ವಿಡಿಯೋ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ: ಮಂಚು ವಿಷ್ಣು ಎಚ್ಚರಿಕೆ

ತೆಲುಗು ಕಲಾವಿದರ ಸಂಘದ ಅಧ್ಯಕ್ಷ ಮಂಚು ವಿಷ್ಣು ಕಂಟೆಂಟ್ ಕ್ರಿಯೇಟರ್​ಗಳ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಕಲಾವಿದರ ವಿಡಿಯೋ, ಚಿತ್ರಗಳನ್ನು ಬಳಿಸಿಕೊಂಡು ಮೀಮ್, ಟ್ರೋಲ್, ವಿಡಿಯೋಗಳನ್ನು ಹಂಚಿಕೊಳ್ಳುವ ಕಂಟೆಂಟ್ ಕ್ರಿಯೇಟರ್​ಗಳಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದಾರೆ.

ವಿಡಿಯೋ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ: ಮಂಚು ವಿಷ್ಣು ಎಚ್ಚರಿಕೆ
ಮಂಚು ವಿಷ್ಣು
Follow us
|

Updated on: Jul 11, 2024 | 11:33 AM

ಕೆಲವು ದಿನಗಳ ಹಿಂದಷ್ಟೆ ತೆಲುಗು ಯೂಟ್ಯೂಬರ್ ಒಬ್ಬ ತನ್ನ ವಿಡಿಯೋನಲ್ಲಿ ತಂದೆ-ಮಗಳ ಸಂಬಂಧದ ಬಗ್ಗೆ ಅಶ್ಲೀಲ ಮಾತುಗಳನ್ನಾಡಿರುವುದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಟಾಲಿವುಡ್​ನ ಹಲವು ನಟ-ನಟಿಯರು ಈ ವಿಡಿಯೋದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ನಟ, ತೆಲುಗು ಕಲಾವಿದರ ಸಂಘದ ಅಧ್ಯಕ್ಷ ಮಂಚು ವಿಷ್ಣು ಸಹ ಈ ವಿಡಿಯೋಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದೀಗ ಇನ್​ಸ್ಟಾಗ್ರಾಂನಲ್ಲಿ ವಿಡಿಯೋ ಹಂಚಿಕೊಂಡಿರುವ ಮಂಚು ವಿಷ್ಣು, ಎಲ್ಲ ಕಂಟೆಂಟ್ ಕ್ರಿಯೇಟರ್​, ಯೂಟ್ಯೂಬರ್​ಗಳಿಗೆ ಎಚ್ಚರಿಕೆಯೊಂದನ್ನು ನೀಡಿದ್ದಾರೆ.

ಯಾವುದೇ ನಟ ಅಥವಾ ನಟಿಯರ ವಿಡಿಯೋ, ಚಿತ್ರಗಳನ್ನು ಬಳಸಿ ಅಸಹ್ಯಕರ ಮೀಮ್​ಗಳು, ಟ್ರೋಲ್ ಗಳು, ವಿಡಿಯೋಗಳನ್ನು ಮಾಡುತ್ತಿರುವುದನ್ನು ವಿರೋಧಿಸಿರುವ ಮಂಚು ವಿಷ್ಣು, ಆ ಎಲ್ಲ ವಿಡಿಯೋಗಳು, ಮೀಮ್​ಗಳನ್ನು ಎರಡು ದಿನದ ಒಳಗಾಗಿ ಡಿಲೀಟ್ ಮಾಡಬೇಕು ಇಲ್ಲವಾದರೆ ಕಲಾವಿದರ ಸಂಘ (ಮಾ) ವತಿಯಿಂದ ಕಾನೂನು ಕ್ರಮಕ್ಕೆ ಮುಂದಾಗಲಿದ್ದೇವೆ’ ಎಂದಿದ್ದಾರೆ. ಹಲವು ನಟ-ನಟಿಯರು, ಮೀಮ್, ಟ್ರೋಲ್ ಇತರೆ ವಿಡಿಯೋಗಳಿಗೆ ತಮ್ಮ ಚಿತ್ರ, ವಿಡಿಯೋಗಳನ್ನು ಬಳಸಿಕೊಳ್ಳುತ್ತಿರುವುದರ ಬಗ್ಗೆ ತೀವ್ರ ಅಸಮಾಧಾನ ಹೊಂದಿದ್ದಾರೆ ಎಂದು ಸಹ ವಿಡಿಯೋನಲ್ಲಿ ಮಂಚು ವಿಷ್ಣು ಹೇಳಿದ್ದಾರೆ.

ಅಸಲಿಗೆ ಮಂಚು ವಿಷ್ಣು ಬಗ್ಗೆಯೂ ಸಹ ಹಲವು ಟ್ರೋಲ್​ಗಳಿವೆ. ಅವರು ಈ ಹಿಂದೆ ಮಾಧ್ಯಮಗಳ ಬಳಿ ಮಾತನಾಡುತ್ತಾ ಆಡಿರುವ ಮಾತುಗಳನ್ನೇ ಇಟ್ಟುಕೊಂಡು ಟ್ರೋಲ್ ವಿಡಿಯೋಗಳನ್ನು ಮಾಡಲಾಗಿದೆ. ಇತ್ತೀಚೆಗೆ ಬಿಡುಗಡೆ ಆದ ‘ಕಣ್ಣಪ್ಪ’ ಸಿನಿಮಾದ ಟ್ರೈಲರ್​ನ ಕೆಲ ದೃಶ್ಯಗಳನ್ನು ತೆಗೆದುಕೊಂಡು ಸಹ ಟ್ರೋಲ್ ವಿಡಿಯೋಗಳನ್ನು ಮಾಡಲಾಗಿದೆ. ಅಸಲಿಗೆ ಟಾಲಿವುಡ್​ನಲ್ಲಿ ಅತಿಯಾಗಿ ಟ್ರೋಲ್ ಆಗುವ ನಟರಲ್ಲಿ ಮಂಚು ವಿಷ್ಣು ಪ್ರಮುಖರು. ಹಾಗಾಗಿಯೇ ಮಂಚು ವಿಷ್ಣು ಈಗ ಕಂಟೆಂಟ್ ಕ್ರಿಯೇಟರ್​ಗಳ ಮೇಲೆ ಕ್ರಮಕ್ಕೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ರೇವ್ ಪಾರ್ಟಿ: ನಟಿ ಹೇಮಾ ಬೆಂಬಲಕ್ಕೆ ನಟ ಮಂಚು ವಿಷ್ಣು ಮತ್ತು ಕಲಾವಿದರ ಸಂಘ

ವಿಡಿಯೋನಲ್ಲಿ ಹಿರಿಯ ನಟ ಬ್ರಹ್ಮಾನಂದಂ ಅವರ ಬಗ್ಗೆಯೂ ಮಾತನಾಡಿರುವ ಮಂಚು ವಿಷ್ಣು, ಬ್ರಹ್ಮಾನಂದಂ ಅವರ ಚಿತ್ರಗಳನ್ನು ಬಳಸಿ ಹಲವು ಮೀಮ್​ಗಳನ್ನು ಮಾಡಲಾಗುತ್ತಿದೆ. ಅವರಿಗೆ ಇದು ಇಷ್ಟವಿಲ್ಲ. ಈ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವು ನಟ-ನಟಿಯರು ಈ ಮೀಮ್, ಟ್ರೋಲ್​ಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮಾ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ ಕೂಡಲೇ ಆ ವಿಡಿಯೋಗಳನ್ನು, ಚಿತ್ರಗಳನ್ನು ಡಿಲೀಟ್ ಮಾಡಿ, ಇಲ್ಲವಾದರೆ ಕಾನೂನು ಕ್ರಮ ಎದುರಿಸಿ ಎಂದಿದ್ದಾರೆ ಮಂಚು ವಿಷ್ಣು.

ತಂದೆ-ಮಗಳ ಸಂಬಂಧದ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ್ದ ಯೂಟ್ಯೂಬರ್ ವಿರುದ್ಧ ಹಲವು ದೂರುಗಳು ತೆಲಂಗಾಣದಲ್ಲಿ ದಾಖಲಾಗಿದ್ದವು. ಕೊನೆಗೆ ತೆಲಂಗಾಣ ಸೈಬರ್ ವಿಭಾಗದ ಪೊಲೀಸರು ಯೂಟ್ಯೂಬರ್ ಪ್ರಣೀತ್ ಹನುಮಂತು ಅನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಆ ಪ್ರಕರಣದ ಬಳಿಕ ಕಂಟೆಂಟ್ ಕ್ರಿಯೇಟರ್​ಗಳ ಅಶ್ಲೀಲ ಕಂಟೆಂಟ್​ಗಳ ಬಗ್ಗೆ ತೀವ್ರ ಆಕ್ರೋಶ ಸ್ಪೋಟಗೊಂಡಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ