AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇವರಿಲ್ಲದೆ ಕಥೆಯೇ ಇಲ್ಲ’; ಸುದೀಪ್ ಧ್ವನಿಯಲ್ಲಿ ಬಂತು ‘ಮ್ಯಾಂಗೋ ಪಚ್ಚ’ ಟೀಸರ್

ಕಿಚ್ಚ ಸುದೀಪ್ ಧ್ವನಿಯಲ್ಲಿ ‘ಮ್ಯಾಂಗೋ ಪಚ್ಚ’ ಟೀಸರ್ ಬಿಡುಗಡೆ. ಸಂಚಿತ್ ಸಂಜೀವ್ ನಟನೆಯ ಈ ಸಿನಿಮಾ ಜೂನ್ 5ರಂದು ತೆರೆಗೆ ಬರಲಿದೆ. 2002ರ ಮೈಸೂರು ಹಿನ್ನೆಲೆಯ ಕಥೆಯನ್ನು ಚಿತ್ರ ಹೊಂದಿದೆ. ಟೀಸರ್‌ನಲ್ಲಿ ಪಾತ್ರಗಳ ಪರಿಚಯವಿದ್ದು, ಸುದೀಪ್ ಮೈಸೂರನ್ನು ಕಥೆಯ ಭಾಗವೆಂದು ಬಣ್ಣಿಸಿದ್ದಾರೆ. ಕಾಜಲ್ ಕುಂದರ್, ಪ್ರಶಾಂತ್ ಹಿರೇಮಠ್ ಮತ್ತಿತರರು ತಾರಾಗಣದಲ್ಲಿದ್ದಾರೆ. ವಿವೇಕ್ ನಿರ್ದೇಶಿಸಿದ್ದಾರೆ.

‘ಇವರಿಲ್ಲದೆ ಕಥೆಯೇ ಇಲ್ಲ’; ಸುದೀಪ್ ಧ್ವನಿಯಲ್ಲಿ ಬಂತು ‘ಮ್ಯಾಂಗೋ ಪಚ್ಚ’ ಟೀಸರ್
ಮ್ಯಾಂಗೋ ಪಚ್ಚ
ರಾಜೇಶ್ ದುಗ್ಗುಮನೆ
|

Updated on: May 21, 2026 | 3:15 PM

Share

ಕಿಚ್ಚ ಸುದೀಪ್ ಅಳಿಯ ಸಂಚಿತ್ ಸಂಜೀವ್ ಅವರು ‘ಮ್ಯಾಂಗೋ ಪಚ್ಚ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಜೂನ್ 5ರಂದು ತೆರೆಗೆ ಬರುತ್ತಿದೆ. ಈಗ ಚಿತ್ರದ ಟೀಸರ್ ರಿಲೀಸ್ ಆಗಿದೆ. ಈ ಟೀಸರ್​​​ನಲ್ಲಿ ‘ಮ್ಯಾಂಗೋ ಪಚ್ಚ’ದ ಪಾತ್ರಗಳನ್ನು ಪರಿಚಯಿಸಲಾಗಿದೆ. ಕಿಚ್ಚ ಸುದೀಪ್ ಧ್ವನಿಯಲ್ಲಿ ಟೀಸರ್ ಬಂದಿದೆ ಎಂಬುದು ವಿಶೇಷ. ಸಿನಿಮಾದ ಟ್ರೇಲರ್​ಗಾಗಿ ಅಭಿಮಾನಿಗಳು ಕಾದಿದ್ದಾರೆ.

‘ಮ್ಯಾಂಗೋ ಪಚ್ಚ’ ಚಿತ್ರದ ಕಥೆ ಸಾಗೋದು ಮೈಸೂರಿನಲ್ಲಿ. ಹಾಗಂತ ಪ್ರೆಸೆಂಟ್​​​ನಲ್ಲಿ ನಡೆಯೋ ಕಥೆಯಲ್ಲ. 2002ರ ಕಾಲಘಟ್ಟದ ಕಥೆ ‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಇದೆ. ಈ ಸಿನಿಮಾದ ಟೀಸರ್​​​ನಲ್ಲಿ ಹಲವು ಪಾತ್ರಗಳನ್ನು ಪರಿಚಯಿಸಲಾಗಿದೆ. ಮೈಸೂರು ಕೂಡ ಸಿನಿಮಾದ ಒಂದು ಪಾತ್ರದ ರೀತಿ ವರ್ತಿಸುವ ಸೂಚನೆಯನ್ನು ಟೀಸರ್​​ನಲ್ಲಿ ನೀಡಲಾಗಿದೆ. ಸಿನಿಮಾದಲ್ಲಿ ಬರುವ ಪಾತ್ರ ಹಾಗೂ ಮೈಸೂರು ಇಲ್ಲದೆ ಚಿತ್ರದ ಕಥೆಯೇ ಇಲ್ಲ ಎನ್ನುತ್ತಾರೆ ಕಿಚ್ಚ.

ಯುವ ಹೀರೋಗಳು ಬಂದು, ಚಿತ್ರರಂಗದಲ್ಲಿ ಮಿಂಚಿ ಸ್ಟಾರ್ ಹೀರೋಗಳಾಗಿ ಬೆಳೆದ ಅದೆಷ್ಟೋ ಉದಾಹರಣೆ ಇದೆ. ಸುದೀಪ್​ ಅವರಿಂದ ಆರಂಭಿಸಿ ಯಶ್​​ವರೆಗೆ ಎಲ್ಲರೂ ಯಂಗ್ ಹೀರೋ ಆಗಿ ಗುರುತಿಸಿಕೊಂಡು, ನಂತರ ತಮ್ಮನ್ನು ತಾವು ಸಾಬೀತು ಮಾಡಿ ಈಗ ಸ್ಟಾರ್ ಹೀರೋಗಳಾಗಿ ಬೆಳೆದಿದ್ದಾರೆ. ಸಂಚಿತ್ ಕೂಡ ಇದೇ ಸಾಲಿಗೆ ಸೇರುತ್ತಾರಾ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ‘ದೃಶ್ಯಂ 3’ ಹೇಗಿದೆ? ನೆಟ್ಟಿಗರು ಕೊಟ್ಟ ಪಾರದರ್ಶಕ ವಿಮರ್ಶೆ ಇಲ್ಲಿದೆ

‘ಸುಪ್ರುಯಾನ್ವಿ ಪಿಕ್ಚರ್ಸ್ ಸ್ಟುಡಿಯೋ’ ಹಾಗೂ ಕೆಆರ್​​ಜಿ ಒಟ್ಟಾಗಿ ‘ಮ್ಯಾಂಗೋ ಪಚ್ಚ’ ಚಿತ್ರವನ್ನು ಪ್ರೆಸೆಂಟ್ ಮಾಡುತ್ತಿದೆ. ಸಂಚಿತ್ ಸಂಜೀವ್ ಜೊತೆ ಕಾಜಲ್ ಕುಂದರ್, ಪ್ರಶಾಂತ್ ಹಿರೇಮಠ್​, ಮಯೂರ್ ಪಟೇಲ್, ಹರಿಣಿ ಶ್ರೀಕಾಂತ್, ಹಂಸ ನಾರಾಯಣಸ್ವಾಮಿ, ಉಗ್ರಂ ಮಂಜು ಸಿನಿಮಾದಲ್ಲಿ ನಟಿಸಿದ್ದಾರೆ. ವಿವೇಕ ಅವರು ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ