AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನ ಮೇಲಿದ್ದ ಗೌರವ ಡಬಲ್​ ಆಗೋಯ್ತು; ವೈಷ್ಣವಿ ಹೊಗಳೋಕೆ ಮಂಜುಗೆ ಪದಗಳು ಸಿಗ್ತಾ ಇಲ್ಲ

ವೈಷ್ಣವಿ ತಾಳ್ಮೆ ನೋಡಿ ಮಂಜು ತುಂಬಾನೇ ಖುಷಿಯಾಗಿದ್ದಾರೆ. ನಿಮ್ಮ ಬಳಿ ಇದು ಸಾಧ್ಯವಾಗುವುದಿಲ್ಲ ಎಂದುಕೊಂಡಿದ್ದೆ. ಆದರೆ, ನೀವು ಆಡಿದ್ದು ನೋಡಿ ತುಂಬಾನೇ ಖುಷಿ ಆಯಿತು ಎಂದು ಹೊಗಳಿದ್ದಾರೆ.

ನಿನ್ನ ಮೇಲಿದ್ದ ಗೌರವ ಡಬಲ್​ ಆಗೋಯ್ತು; ವೈಷ್ಣವಿ ಹೊಗಳೋಕೆ ಮಂಜುಗೆ ಪದಗಳು ಸಿಗ್ತಾ ಇಲ್ಲ
ವೈಷ್ಣವಿ ಗೌಡ
ರಾಜೇಶ್ ದುಗ್ಗುಮನೆ
|

Updated on: Apr 01, 2021 | 11:06 PM

Share

ಬಿಗ್​ ಬಾಸ್​ ಮನೆ ಸೇರಿರುವ ವೈಷ್ಣವಿ ಮೇಲೆ ಮನೆಯವರು ತುಂಬಾನೇ ಗೌರವ ಇಟ್ಟುಕೊಂಡಿದ್ದಾರೆ. ಅವರು ಸೈಲೆಂಟ್​ ಆಗಿರೋದು, ಅವರ ತಾಳ್ಮೆ ಎಲ್ಲರಿಗೂ ಇಷ್ಟವಾಗುತ್ತಿದೆ. ಹೀಗಿರುವಾಗಲೇ ಮಂಜು ಪಾವಗಡಗೆ ವೈಷ್ಣವಿ ಮೇಲೆ ಇರುವ ಗೌರವ ದುಪಟ್ಟು ಆಗಿದೆ. ಇದನ್ನು ಹೇಳೋಕೆ ಅವರಿಗೆ ಹೇಳೋಕೆ ಶಬ್ದವೇ ಸಾಗುತ್ತಿಲ್ಲ. ಇದೆಲ್ಲಾ ಆಗೋಕೆ ಮನೆಯಲ್ಲಿ ನಡೆದ ಒಂದು ಘಟನೆಯೇ ಸಾಕ್ಷಿ. ಮಾರ್ಚ್​ 31ರ ಸಂಚಿಕೆಯಲ್ಲಿ ಬಿಗ್ ಬಾಸ್​ ಟಾಸ್ಕ್​ ಒಂದನ್ನು ನೀಡಿದ್ದರು. ಈ ಟಾಸ್ಕ್​ನ ಅನುಸಾರ ಸ್ವಿಮಿಂಗ್​ ಫೂಲ್​ ಮಧ್ಯೆ ಇರುವ ಕಟ್ಟೆಗಳ ಮೇಲೆ ಎರಡೂ ತಂಡದ ತಲಾ ಒಬ್ಬ ಸದಸ್ಯರು ಕೂರಬೇಕು. ಅಂತೆಯೇ ವೈಷ್ಣವಿ ಹಾಗೂ ದಿವ್ಯಾ ಸುರೇಶ್​ ಇಬ್ಬರೂ ಅಲ್ಲಿ ಕುಳಿತಿದ್ದರು.

ಹಲವು ಗಂಟೆಗಳ ಕಾಲ ವೈಷ್ಣವಿ-ದಿವ್ಯಾ ಸ್ವಿಮಿಂಗ್​ ಫೂಲ್​ ಮಧ್ಯೆ ಇರುವ ಎರಡು ಕಟ್ಟೆಗಳ ಮೇಲೆ ಕುಳಿತಿದ್ದರು. ಎರಡೂ ತಂಡದವರು ಪರಸ್ಪರ ಇವರನ್ನು ಬೀಳಿಸಲು ಪ್ರಯತ್ನ ಮಾಡುತ್ತಲೇಇದ್ದರು. ಕೊನೆಗೂ ಅಶ್ವತ್ಥ್​ ಅವರು ವೈಷ್ಣವಿ ಅವರನ್ನು ದೂಡಿ ಬಿಟ್ಟರು. ನಿಯಮದ ಪ್ರಕಾರ ಹೀಗೆ ಮಾಡುವ ಹಾಗೇ ಇರಲಿಲ್ಲ. ಇದು ಫಾಲ್​ ಎಂದು ಘೋಷಣೆ ಆದ ನಂತರ ವೈಷ್ಣವಿ ವಿನ್​ ಎಂದು ಘೋಷಣೆ ಮಾಡಲಾಯಿತು.

ವೈಷ್ಣವಿ ತಾಳ್ಮೆ ನೋಡಿ ಮಂಜು ತುಂಬಾನೇ ಖುಷಿಯಾಗಿದ್ದಾರೆ. ನಿಮ್ಮ ಬಳಿ ಇದು ಸಾಧ್ಯವಾಗುವುದಿಲ್ಲ ಎಂದುಕೊಂಡಿದ್ದೆ. ಆದರೆ, ನೀವು ಆಡಿದ್ದು ನೋಡಿ ತುಂಬಾನೇ ಖುಷಿ ಆಯಿತು. ನಿನ್ನ ಮೇಲಿದ್ದ ಗೌರವ ಡಬಲ್​ ಆಯ್ತು ಎಂದು ಹೊಗಳಿದ್ದಾರೆ. ನಂತರ ಮಂಜು ಅವರಿಗೆ ಏನು ಹೇಳಬೇಕು ಎನ್ನುವುದು ಗೊತ್ತಾಗಿಲ್ಲ. ಹೀಗಾಗಿ, ವೈಷ್ಣವಿ ಅವರನ್ನು ತಬ್ಬಿಕೊಂಡು ಮಂಜು ಅವರ ಬೆನ್ನು ತಟ್ಟಿದ್ದಾರೆ.

ಇದನ್ನೂ ಓದಿ: ಎಷ್ಟೇ ಹೇಳಿದರೂ ಬಿಗ್​ ಬಾಸ್​ ನಿಯಮ ಉಲ್ಲಂಘನೆ ಮಾಡಿದ ದಿವ್ಯಾ ಉರುಡುಗಗೆ ಯಾವ ಶಿಕ್ಷೆ?

ದಿವ್ಯಾ ಉರುಡುಗ ಸೆಳೆತದಲ್ಲಿ ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶವನ್ನೇ ಮರೆತರಾ ಅರವಿಂದ್?

Follow Us
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಹಾಸನದಲ್ಲಿ ಬೆಚ್ಚಿಬೀಳಿಸಿದ ಸರಣಿ ಹೃದಯಘಾತ ಪ್ರಕರಣಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್‌ನ ಅಪರಾಧ ಚಟುವಟಿಕೆಗಳು
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್‌ನ ಅಪರಾಧ ಚಟುವಟಿಕೆಗಳು