AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ponniyin Selvan: ನಿರೀಕ್ಷೆ ಹೆಚ್ಚಿಸಿದ ‘ಪೊನ್ನಿಯಿನ್​ ಸೆಲ್ವನ್​’ ಟ್ರೇಲರ್​; ಸೆ.30ಕ್ಕೆ ಮಣಿರತ್ನಂ ಚಿತ್ರ ರಿಲೀಸ್​

Ponniyin Selvan Trailer: ಸೆ.30ರಂದು ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ದೇಶಾದ್ಯಂತ ಬಿಡುಗಡೆ ಆಗಲಿದೆ. ಮಣಿರತ್ನಂ ನಿರ್ದೇಶನದ ಈ ಚಿತ್ರವೀಗ ಟ್ರೇಲರ್​ ಮೂಲಕ ಸದ್ದು ಮಾಡುತ್ತಿದೆ.

Ponniyin Selvan: ನಿರೀಕ್ಷೆ ಹೆಚ್ಚಿಸಿದ ‘ಪೊನ್ನಿಯಿನ್​ ಸೆಲ್ವನ್​’ ಟ್ರೇಲರ್​; ಸೆ.30ಕ್ಕೆ ಮಣಿರತ್ನಂ ಚಿತ್ರ ರಿಲೀಸ್​
‘ಪೊನ್ನಿಯಿನ್ ಸೆಲ್ವನ್’ ಪೋಸ್ಟರ್​
Follow us
TV9 Web
| Updated By: ಮದನ್​ ಕುಮಾರ್​

Updated on:Sep 07, 2022 | 7:34 AM

ಬಹುತಾರಾಗಣದ ‘ಪೊನ್ನಿಯಿನ್​ ಸೆಲ್ವನ್​’ (Ponniyin Selvan) ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಈಗಾಗಲೇ ಪ್ರಚಾರ ಕಾರ್ಯವನ್ನು ಭರ್ಜರಿಯಾಗಿ ಮಾಡಲಾಗುತ್ತಿದೆ. ಅನೇಕ ಘಟಾನುಘಟಿ ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದಾರೆ. ಈಗ ‘ಪೊನ್ನಿಯಿನ್​ ಸೆಲ್ವನ್​’ ಟ್ರೇಲರ್​ (Ponniyin Selvan Trailer) ಬಿಡುಗಡೆ ಮಾಡಲಾಗಿದೆ. ಚೋಳ ಸಾಮ್ರಾಜ್ಯದ ಕಥೆಯನ್ನು ಈ ಸಿನಿಮಾ ಹೇಳಲಿದೆ. ನಿರ್ದೇಶಕ ಮಣಿರತ್ನಂ (Mani Ratnam) ಅವರು ಅದ್ದೂರಿಯಾಗಿ ಈ ಚಿತ್ರವನ್ನು ಕಟ್ಟಿಕೊಟ್ಟಿದ್ದಾರೆ ಎಂಬುದಕ್ಕೆ ಟ್ರೇಲರ್​ ಸಾಕ್ಷಿ ಒದಗಿಸುತ್ತಿದೆ. ಎಲ್ಲ ಕಲಾವಿದರ ಪಾತ್ರಗಳೂ ಟ್ರೇಲರ್​ನಲ್ಲಿ ಹೈಲೈಟ್​ ಆಗಿವೆ. ಐಶ್ವರ್ಯಾ ರೈ ಬಚ್ಚನ್​, ವಿಕ್ರಮ್​, ತ್ರಿಷಾ, ಜಯಂ ರವಿ, ಕಾರ್ತಿ, ಪ್ರಕಾಶ್​ ರಾಜ್​ ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ನಟಿಸಿದ್ದಾರೆ. ಸೆ.30ರಂದು ‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ದೇಶಾದ್ಯಂತ ಬಿಡುಗಡೆ ಆಗಲಿದೆ.

ಎರಡು ಭಾಗದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಸದ್ಯಕ್ಕೆ ಮೊದಲ ಭಾಗದ ಟ್ರೇಲರ್​ ಬಿಡುಗಡೆ ಮಾಡಲಾಗಿದೆ. ಕಲ್ಕಿ ಕೃಷ್ಣಮೂರ್ತಿ ಬರೆದ ‘ಪೊನ್ನಿಯಿನ್​ ಸೆಲ್ವನ್​’ ಕೃತಿಯನ್ನು ಆಧರಿಸಿ ಈ ಚಿತ್ರ ತಯಾರಾಗುತ್ತಿದೆ. ಈ ಮೊದಲು ಅನಾವರಣ ಆಗಿದ್ದ ‘ಪೊನ್ನಿ ನದಿ..’ ಹಾಡಿಗೆ ಸಖತ್​ ರೆಸ್ಪಾನ್ಸ್​ ಸಿಕ್ಕಿದೆ. ಈಗ ಟ್ರೇಲರ್​ ಅಬ್ಬರಿಸುತ್ತಿದೆ. ಬೃಹತ್​ ಸೆಟ್​ಗಳು, ಮೈ ನವಿರೇಳಿಸುವ ಸಾಹಸ ಸನ್ನಿವೇಶ, ಅದ್ದೂರಿ ಮೇಕಿಂಗ್​ ಮುಂತಾದವರು ಈ ಟ್ರೇಲರ್​ನಲ್ಲಿ ಹೈಲೈಟ್​ ಆಗಿದೆ. ಸಿನಿಮಾದ ಕಥೆ ಏನು ಎಂಬುದರ ಎಳೆಯನ್ನು ಬಿಟ್ಟುಕೊಡಲಾಗಿದೆ. ಪ್ರೇಕ್ಷಕರಿಗೆ ಈ ಟ್ರೇಲರ್​ ಇಷ್ಟವಾಗಿದೆ. ಎಲ್ಲರೂ ಪಾಸಿಟಿವ್​ ಆಗಿ ಕಮೆಂಟ್​ ಮಾಡುವ ಮೂಲಕ ತಮ್ಮ ಅಭಿಪ್ರಾಯ ತಿಳಿಸುತ್ತಿದ್ದಾರೆ.

ಮಣಿರತ್ನಂ ನಿರ್ದೇಶನದ ಸಿನಿಮಾ ಎಂದರೆ ಅಭಿಮಾನಿಗಳು ವಿಶೇಷ ಆಸಕ್ತಿ ತೋರಿಸುತ್ತಾರೆ. ಚೋಳ ಸಾಮ್ರಾಜ್ಯದ ಐತಿಹಾಸಿಕ ಕಥೆಯನ್ನು ಅವರು ತೆರೆಗೆ ತರುತ್ತಿದ್ದು, ಅವರಿಗೆ ಪ್ರತಿಭಾವಂತ ಕಲಾವಿದರು ಸಾಥ್​ ನೀಡಿದ್ದಾರೆ. ಎ.ಆರ್. ರೆಹಮಾನ್​ ಅವರು ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಈ ಚಿತ್ರ ರಿಲೀಸ್​ ಆಗಲಿದೆ. ತಮಿಳು, ಕನ್ನಡ, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ತೆರೆಕಾಣಲಿದೆ.

ಇದನ್ನೂ ಓದಿ
Image
‘ಪೊನ್ನಿಯಿನ್​ ಸೆಲ್ವನ್​’ ಸಿನಿಮಾ ಸೆಟ್​ನಲ್ಲಿ ಐಶ್ವರ್ಯಾ ರೈ; ವೈರಲ್ ಆಯ್ತು ಫೋಟೋ  
Image
‘ಪೊನ್ನಿಯಿನ್​ ಸೆಲ್ವನ್​’ ಚಿತ್ರದ ಟೀಸರ್ ರಿಲೀಸ್ ಮಾಡಿದ ರಕ್ಷಿತ್ ಶೆಟ್ಟಿ; ಗಮನ ಸೆಳೆದ ಐಶ್ವರ್ಯಾ, ವಿಕ್ರಮ್
Image
Ponniyin Selvan: ‘ನಮ್ಮ ರಾಣಿ ಮತ್ತೆ ಬಂದರು’: ಐಶ್ವರ್ಯಾ ರೈ ಗೆಟಪ್​ ನೋಡಿ ಖುಷಿಯಿಂದ ಕಮೆಂಟ್​ ಮಾಡಿದ ಫ್ಯಾನ್ಸ್​
Image
‘ಪೊನ್ನಿಯಿನ್​ ಸೆಲ್ವನ್​’ ರಿಲೀಸ್​ ದಿನಾಂಕ ಪ್ರಕಟ; ಸೆ.30ಕ್ಕೆ ರಾರಾಜಿಸಲಿದೆ ಮಲ್ಟಿ ಸ್ಟಾರ್​ ಸಿನಿಮಾ

ಮಣಿರತ್ನಂ ಜೊತೆಗೆ ನಟಿ ಐಶ್ವರ್ಯಾ ರೈ ಬಚ್ಚನ್​ ಮಾಡುತ್ತಿರುವ ನಾಲ್ಕನೇ ಸಿನಿಮಾ ಇದು. ಈ ಮೊದಲು ‘ಇರುವರ್​’, ‘ಗುರು’ ಮತ್ತು ‘ರಾವಣ್​’ ಸಿನಿಮಾಗಳಲ್ಲಿ ಅವರಿಬ್ಬರು ಜೊತೆಯಾಗಿ ಕೆಲಸ ಮಾಡಿದ್ದರು. ಅಭಿಮಾನಿಗಳ ವಲಯದಲ್ಲಿ ‘ಪೊನ್ನಿಯಿನ್​ ಸೆಲ್ವನ್​’ ಚಿತ್ರದ ಮೇಲೆ ಭಾರಿ ನಿರೀಕ್ಷೆ ಇದೆ. ಬಾಕ್ಸ್​ ಆಫೀಸ್​ನಲ್ಲಿ ಈ ಚಿತ್ರ ಎಷ್ಟು ಕಲೆಕ್ಷನ್​ ಮಾಡಬಹುದು ಎಂಬ ಕೌತುಕ ನಿರ್ಮಾಣ ಆಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:34 am, Wed, 7 September 22

ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕಿಸ್ತಾನದಿಂದ ಮತ್ತೆ ಕದನ ವಿರಾಮ ಉಲ್ಲಂಘನೆ; ಉರಿಯಲ್ಲಿ ಗುಂಡಿನ ದಾಳಿ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕ್ ಸೇನೆಯಿಂದ ಅವಿರತ ಶೆಲ್ಲಿಂಗ್, ರಜೌರಿ ಪ್ರಾಂತ್ಯ ಉದ್ವಿಗ್ನ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಪಾಕಿಸ್ತಾನದ ಕಂತ್ರಿ ಬುದ್ಧಿ ಬಿಚ್ಚಿಟ್ಟ ಬೆಳಗಾವಿ ಸೊಸೆ ಕರ್ನಲ್ ಸೋಫಿಯಾ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
ಭಾರತದಲ್ಲಿ ಮುಸಲ್ಮಾನರೂ ಪ್ರಧಾನಿ ಮೋದಿ ಜೊತೆ ನಿಂತಿದ್ದಾರೆ: ಸೂಲಿಬೆಲೆ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
Live: ಪಾಕಿಸ್ತಾನ ಮೇಲಿನ ದಾಳಿ ಬಗ್ಗೆ ವಿದೇಶಾಂಗ ಇಲಾಖೆ ಪತ್ರಿಕಾಗೋಷ್ಠಿ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ಪಾಕ್ ಮೇಲೆ ಆಕ್ರಮಣಕ್ಕೆ ಪ್ರಧಾನಿ ಮೋದಿ 10 ವರ್ಷಗಳಿಂದ ತಯಾರಿ: ಸೂಲಿಬೆಲೆ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ತಮ್ಮ ದೇಶದ ಪ್ರಧಾನಿಯನ್ನು ರಣಹೇಡಿ ಎಂದು ಪಾಕಿಸ್ತಾನದ ಸಂಸದ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಪಾಕಿಸ್ತಾನಕ್ಕೆ ಬುದ್ಧಿ ಕಲಿಸಲು ಇದೊಂದೇ ಮಾರ್ಗ ಇರೋದು: ಮಹಾದೇವಸ್ವಾಮಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಭಾರತ-ಪಾಕಿಸ್ತಾನದ ದಾಳಿ ಕೊನೆಗೊಳಿಸಲು ಮೆಹಬೂಬಾ ಮುಫ್ತಿ ಮನವಿ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ
ಅಮಿತ್ ಶಾ ಬಿಎಸ್​ಎಫ್, ಸಿಅರ್​​ಪಿಎಫ್ ಡಿಜಿಗಳ ಜೊತೆ ನಡೆಸಲಿದ್ದಾರೆ ಸಭೆ