Bigg Boss Kannada 8: ಬಿಗ್​ ಬಾಸ್​ ಮನೆಯಲ್ಲಿ ಕೊನೆಗೂ ಮಂಜು ಕನಸು ನನಸಾಯಿತು..

ಬಿಗ್​ ಬಾಸ್​ ಮನಯೆಲ್ಲಿ ಎರಡು ಟೀಂಗಳನ್ನು ಮಾಡಲಾಗಿತ್ತು. ಎರಡೂ ಟೀಂಗಳಿಗೆ ಒಂದಷ್ಟು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್​ಅನ್ನು ಗೆದ್ದವರು ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆಯಾಗುತ್ತಾರೆ.

Bigg Boss Kannada 8: ಬಿಗ್​ ಬಾಸ್​ ಮನೆಯಲ್ಲಿ ಕೊನೆಗೂ ಮಂಜು ಕನಸು ನನಸಾಯಿತು..
ಮಂಜು ಪಾವಗಡ
Follow us
|

Updated on:Apr 02, 2021 | 10:35 PM

ಬಿಗ್​ ಬಾಸ್​ ಮನೆಯಲ್ಲಿ ಮಂಜು ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಕಳೆದ ಬಾರಿ ಬಿಗ್​ ಬಾಸ್​ ಮನೆಯಲ್ಲಿ ಎಲ್ಲರೂ ನಾಮಿನೇಟ್​ ಆಗಿದ್ದಾಗ ಮೊದಲು ಸೇವ್​ ಆಗಿದ್ದು ಮಂಜು. ಅಂದರೆ, ವೀಕ್ಷಕರು ಅತಿ ಹೆಚ್ಚು ಮತ ಹಾಕಿದ್ದು ಅವರಿಗೇ. ಈಗ ಬಿಗ್​ ಬಾಸ್​ ಮನೆಯ ಕ್ಯಾಪ್ಟನ್​ ಆಗಬೇಕು ಎಂದು ಕನಸು ಕಂಡಿದ್ದ ಮಂಜುಗೆ ಕೊನೆಗೂ ಅದೃಷ್ಟ ಕೈ ಹಿಡಿದಿದೆ. ಅವರು ಐದನೇ ವಾರ ಬಿಗ್​ ಬಾಸ್​ ಮನೆಯ ಕ್ಯಾಪ್ಟನ್​ ಆಗಿದ್ದಾರೆ. ಬಿಗ್​ ಬಾಸ್​ ಮನೆಯಲ್ಲಿ ಎರಡು ಟೀಂಗಳನ್ನು ಮಾಡಲಾಗಿತ್ತು. ಎರಡೂ ಟೀಂಗಳಿಗೆ ಒಂದಷ್ಟು ಟಾಸ್ಕ್ ನೀಡಲಾಗಿತ್ತು. ಈ ಟಾಸ್ಕ್​ಅನ್ನು ಗೆದ್ದವರು ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆಯಾಗುತ್ತಾರೆ. ಅಂತೆಯೇ ಜಾತ್ರೆ ಗ್ಯಾಂಗ್​ ಕ್ಯಾಪ್ಟನ್ಸಿ ಟಾಸ್ಕ್​ಗೆ ಆಯ್ಕೆಯಾಗಿತ್ತು.

ಒಂದು ಉದ್ದನೆಯ ರಾಡ್​ ರೀತಿಯ ವಸ್ತು ಇರುತ್ತದೆ. ಅದಕ್ಕೆ ಪಕ್ಕದಲ್ಲಿ ಒಂದಷ್ಟು ಪ್ಲೇಟ್​ ಹಾಗೂ ಕಪ್​ಗಳನ್ನು ಇಡಲಾಗಿತ್ತು. ಮೊದಲು ಪ್ಲೇಟ್​ ಇಟ್ಟು ಅದರ ಮೇಲೆ ಕಪ್​ ಇಡಬೇಕು. ಹೀಗೆ, ಮಾಡುವ ಟಾಸ್ಕ್​ನಲ್ಲಿ ಪ್ರಶಾಂತ್​ ಹಾಗೂ ಮಂಜು ಕೊನೆಯದಾಗಿ ಉಳಿದುಕೊಂಡಿದ್ದರು. ಆದರೆ, ಕೊನೆಯದಾಗಿ ಗೆದ್ದಿದ್ದು ಮಂಜು. ಈ ಮೂಲಕ ಐದನೇ ವಾರ ಅವರು ಬಿಗ್​ ಬಾಸ್​ಮನೆಯಲ್ಲಿ ಕ್ಯಾಪ್ಟನ್​ ಆಗಿದ್ದಾರೆ.

ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್​ ಆಗುತ್ತಿದ್ದಂತೆ ಮಂಜು ತಂದೆಯ ಧ್ವನಿ ಬಂದಿದೆ. ಬಿಗ್​ ಬಾಸ್​ನಲ್ಲಿ ಕ್ಯಾಪ್ಟನ್​ ಆಗಿರುವುದರಿಂದ ಸಂತೋಷಪಟ್ಟೆ. ನನ್ನ ಬೆಂಬಲ ಯಾವಾಗೂ ಇರಲಿದೆ ಎಂದರು. ಬಿಗ್​ ಬಾಸ್​ ಮನೆಯಲ್ಲಿ ಪಾಲಕರ ಧ್ವನಿ ಬಂದ ಕೂಡಲೇ ಎಲ್ಲರೂ ಎಗ್ಸೈಟ್​ ಆಗುತ್ತಾರೆ, ಭಾವುಕರಾಗುತ್ತಾರೆ. ಆದರೆ, ಮಂಜು ಅಷ್ಟು ಭಾವುಕರಾಗೇ ಇಲ್ಲ. ನಾನು ಅಮ್ಮನ ಹತ್ತಿರ ನೇರವಾಗಿ ಮಾತನಾಡಿದ್ದೇನೆ. ಆದರೆ, ತಂದೆ ಜತೆ ಮಾತನಾಡಿಲ್ಲ. ಅವರ ಹೆಗಲ ಮೇಲೆ ಇನ್ನೂ ನೇರವಾಗಿ ಕೈ ಹಾಕಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಬಿಗ್​ ಬಾಸ್​ ಮನೆಯಲ್ಲಿ ಕಿತ್ತಾಟ; ರಾಜೀವ್​ ಕೊಟ್ಟ ಏಟಿಗೆ ಮಂಜು ಹಲ್ಲೇ ಉದುರೋಯ್ತು!

ಒಮ್ಮೊಮ್ಮೆ ಹುಟ್ಟಲೇ ಬಾರದಿತ್ತು ಅನಿಸುತ್ತೆ; ವೈಷ್ಣವಿಯಲ್ಲಿ ತಾಯಿಯನ್ನು ಕಂಡು ಅತ್ತ ರಘು!

Published On - 10:16 pm, Fri, 2 April 21

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ