AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mandeep Roy Death: ಕನ್ನಡ ಚಿತ್ರ ರಂಗದ ಹಿರಿಯ ನಟ ಮನ್​ದೀಪ್ ರಾಯ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್ ರಾಯ್(Mandeep Roy) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಾವಲ್​ಭೈರಸಂಧ್ರದ ನಿವಾಸದಲ್ಲಿ ಮನ್​ದೀಪ್ ಮೃತಪಟ್ಟಿದ್ದಾರೆ. ರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿತ್ತು,

Mandeep Roy Death: ಕನ್ನಡ ಚಿತ್ರ ರಂಗದ ಹಿರಿಯ ನಟ ಮನ್​ದೀಪ್ ರಾಯ್ ನಿಧನ
Mandeep Roy
ನಯನಾ ರಾಜೀವ್
|

Updated on:Jan 29, 2023 | 8:54 AM

Share

ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್ ರಾಯ್(Mandeep Roy) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಕಾವಲ್​ಭೈರಸಂಧ್ರದ ನಿವಾಸದಲ್ಲಿ ಮನ್​ದೀಪ್ ಮೃತಪಟ್ಟಿದ್ದಾರೆ. ರಾತ್ರಿ 1.45ರ ಸುಮಾರಿಗೆ ಹೃದಯಾಘಾತವಾಗಿತ್ತು, ಬೆಳಗ್ಗೆ 11 ಗಂಟೆಗೆ ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಈ ಕುರಿತು ಮನ್​ದೀಪ್ ಪುತ್ರಿ ಅಕ್ಷತಾ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಕಳೆದ ಡಿಸೆಂಬರ್​ನಲ್ಲಿ ಹೃದಯಾಘಾತವಾಗಿತ್ತು, ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರಿಗೆ 75 ವರ್ಷ ವಯಸ್ಸಾಗಿತ್ತು. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಅನಂತ್​ ನಾಗ್​, ಶಂಕರ್​ ನಾಗ್​, ಡಾ. ರಾಜ್​ಕುಮಾರ್​ ಸೇರಿದಂತೆ ಅನೇಕ ದಿಗ್ಗಜ ನಟರ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ ಖ್ಯಾತಿ ಅವರಿಗಿದೆ.

ಮಿಂಚಿನ ಓಟ, ಬಾಡದ ಹೂವು, ಆಕಸ್ಮಿಕ, ಅಗ್ನಿ ಐಪಿಎಸ್​, ದೀಪಾವಳಿ, ಅಯ್ಯ, ಅಪೂರ್ವ ಸಂಗಮ, ಪ್ರೀತ್ಸೋದ್​ ತಪ್ಪಾ, ಏಳು ಸುತ್ತಿನ ಕೋಟೆ, ಗಜಪತಿ ಗರ್ವಭಂಗ, ಆಸೆಗೊಬ್ಬ ಮೀಸೆಗೊಬ್ಬ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಮನ್​ದೀಪ್​ ರಾಯ್​ ನಟಿಸಿದ್ದಾರೆ. ಅವರ ನಟನೆಯನ್ನು ಕಂಡು ಸಿನಿಪ್ರಿಯರು ಕಳೆದ ನಾಲ್ಕು ದಶಕಗಳಿಂದಲೂ ಎಂಜಾಯ್​ ಮಾಡುತ್ತಿದ್ದಾರೆ.

ಇತರೆ ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:45 am, Sun, 29 January 23

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?