ಸತತ ಪ್ಲಾಫ್ ಸಿನಿಮಾಗಳನ್ನೇ ನೀಡುತ್ತಾ ಬರುತ್ತಿರುವ ಮಂಚು ವಿಷ್ಣು, ಭಾರಿ ನಿರೀಕ್ಷೆ ಇರಿಸಿ ಭಾರಿ ದೊಡ್ಡ ಬಜೆಟ್​ನಲ್ಲಿ ನಿರ್ಮಿಸಿರುವ ಸಿನಿಮಾ ಇದಾಗಿದೆ. ಹಾಗಾಗಿ ಪ್ರಚಾರಕ್ಕೆ ಅತಿಯಾದ ಒತ್ತನ್ನು ನೀಡಲಾಗುತ್ತಿದೆ. ಕೆಲ ದಿನದ ಹಿಂದೆಯಷ್ಟೆ ನಟ ಅಕ್ಷಯ್ ಕುಮಾರ್ ಅವರ ಜೊತೆಗೆ ಮುಂಬೈನಲ್ಲಿ ಪ್ರಚಾರ ಮಾಡಿದ್ದಾರೆ ಮಂಚು ವಿಷ್ಣು ಮತ್ತು ತಂಡ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಭಟಿಂಡಾ ಸೇನಾನೆಲೆ ಮೇಲೆ ದಾಳಿಯ ವಿಫಲಯತ್ನ ಪಾಕ್ ನಡೆಸಿದೆ: ವ್ಯೋಮಿಕಾ ಸಿಂಗ್
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ