AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Panju Pavagada: ನೀನು ಮೊದಲು ನೆಟ್ಟಗೆ ಇರು; ಪ್ರಶಾಂತ್​ ಸಂಬರಗಿಗೆ ಮಂಜು ಆವಾಜ್​

Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್ ಪದೇಪದೇ ಮಂಜು ಅವರನ್ನು ಟಾರ್ಗೆಟ್​ ಮಾಡುತ್ತಿದ್ದಾರೆ. ಎಷ್ಟು ಸಾಧ್ಯವೋ ಅಷ್ಟು ಜನರನ್ನು​ ಮಂಜು ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ.

Panju Pavagada: ನೀನು ಮೊದಲು ನೆಟ್ಟಗೆ ಇರು; ಪ್ರಶಾಂತ್​ ಸಂಬರಗಿಗೆ ಮಂಜು ಆವಾಜ್​
ಪ್ರಶಾಂತ್​ ಸಂಬರಗಿ- ಮಂಜು ಪಾವಗಡ
ರಾಜೇಶ್ ದುಗ್ಗುಮನೆ
| Edited By: |

Updated on:May 03, 2021 | 9:47 AM

Share

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ಹೇಳುತ್ತಿರುವ ಸುಳ್ಳುಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಒಂದು ಕ್ಷಣ ಒಂದು ರೀತಿ ಇದ್ದರೆ ಮರು ಕ್ಷಣವೇ ಅವರು ಬದಲಾಗುತ್ತಾರೆ. ಅದು ಈಗ ಮನೆಯಲ್ಲಿ ಹೆಚ್ಚಾಗುತ್ತಲೇ ಇದೆ. ಈ ನಡುವೆ ಮಂಜು ಹಾಗೂ ಪ್ರಶಾಂತ್​ ನಡುವೆ ಘನಘೋರ ಜಗಳವೇ ನಡೆದು ಹೋಗಿದೆ.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್ ಪದೇಪದೇ ಮಂಜು ಅವರನ್ನು ಟಾರ್ಗೆಟ್​ ಮಾಡುತ್ತಿದ್ದಾರೆ. ಎಷ್ಟು ಸಾಧ್ಯವೋ ಅಷ್ಟು ಜನರನ್ನು​ ಮಂಜು ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಕೆಲವೊಮ್ಮೆ ಇದು ಯಶಸ್ವಿ ಆದರೆ, ಇನ್ನೂ ಕೆಲವೊಮ್ಮೆ ಇದು ಸಾಧ್ಯವಾಗಿಲ್ಲ. ದಿವ್ಯಾ ಸುರೇಶ್​ ವಿಚಾರಕ್ಕಂತೂ ಸಾಕಷ್ಟು ಬಾರಿ ಮಂಜು ಹಾಗೂ ಪ್ರಶಾಂತ್ ನಡುವೆ ಜಗಳವಾಗಿದೆ.

ಮಂಜು ಅವರು ದಿವ್ಯಾ ಸುರೇಶ್​ ಬಾಡಿಗಾರ್ಡ್​ ಎಂದು ಹೇಳಿದರು. ನೀವು ಒಬ್ಬರಿಗೆ ಹೇಳುವಾಗ ಬೇರೆಯವರ ಹೆಸರು ತೆಗೆದುಕೊಳ್ಳುವುದು ಇಷ್ಟವಾಗುವುದಿಲ್ಲ ಎಂದರು. ಮಂಜು ದಿವ್ಯಾ ಬಾಡಿಗಾರ್ಡ್​ ಎಂಬುದನ್ನು ನಾನು ಎಲ್ಲಿ ನಿಂತು ಬೇಕಾದರೂ ಹೇಳುತ್ತೇನೆ ಎಂದರು.

ಈ ವೇಳೆ ಮಂಜು ಬಂದು ನನ್ನ ಹೆಸರನ್ನು ಏಕೆ ತೆಗೆದುಕೊಳ್ಳುತ್ತೀಯಾ? ಎನ್ನುತ್ತಿದ್ದಂತೆ ಪ್ರಶಾಂತ್ ಪ್ಲೇಟ್​ ತಿರುಗಿಸಿ ಬಿಟ್ಟರು. ನಾನು ನಿನ್ನ ಹೆಸರೇ ತೆಗೆದುಕೊಂಡಿಲ್ಲ ಎಂದು ನಿರಂತರವಾಗಿ ವಾದ ಮಾಡುತ್ತಲೇ ಬಂದರು. ಮಂಜುಗೆ ಕೋಪ ನೆತ್ತಿಗೇರಿತ್ತು. ನೀನು ಮೊದಲು ನೆಟ್ಟಗೆ ಇರು. ಆಮೇಲೆ ಬೇರೆಯವರಿಗೆ ಹೇಳೋಕೆ ಬಾ ಎಂದರು. ಕೊನೆಗೂ ಮನೆಯವರ ಸಮ್ಮುಖದಲ್ಲಿ ಈ ಜಗಳ ತಣ್ಣಗಾಯಿತು.

9ನೇ ವಾರ ಯಾವುದೇ ಎಲಿಮಿನೇಷನ್​ ಇರಲಿಲ್ಲ. ಹೀಗಾಗಿ ಎಲ್ಲಾ ಸ್ಪರ್ಧಿಗಳು ಸೇಫ್​ ಆದರು. ಮುಂದಿನ ವಾರದ ನಾಮಿನೇಷನ್​ ಲಿಸ್ಟ್​ನಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ.,  ಪ್ರಶಾಂತ್ ಸಂಬರಗಿ, ದಿವ್ಯಾ ಸುರೇಶ್ ಹಾಗೂ ಪ್ರಿಯಾಂಕಾ ತಿಮ್ಮೇಶ್ ಇದ್ದಾರೆ. ಇವರಲ್ಲಿ ಒಬ್ಬರು ಮುಂದಿನ ವಾರ ಮನೆಯಿಂದ ಹೊರ ಹೋಗುತ್ತಾರೆ.

ಇದನ್ನೂ ಓದಿ: ಆಪ್ತ ಚಂದ್ರಚೂಡ್​ ವಿರುದ್ಧವೇ ತಿರುಗಿಬಿದ್ದ ಪ್ರಶಾಂತ್​ ಸಂಬರಗಿ; ಬಿಗ್​ ಬಾಸ್​ ಮನೆಯಲ್ಲಿ 36 ಗಂಟೆಗಳ ಉಪವಾಸ

ಇದಿನ್ನೂ ಕೆಟ್ಟದಾಗಿ ಕಾಣಿಸುತ್ತಿದೆ; ಪ್ರಶಾಂತ್​ ಸಂಬರಗಿ ಗುಣಗಳು ಚಕ್ರವರ್ತಿಗೆ ಅಸಹ್ಯ ಮೂಡಿಸುತ್ತಿವೆ

(Manju Pavagada and Prashanth Sambargi conflict became worse in Bigg Boss Kannada)

Published On - 8:37 am, Mon, 3 May 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು