AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನ ಮೇಲಿದ್ದ ಗೌರವ ಡಬಲ್​ ಆಗೋಯ್ತು; ವೈಷ್ಣವಿ ಹೊಗಳೋಕೆ ಮಂಜುಗೆ ಪದಗಳು ಸಿಗ್ತಾ ಇಲ್ಲ

ವೈಷ್ಣವಿ ತಾಳ್ಮೆ ನೋಡಿ ಮಂಜು ತುಂಬಾನೇ ಖುಷಿಯಾಗಿದ್ದಾರೆ. ನಿಮ್ಮ ಬಳಿ ಇದು ಸಾಧ್ಯವಾಗುವುದಿಲ್ಲ ಎಂದುಕೊಂಡಿದ್ದೆ. ಆದರೆ, ನೀವು ಆಡಿದ್ದು ನೋಡಿ ತುಂಬಾನೇ ಖುಷಿ ಆಯಿತು ಎಂದು ಹೊಗಳಿದ್ದಾರೆ.

ನಿನ್ನ ಮೇಲಿದ್ದ ಗೌರವ ಡಬಲ್​ ಆಗೋಯ್ತು; ವೈಷ್ಣವಿ ಹೊಗಳೋಕೆ ಮಂಜುಗೆ ಪದಗಳು ಸಿಗ್ತಾ ಇಲ್ಲ
ವೈಷ್ಣವಿ ಗೌಡ
ರಾಜೇಶ್ ದುಗ್ಗುಮನೆ
|

Updated on: Apr 01, 2021 | 11:06 PM

Share

ಬಿಗ್​ ಬಾಸ್​ ಮನೆ ಸೇರಿರುವ ವೈಷ್ಣವಿ ಮೇಲೆ ಮನೆಯವರು ತುಂಬಾನೇ ಗೌರವ ಇಟ್ಟುಕೊಂಡಿದ್ದಾರೆ. ಅವರು ಸೈಲೆಂಟ್​ ಆಗಿರೋದು, ಅವರ ತಾಳ್ಮೆ ಎಲ್ಲರಿಗೂ ಇಷ್ಟವಾಗುತ್ತಿದೆ. ಹೀಗಿರುವಾಗಲೇ ಮಂಜು ಪಾವಗಡಗೆ ವೈಷ್ಣವಿ ಮೇಲೆ ಇರುವ ಗೌರವ ದುಪಟ್ಟು ಆಗಿದೆ. ಇದನ್ನು ಹೇಳೋಕೆ ಅವರಿಗೆ ಹೇಳೋಕೆ ಶಬ್ದವೇ ಸಾಗುತ್ತಿಲ್ಲ. ಇದೆಲ್ಲಾ ಆಗೋಕೆ ಮನೆಯಲ್ಲಿ ನಡೆದ ಒಂದು ಘಟನೆಯೇ ಸಾಕ್ಷಿ. ಮಾರ್ಚ್​ 31ರ ಸಂಚಿಕೆಯಲ್ಲಿ ಬಿಗ್ ಬಾಸ್​ ಟಾಸ್ಕ್​ ಒಂದನ್ನು ನೀಡಿದ್ದರು. ಈ ಟಾಸ್ಕ್​ನ ಅನುಸಾರ ಸ್ವಿಮಿಂಗ್​ ಫೂಲ್​ ಮಧ್ಯೆ ಇರುವ ಕಟ್ಟೆಗಳ ಮೇಲೆ ಎರಡೂ ತಂಡದ ತಲಾ ಒಬ್ಬ ಸದಸ್ಯರು ಕೂರಬೇಕು. ಅಂತೆಯೇ ವೈಷ್ಣವಿ ಹಾಗೂ ದಿವ್ಯಾ ಸುರೇಶ್​ ಇಬ್ಬರೂ ಅಲ್ಲಿ ಕುಳಿತಿದ್ದರು.

ಹಲವು ಗಂಟೆಗಳ ಕಾಲ ವೈಷ್ಣವಿ-ದಿವ್ಯಾ ಸ್ವಿಮಿಂಗ್​ ಫೂಲ್​ ಮಧ್ಯೆ ಇರುವ ಎರಡು ಕಟ್ಟೆಗಳ ಮೇಲೆ ಕುಳಿತಿದ್ದರು. ಎರಡೂ ತಂಡದವರು ಪರಸ್ಪರ ಇವರನ್ನು ಬೀಳಿಸಲು ಪ್ರಯತ್ನ ಮಾಡುತ್ತಲೇಇದ್ದರು. ಕೊನೆಗೂ ಅಶ್ವತ್ಥ್​ ಅವರು ವೈಷ್ಣವಿ ಅವರನ್ನು ದೂಡಿ ಬಿಟ್ಟರು. ನಿಯಮದ ಪ್ರಕಾರ ಹೀಗೆ ಮಾಡುವ ಹಾಗೇ ಇರಲಿಲ್ಲ. ಇದು ಫಾಲ್​ ಎಂದು ಘೋಷಣೆ ಆದ ನಂತರ ವೈಷ್ಣವಿ ವಿನ್​ ಎಂದು ಘೋಷಣೆ ಮಾಡಲಾಯಿತು.

ವೈಷ್ಣವಿ ತಾಳ್ಮೆ ನೋಡಿ ಮಂಜು ತುಂಬಾನೇ ಖುಷಿಯಾಗಿದ್ದಾರೆ. ನಿಮ್ಮ ಬಳಿ ಇದು ಸಾಧ್ಯವಾಗುವುದಿಲ್ಲ ಎಂದುಕೊಂಡಿದ್ದೆ. ಆದರೆ, ನೀವು ಆಡಿದ್ದು ನೋಡಿ ತುಂಬಾನೇ ಖುಷಿ ಆಯಿತು. ನಿನ್ನ ಮೇಲಿದ್ದ ಗೌರವ ಡಬಲ್​ ಆಯ್ತು ಎಂದು ಹೊಗಳಿದ್ದಾರೆ. ನಂತರ ಮಂಜು ಅವರಿಗೆ ಏನು ಹೇಳಬೇಕು ಎನ್ನುವುದು ಗೊತ್ತಾಗಿಲ್ಲ. ಹೀಗಾಗಿ, ವೈಷ್ಣವಿ ಅವರನ್ನು ತಬ್ಬಿಕೊಂಡು ಮಂಜು ಅವರ ಬೆನ್ನು ತಟ್ಟಿದ್ದಾರೆ.

ಇದನ್ನೂ ಓದಿ: ಎಷ್ಟೇ ಹೇಳಿದರೂ ಬಿಗ್​ ಬಾಸ್​ ನಿಯಮ ಉಲ್ಲಂಘನೆ ಮಾಡಿದ ದಿವ್ಯಾ ಉರುಡುಗಗೆ ಯಾವ ಶಿಕ್ಷೆ?

ದಿವ್ಯಾ ಉರುಡುಗ ಸೆಳೆತದಲ್ಲಿ ಬಿಗ್​ ಬಾಸ್​ ಮನೆಗೆ ಬಂದ ಉದ್ದೇಶವನ್ನೇ ಮರೆತರಾ ಅರವಿಂದ್?

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!