AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Panju Pavagada: ನೀನು ಮೊದಲು ನೆಟ್ಟಗೆ ಇರು; ಪ್ರಶಾಂತ್​ ಸಂಬರಗಿಗೆ ಮಂಜು ಆವಾಜ್​

Bigg Boss Kannada: ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್ ಪದೇಪದೇ ಮಂಜು ಅವರನ್ನು ಟಾರ್ಗೆಟ್​ ಮಾಡುತ್ತಿದ್ದಾರೆ. ಎಷ್ಟು ಸಾಧ್ಯವೋ ಅಷ್ಟು ಜನರನ್ನು​ ಮಂಜು ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ.

Panju Pavagada: ನೀನು ಮೊದಲು ನೆಟ್ಟಗೆ ಇರು; ಪ್ರಶಾಂತ್​ ಸಂಬರಗಿಗೆ ಮಂಜು ಆವಾಜ್​
ಪ್ರಶಾಂತ್​ ಸಂಬರಗಿ- ಮಂಜು ಪಾವಗಡ
ರಾಜೇಶ್ ದುಗ್ಗುಮನೆ
| Edited By: |

Updated on:May 03, 2021 | 9:47 AM

Share

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್​ ಸಂಬರಗಿ ಹೇಳುತ್ತಿರುವ ಸುಳ್ಳುಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಒಂದು ಕ್ಷಣ ಒಂದು ರೀತಿ ಇದ್ದರೆ ಮರು ಕ್ಷಣವೇ ಅವರು ಬದಲಾಗುತ್ತಾರೆ. ಅದು ಈಗ ಮನೆಯಲ್ಲಿ ಹೆಚ್ಚಾಗುತ್ತಲೇ ಇದೆ. ಈ ನಡುವೆ ಮಂಜು ಹಾಗೂ ಪ್ರಶಾಂತ್​ ನಡುವೆ ಘನಘೋರ ಜಗಳವೇ ನಡೆದು ಹೋಗಿದೆ.

ಬಿಗ್​ ಬಾಸ್​ ಮನೆಯಲ್ಲಿ ಪ್ರಶಾಂತ್ ಪದೇಪದೇ ಮಂಜು ಅವರನ್ನು ಟಾರ್ಗೆಟ್​ ಮಾಡುತ್ತಿದ್ದಾರೆ. ಎಷ್ಟು ಸಾಧ್ಯವೋ ಅಷ್ಟು ಜನರನ್ನು​ ಮಂಜು ವಿರುದ್ಧ ಎತ್ತಿ ಕಟ್ಟುತ್ತಿದ್ದಾರೆ. ಕೆಲವೊಮ್ಮೆ ಇದು ಯಶಸ್ವಿ ಆದರೆ, ಇನ್ನೂ ಕೆಲವೊಮ್ಮೆ ಇದು ಸಾಧ್ಯವಾಗಿಲ್ಲ. ದಿವ್ಯಾ ಸುರೇಶ್​ ವಿಚಾರಕ್ಕಂತೂ ಸಾಕಷ್ಟು ಬಾರಿ ಮಂಜು ಹಾಗೂ ಪ್ರಶಾಂತ್ ನಡುವೆ ಜಗಳವಾಗಿದೆ.

ಮಂಜು ಅವರು ದಿವ್ಯಾ ಸುರೇಶ್​ ಬಾಡಿಗಾರ್ಡ್​ ಎಂದು ಹೇಳಿದರು. ನೀವು ಒಬ್ಬರಿಗೆ ಹೇಳುವಾಗ ಬೇರೆಯವರ ಹೆಸರು ತೆಗೆದುಕೊಳ್ಳುವುದು ಇಷ್ಟವಾಗುವುದಿಲ್ಲ ಎಂದರು. ಮಂಜು ದಿವ್ಯಾ ಬಾಡಿಗಾರ್ಡ್​ ಎಂಬುದನ್ನು ನಾನು ಎಲ್ಲಿ ನಿಂತು ಬೇಕಾದರೂ ಹೇಳುತ್ತೇನೆ ಎಂದರು.

ಈ ವೇಳೆ ಮಂಜು ಬಂದು ನನ್ನ ಹೆಸರನ್ನು ಏಕೆ ತೆಗೆದುಕೊಳ್ಳುತ್ತೀಯಾ? ಎನ್ನುತ್ತಿದ್ದಂತೆ ಪ್ರಶಾಂತ್ ಪ್ಲೇಟ್​ ತಿರುಗಿಸಿ ಬಿಟ್ಟರು. ನಾನು ನಿನ್ನ ಹೆಸರೇ ತೆಗೆದುಕೊಂಡಿಲ್ಲ ಎಂದು ನಿರಂತರವಾಗಿ ವಾದ ಮಾಡುತ್ತಲೇ ಬಂದರು. ಮಂಜುಗೆ ಕೋಪ ನೆತ್ತಿಗೇರಿತ್ತು. ನೀನು ಮೊದಲು ನೆಟ್ಟಗೆ ಇರು. ಆಮೇಲೆ ಬೇರೆಯವರಿಗೆ ಹೇಳೋಕೆ ಬಾ ಎಂದರು. ಕೊನೆಗೂ ಮನೆಯವರ ಸಮ್ಮುಖದಲ್ಲಿ ಈ ಜಗಳ ತಣ್ಣಗಾಯಿತು.

9ನೇ ವಾರ ಯಾವುದೇ ಎಲಿಮಿನೇಷನ್​ ಇರಲಿಲ್ಲ. ಹೀಗಾಗಿ ಎಲ್ಲಾ ಸ್ಪರ್ಧಿಗಳು ಸೇಫ್​ ಆದರು. ಮುಂದಿನ ವಾರದ ನಾಮಿನೇಷನ್​ ಲಿಸ್ಟ್​ನಲ್ಲಿ ಮಂಜು ಪಾವಗಡ, ಅರವಿಂದ್ ಕೆ.ಪಿ.,  ಪ್ರಶಾಂತ್ ಸಂಬರಗಿ, ದಿವ್ಯಾ ಸುರೇಶ್ ಹಾಗೂ ಪ್ರಿಯಾಂಕಾ ತಿಮ್ಮೇಶ್ ಇದ್ದಾರೆ. ಇವರಲ್ಲಿ ಒಬ್ಬರು ಮುಂದಿನ ವಾರ ಮನೆಯಿಂದ ಹೊರ ಹೋಗುತ್ತಾರೆ.

ಇದನ್ನೂ ಓದಿ: ಆಪ್ತ ಚಂದ್ರಚೂಡ್​ ವಿರುದ್ಧವೇ ತಿರುಗಿಬಿದ್ದ ಪ್ರಶಾಂತ್​ ಸಂಬರಗಿ; ಬಿಗ್​ ಬಾಸ್​ ಮನೆಯಲ್ಲಿ 36 ಗಂಟೆಗಳ ಉಪವಾಸ

ಇದಿನ್ನೂ ಕೆಟ್ಟದಾಗಿ ಕಾಣಿಸುತ್ತಿದೆ; ಪ್ರಶಾಂತ್​ ಸಂಬರಗಿ ಗುಣಗಳು ಚಕ್ರವರ್ತಿಗೆ ಅಸಹ್ಯ ಮೂಡಿಸುತ್ತಿವೆ

(Manju Pavagada and Prashanth Sambargi conflict became worse in Bigg Boss Kannada)

Published On - 8:37 am, Mon, 3 May 21

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ