AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಸುರೇಶ್​ ಟ್ರ್ಯಾಪ್​ನಲ್ಲಿ ಸರಿಯಾಗಿ ಸಿಕ್ಕಿಬಿದ್ದ ಮಂಜು; ಹೊರ ಬರೋಕೆ ಮಾತ್ರ ತಿಳಿಯುತ್ತಿಲ್ಲ

ಮಂಜು ಹಾಗೂ ದಿವ್ಯಾ ಪರಸ್ಪರ ಒಬ್ಬರನ್ನೊಬ್ಬರು ಇಷ್ಟಪಡುತ್ತಿದ್ದಾರೆ. ಆದರೆ, ಅವರ ನಡುವೆ ಗೆಳೆತನ ಇದೆಯೋ ಅಥವಾ ಪ್ರೀತಿಯೋ ಎನ್ನುವ ವಿಚಾರ ಅವರಿಗೂ ಇನ್ನೂ ಸ್ಪಷ್ಟವಾದಂತೆ ಕಾಣುತ್ತಿಲ್ಲ.

ದಿವ್ಯಾ ಸುರೇಶ್​ ಟ್ರ್ಯಾಪ್​ನಲ್ಲಿ ಸರಿಯಾಗಿ ಸಿಕ್ಕಿಬಿದ್ದ ಮಂಜು; ಹೊರ ಬರೋಕೆ ಮಾತ್ರ ತಿಳಿಯುತ್ತಿಲ್ಲ
ಮಂಜು ಪಾವಗಡ - ದಿವ್ಯಾ ಸುರೇಶ್​
ರಾಜೇಶ್ ದುಗ್ಗುಮನೆ
| Edited By: |

Updated on: Apr 22, 2021 | 7:10 AM

Share

ಬಿಗ್​ ಬಾಸ್ ಮನೆಗೆ ಸೇರಿದ ದಿನದಿಂದ ಮಂಜು ಪಾವಗಡ ಹಾಗೂ ದಿವ್ಯಾ ಸುರೇಶ್​ ತುಂಬಾನೇ ಆಪ್ತವಾಗಿದ್ದಾರೆ. ಇಬ್ಬರೂ ಪರಸ್ಪರ ಫ್ಲರ್ಟ್​ ಮಾಡಿಕೊಳ್ಳುತ್ತಾ ಹಾಯಾಗಿ ಮನೆಯಲ್ಲಿ ದಿನ ಕಳೆಯುತ್ತಿದ್ದರು. ಆದರೆ, ಇತ್ತೀಚೆಗೆ ಇಬ್ಬರ ನಡುವೆ ಸಾಕಷ್ಟು ಮನಸ್ತಾಪಗಳು ಹುಟ್ಟಿಕೊಳ್ಳುತ್ತಿವೆ. ಅಷ್ಟೇ ಅಲ್ಲ, ದಿವ್ಯಾಗೆ ಸಹಾಯ ಮಾಡೋಕೆ ಹೋಗಿ ಮಂಜು ಸಂಕಷ್ಟ ಎದುರಿಸಿದ್ದಾರೆ. ದಿವ್ಯಾ ಸುರೇಶ್​ ಹಾಕಿರೋ ಟ್ರ್ಯಾಪ್​ನಲ್ಲಿ ಸಿಲುಕಿರುವ ವಿಚಾರ ಮಂಜುಗೆ ಸ್ಪಷ್ಟವಾಗುತ್ತಿದೆ. ಆದರೆ, ಅದರಿಂದ ಹೊರ ಬರೋದು ಹೇಗೆ ಎಂಬುದು ಮಾತ್ರ ತಿಳಿಯುತ್ತಿಲ್ಲ.

ಮಂಜು ಹಾಗೂ ದಿವ್ಯಾ ಪರಸ್ಪರ ಒಬ್ಬರನ್ನೊಬ್ಬರು ಇಷ್ಟಪಡುತ್ತಿದ್ದಾರೆ. ಆದರೆ, ಅವರ ನಡುವೆ ಇರುವುದು ಗೆಳೆತನವೋ ಅಥವಾ ಪ್ರೀತಿಯೋ ಎನ್ನುವ ವಿಚಾರ ಅವರಿಗೂ ಇನ್ನೂ ಸ್ಪಷ್ಟವಾದಂತೆ ಕಾಣುತ್ತಿಲ್ಲ. ಪ್ರತೀ ವಿಚಾರದಲ್ಲೂ ದಿವ್ಯಾ ಅವರನ್ನು ಮಂಜು ವಹಿಸಿಕೊಂಡು ಬರುತ್ತಿದ್ದಾರೆ. ಇದು ಈಗ ಮಂಜುಗೆ ಕಂಟಕವಾಗಿದೆ.

ಇತ್ತೀಚೆಗೆ ಬಿಗ್​ ಬಾಸ್​ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್​ ಒಂದನ್ನು ನೀಡಲಾಗಿತ್ತು. ಈ ಟಾಸ್ಕ್​ನಲ್ಲಿ ದಿವ್ಯಾ ಸುರೇಶ್​ ಮೋಸ ಮಾಡಿದ್ದರು. ಇದಕ್ಕೂ ಮೊದಲು ಮಂಜು ಅವರ ಸಲಹೆ ಕೂಡ ಪಡೆದುಕೊಂಡಿದ್ದರು. ಈ ವಿಚಾರದಲ್ಲಿ ಮನೆಯವರು ಬೇಸರಗೊಂಡಿದ್ದಾರೆ. ಹೀಗಾಗಿ, ಯಾರೊಬ್ಬರೂ ಮಂಜು ಹಾಗೂ ದಿವ್ಯಾ ಬಳಿ ಸರಿಯಾಗಿ ಮಾತನಾಡುತ್ತಿಲ್ಲ.

ಇದು ಮಂಜುಗೆ ತೀವ್ರ ಬೇಸರ ತರಿಸಿದೆ. ದಿವ್ಯಾ ಈ ವಿಚಾರಕ್ಕೆ ಪದೇಪದೇ ಬೇಸರಮಾಡಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ದಿವ್ಯಾ ಹಾಗೂ ಮಂಜು ಈ ವಿಚಾರದ ಬಗ್ಗೆ ಮಾತನಾಡಿದ್ದಾರೆ. ನೀನು ಏಕೆ ಪದೇ ಪದೇ ಬೇಸರ ಮಾಡಿಕೊಳ್ಳುತ್ತೀಯಾ? ನೀನು ಬೇಸರಗೊಂಡರೆ ನಾನೂ ಬೇಸರಕ್ಕೆ ತುತ್ತಾಗುತ್ತೇನೆ. ನನಗೆ ಇತ್ತೀಚೆಗೆ ಏನು ಮಾಡುತ್ತಿದ್ದೇನೆ ಎಂಬುದೇ ತಿಳಿಯುತ್ತಿಲ್ಲ ಎಂದಿದ್ದಾರೆ. ಈ ಮೂಲಕ ದಿವ್ಯಾ ಅವರನ್ನು ಸಮಾಧಾನ ಮಾಡುವ ಭರದಲ್ಲಿ ಅವರ ನಿಜವಾದ ಪರ್ಫಾರ್ಮೆನ್ಸ್​ ಮಿಸ್​ ಆಗುತ್ತಿದೆ. ಇದು ಅವರ ಗಮನಕ್ಕೂ ಬಂದಿದೆ. ದಿವ್ಯಾ ಹಾಕಿರುವ ಟ್ರ್ಯಾಪ್​ನಿಂದ ಹೊರಗೆ ಬರೋದೋ ಹೇಗೆ ಎಂಬುದು ಮಾತ್ರ ಅವರಿಗೆ ತಿಳಿಯುತ್ತಿಲ್ಲ.

ಇದನ್ನೂ ಓದಿ: Bigg Boss Kannada: ದಿವ್ಯಾಗಾಗಿ ಕರುನಾಡ ಜನತೆಯ ನಂಬಿಕೆ ಕಳೆದುಕೊಂಡ ಮಂಜು; ಈಗ ಕ್ಷಮೆ ಕೇಳಿ ಏನು ಪ್ರಯೋಜನ?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್