AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಂದೆ ವಿರುದ್ಧವೇ ದೂರು ದಾಖಲಿಸಿದ ಖ್ಯಾತ ನಟ

Machu Family: ತೆಲುಗು ಚಿತ್ರರಂಗದ ತಾರಾ ಕುಟುಂಬಗಳಲ್ಲಿ ಮಂಚು ಕುಟುಂಬ ಸಹ ಒಂದು. ಆದರೆ ಈ ಕುಟುಂಬದಲ್ಲಿ ಎಲ್ಲವೂ ಸರಿಯಿಲ್ಲ. ಹಿರಿಯ ನಟ ಮೋಹನ್ ಬಾಬು ವಿರುದ್ಧ ಅವರ ಮಗನೇ ಆದ ನಟ ಮಂಚು ಮನೋಜ್ ದೂರು ನೀಡಿದ್ದಾರೆ.

ತಂದೆ ವಿರುದ್ಧವೇ ದೂರು ದಾಖಲಿಸಿದ ಖ್ಯಾತ ನಟ
Manchu Manoj
ಮಂಜುನಾಥ ಸಿ.
|

Updated on: Dec 08, 2024 | 12:23 PM

Share

ತೆಲುಗು ಚಿತ್ರರಂಗದ ತಾರಾ ಕುಟುಂಬಗಳಲ್ಲಿ ಒಂದು ಮಂಚು ಕುಟುಂಬ. ಮೋಹನ್ ಬಾಬು ತೆಲುಗು ಚಿತ್ರರಂಗದ ಜನಪ್ರಿಯ ನಟ. ಚಿರಂಜೀವಿಗಿಂತಲೂ ಹೆಚ್ಚು ಸಿನಿಮಾಗಳು, ಹೆಚ್ಚು ಸಂಭಾವನೆಯನ್ನು ಒಂದು ಸಮಯದಲ್ಲಿ ಪಡೆಯುತ್ತಿದ್ದರು ಮೋಹನ್ ಬಾಬು. ಇವರ ಮಕ್ಕಳು ಸಹ ದಶಕಗಳಿಂದಲೂ ತೆಲುಗು ಚಿತ್ರರಂಗದಲ್ಲಿ ನಟರಾಗಿ ಗುರುತಿಸಿಕೊಂಡಿದ್ದಾರೆ. ಆದರೆ ಈ ಕುಟುಂಬದಲ್ಲಿ ಈಗ ಎಲ್ಲವೂ ಸರಿಯಿಲ್ಲ. ಕುಟುಂಬದಲ್ಲಿ ಒಬ್ಬರನ್ನು ಕಂಡರೆ ಒಬ್ಬರಿಗೆ ಆಗದ ಸ್ಥಿತಿ ನಿರ್ಮಾಣವಾಗಿದೆ. ಇದೀಗ ಮಂಚು ಕುಟುಂಬದ ಕಿರಿಯ ಸದಸ್ಯ ಮತ್ತು ನಟ ಮಂಜು ಮನೋಜ್, ತಮ್ಮ ತಂದೆ ಮೋಹನ್ ಬಾಬು ವಿರುದ್ಧವೇ ದೂರು ನೀಡಿದ್ದಾರೆ.

ಮೋಹನ್ ಬಾಬು ತನ್ನ ಮೇಲೆ ಹಾಗೂ ತನ್ನ ಪತ್ನಿ, ಮಕ್ಕಳ ಮೇಲೆ ದಾಳಿ ಮಾಡಿದ್ದಾರೆ ಎಂದು ಆರೋಪಿಸಿ ಮಂಚು ಮನೋಜ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮೋಹನ್ ಬಾಬು ದಾಳಿಯಿಂದ ತಮಗೆ ತಮ್ಮ ಕುಟುಂಬದವರಿಗೆ ಗಾಯಗಳಾಗಿವೆ ಎಂದು ಮಂಚು ಮನೋಜ್ ಆರೋಪ ಮಾಡಿದ್ದಾರೆ. ಗಾಯಗಳೊಂದಿಗೆ ಅವರು ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಮಂಚು ಮನೋಜ್, ತಮ್ಮ ಸಹೋದರ ಮಂಚು ವಿಷ್ಣು ವಿರುದ್ಧವೂ ಇದೇ ರೀತಿ ದೂರು ದಾಖಲಿಸಿದ್ದರು.

ಹಿರಿಯ ನಟ ಮೋಹನ್ ಬಾಬು ಸಹ ಪುತ್ರ ಮಂಚು ಮನೋಜ್ ವಿರುದ್ಧ ದೂರು ನೀಡಿದ್ದಾರೆ. ಮನೋಜ್ ನನ್ನ ಮೇಲೆ ದಾಳಿ ಮಾಡಿದ್ದಾನೆ ಹಲ್ಲೆ ಮಾಡಿದ್ದಾನೆ ಎಂದು ಮೋಹನ್ ಬಾಬು ಸಹ ದೂರು ನೀಡಿದ್ದಾರೆ. ಮಂಚು ಕುಟುಂಬಕ್ಕೆ ಸೇರಿದ ಕೋಟ್ಯಂತರ ಮೌಲ್ಯದ ಶಾಲಾ-ಕಾಲೇಜು ವ್ಯವಹಾರಕ್ಕೆ ಸಂಬಂಧಿಸಿದಂತೆ ಕಳೆದ ಕೆಲ ವರ್ಷಗಳಿಂದಲೂ ಕುಟುಂಬದಲ್ಲಿ ವಿವಾದಗಳು ನಡೆಯುತ್ತಿದ್ದು, ಅದೇ ಕಾರಣಕ್ಕೆ ಈಗ ಅಪ್ಪ-ಮಗನ ನಡುವೆ ಜಗಳ ಆಗಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ವಿಡಿಯೋ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ: ಮಂಚು ವಿಷ್ಣು ಎಚ್ಚರಿಕೆ

ಮಂಚು ಕುಟುಂಬದಲ್ಲಿ ಕಳೆದ ಕೆಲ ವರ್ಷಗಳಿಂದಲೂ ಆಸ್ತಿಗಳಿಗೆ ಸಂಬಂಧಿಸಿದಂತೆ ಸಮಸ್ಯೆ ನಡೆಯುತ್ತಲೇ ಇದೆ. ಕಳೆದ ವರ್ಷ, ಮಂಚು ಮನೋಜ್, ತಮ್ಮ ಸಹೋದರ ಮಂಚು ವಿಷ್ಣು ತಮ್ಮ ಮೇಲೆ ಹಾಗೂ ತಮ್ಮ ನೌಕರನ ಮೇಲೆ ದಾಳಿ ಮಾಡಿ ಹಲ್ಲೆ ಮಾಡಲು ಯತ್ನಿಸಿದ್ದ ಎಂದು ದೂರು ದಾಖಲಿಸಿದ್ದರು. ನೌಕರನ ಮನೆಯೊಂದಕ್ಕೆ ಮಂಚು ವಿಷ್ಣು ಬಂದು ಬೆದರಿಕೆ ಹಾಕುತ್ತಿರುವ ವಿಡಿಯೋವನ್ನು ಮಂಚು ಮನೋಜ್ ಬಿಡುಗಡೆ ಮಾಡಿದ್ದರು.

ಮೋಹನ್ ಬಾಬು ತೆಲುಗು ಚಿತ್ರರಂಗದ ಹಿರಿಯ ನಟರಾಗಿದ್ದು, ಕನ್ನಡದ ನಟರೊಂದಿಗೆ ಆಪ್ತ ಬಂಧ ಹೊಂದಿದ್ದರು. ಅಂಬರೀಶ್ ಅವರ ಆಪ್ತ ಗೆಳೆಯರಾಗಿದ್ದ ಮೋಹನ್ ಬಾಬು ಅಂಬರೀಶ್ ನಿಧನ ಹೊಂದಿದ್ದಾಗ ಕೆಲವು ದಿನ ಬೆಂಗಳೂರಿನಲ್ಲಿಯೇ ಇದ್ದರು. ಅಣ್ಣಾವ್ರ ಕುಟುಂಬಕ್ಕೂ ಹತ್ತಿರದ ಬಂಧವನ್ನು ಇವರು ಹೊಂದಿದ್ದರು. ಅಪ್ಪು ನಿಧನ ಹೊಂದಿದ ಬಳಿಕ ನಡೆದ ಸಂತಾಪ ಸಭೆಗಳಲ್ಲಿ ಮಂಚು ಮನೋಜ್ ಭಾಗವಹಿಸಿದ್ದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು