AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇವರಿಲ್ಲದೆ ಕಥೆಯೇ ಇಲ್ಲ’; ಸುದೀಪ್ ಧ್ವನಿಯಲ್ಲಿ ಬಂತು ‘ಮ್ಯಾಂಗೋ ಪಚ್ಚ’ ಟೀಸರ್

ಕಿಚ್ಚ ಸುದೀಪ್ ಧ್ವನಿಯಲ್ಲಿ ‘ಮ್ಯಾಂಗೋ ಪಚ್ಚ’ ಟೀಸರ್ ಬಿಡುಗಡೆ. ಸಂಚಿತ್ ಸಂಜೀವ್ ನಟನೆಯ ಈ ಸಿನಿಮಾ ಜೂನ್ 5ರಂದು ತೆರೆಗೆ ಬರಲಿದೆ. 2002ರ ಮೈಸೂರು ಹಿನ್ನೆಲೆಯ ಕಥೆಯನ್ನು ಚಿತ್ರ ಹೊಂದಿದೆ. ಟೀಸರ್‌ನಲ್ಲಿ ಪಾತ್ರಗಳ ಪರಿಚಯವಿದ್ದು, ಸುದೀಪ್ ಮೈಸೂರನ್ನು ಕಥೆಯ ಭಾಗವೆಂದು ಬಣ್ಣಿಸಿದ್ದಾರೆ. ಕಾಜಲ್ ಕುಂದರ್, ಪ್ರಶಾಂತ್ ಹಿರೇಮಠ್ ಮತ್ತಿತರರು ತಾರಾಗಣದಲ್ಲಿದ್ದಾರೆ. ವಿವೇಕ್ ನಿರ್ದೇಶಿಸಿದ್ದಾರೆ.

‘ಇವರಿಲ್ಲದೆ ಕಥೆಯೇ ಇಲ್ಲ’; ಸುದೀಪ್ ಧ್ವನಿಯಲ್ಲಿ ಬಂತು ‘ಮ್ಯಾಂಗೋ ಪಚ್ಚ’ ಟೀಸರ್
ಮ್ಯಾಂಗೋ ಪಚ್ಚ
ರಾಜೇಶ್ ದುಗ್ಗುಮನೆ
|

Updated on: May 21, 2026 | 3:15 PM

Share

ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಅವರು ‘ಮ್ಯಾಂಗೋ ಪಚ್ಚ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಜೂನ್ 5ರಂದು ತೆರೆಗೆ ಬರುತ್ತಿದೆ. ಈಗ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್​​​ನಲ್ಲಿ ‘ಮ್ಯಾಂಗೋ ಪಚ್ಚ’ದ ಪಾತ್ರಗಳನ್ನು ಪರಿಚಯಿಸಲಾಗಿದೆ. ಕಿಚ್ಚ ಸುದೀಪ್ ಧ್ವನಿಯಲ್ಲಿ ಟೀಸರ್ ಬಂದಿದೆ ಎಂಬುದು ವಿಶೇಷ. ಸಿನಿಮಾದ ಟ್ರೇಲರ್​ಗಾಗಿ ಅಭಿಮಾನಿಗಳು ಕಾದಿದ್ದಾರೆ.

‘ಮ್ಯಾಂಗೋ ಪಚ್ಚ’ ಚಿತ್ರದ ಕಥೆ ಸಾಗೋದು ಮೈಸೂರಿನಲ್ಲಿ. ಹಾಗಂತ ಪ್ರೆಸೆಂಟ್​​​ನಲ್ಲಿ ನಡೆಯೋ ಕಥೆಯಲ್ಲ. 2002ರ ಕಾಲಘಟ್ಟದ ಕಥೆ ‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಇದೆ. ಈ ಸಿನಿಮಾದ ಟೀಸರ್​​​ನಲ್ಲಿ ಹಲವು ಪಾತ್ರಗಳನ್ನು ಪರಿಚಯಿಸಲಾಗಿದೆ. ಮೈಸೂರು ಕೂಡ ಸಿನಿಮಾದ ಒಂದು ಪಾತ್ರದ ರೀತಿ ವರ್ತಿಸುವ ಸೂಚನೆಯನ್ನು ಟೀಸರ್​​ನಲ್ಲಿ ನೀಡಲಾಗಿದೆ. ಸಿನಿಮಾದಲ್ಲಿ ಬರುವ ಪಾತ್ರ ಹಾಗೂ ಮೈಸೂರು ಇಲ್ಲದೆ ಚಿತ್ರದ ಕಥೆಯೇ ಇಲ್ಲ ಎನ್ನುತ್ತಾರೆ ಕಿಚ್ಚ.

ಯುವ ಹೀರೋಗಳು ಬಂದು, ಚಿತ್ರರಂಗದಲ್ಲಿ ಮಿಂಚಿ ಸ್ಟಾರ್ ಹೀರೋಗಳಾಗಿ ಬೆಳೆದ ಅದೆಷ್ಟೋ ಉದಾಹರಣೆ ಇದೆ. ಸುದೀಪ್​ ಅವರಿಂದ ಆರಂಭಿಸಿ ಯಶ್​​ವರೆಗೆ ಎಲ್ಲರೂ ಯಂಗ್ ಹೀರೋ ಆಗಿ ಗುರುತಿಸಿಕೊಂಡು, ನಂತರ ತಮ್ಮನ್ನು ತಾವು ಸಾಬೀತು ಮಾಡಿ ಈಗ ಸ್ಟಾರ್ ಹೀರೋಗಳಾಗಿ ಬೆಳೆದಿದ್ದಾರೆ. ಸಂಚಿತ್ ಕೂಡ ಇದೇ ಸಾಲಿಗೆ ಸೇರುತ್ತಾರಾ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ‘ದೃಶ್ಯಂ 3’ ಹೇಗಿದೆ? ನೆಟ್ಟಿಗರು ಕೊಟ್ಟ ಪಾರದರ್ಶಕ ವಿಮರ್ಶೆ ಇಲ್ಲಿದೆ

‘ಸುಪ್ರುಯಾನ್ವಿ ಪಿಕ್ಚರ್ಸ್ ಸ್ಟುಡಿಯೋ’ ಹಾಗೂ ಕೆಆರ್​​ಜಿ ಒಟ್ಟಾಗಿ ‘ಮ್ಯಾಂಗೋ ಪಚ್ಚ’ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ. ಸಂಚಿತ್ ಸಂಜೀವ್ ಜೊತೆ ಕಾಜಲ್ ಕುಂದರ್, ಪ್ರಶಾಂತ್ ಹಿರೇಮಠ್​, ಮಯೂರ್ ಪಟೇಲ್, ಹರಿಣಿ ಶ್ರೀಕಾಂತ್, ಹಂಸ ನಾರಾಯಣಸ್ವಾಮಿ, ಉಗ್ರಂ ಮಂಜು ಸಿನಿಮಾದಲ್ಲಿ ನಟಿಸಿದ್ದಾರೆ. ವಿವೇಕ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು