AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss Kannada: ದಿವ್ಯಾ ಸುರೇಶ್​ ಜತೆ ಅಂತರ ಕಾಯ್ದುಕೊಳ್ಳುವ ಸೂಚನೆ ನೀಡಿದ ಮಂಜು ಪಾವಗಡ

ಕೊನೆಯ ದಿನಗಳಲ್ಲಿ ದಿವ್ಯಾ ಸುರೇಶ್​ ಹಾಗೂ ಮಂಜು ತುಂಬಾನೇ ಕ್ಲೋಸ್​ ಆಗಿದ್ದರು. ದಿವ್ಯಾ ನಡೆದುಕೊಳ್ಳುತ್ತಿದ್ದ ರೀತಿ ಮಂಜುಗೆ ಇಷ್ಟವಾಗುತ್ತಿರಲಿಲ್ಲ. ಅಲ್ಲದೆ, ದಿವ್ಯಾ ಅವರನ್ನು ಸಂಭಾಳಿಸುವುದರಲ್ಲೇ ಅವರ ಟೈಮ್​ ಕಳೆಯಿತು. ಇದು ಮಂಜೂಗೂ ಅರಿವಾಗಿದೆ.

Bigg Boss Kannada: ದಿವ್ಯಾ ಸುರೇಶ್​ ಜತೆ ಅಂತರ ಕಾಯ್ದುಕೊಳ್ಳುವ ಸೂಚನೆ ನೀಡಿದ ಮಂಜು ಪಾವಗಡ
ದಿವ್ಯಾ ಸುರೇಶ್​ - ಮಂಜು ಪಾವಗಡ
ರಾಜೇಶ್ ದುಗ್ಗುಮನೆ
| Edited By: |

Updated on: Jun 24, 2021 | 7:37 AM

Share

‘ಕನ್ನಡ ಬಿಗ್​ ಬಾಸ್ ಸೀಸನ್​ 8’ ಮೊದಲ ಇನ್ನಿಂಗ್ಸ್​ನಲ್ಲಿ ದಿವ್ಯಾ ಸುರೇಶ್​ ಜತೆ ಸೇರಿಕೊಂಡು ಮಂಜು ಪಾವಗಡ ತಮ್ಮತನವನ್ನು ಕಳೆದುಕೊಂಡರು ಎಂಬ ಮಾತು ಕೇಳಿಬಂದಿತ್ತು. ಅವರ ಹಿಂದೆ ಸುತ್ತಾಡುತ್ತಾ ಮನರಂಜನೆ ನೀಡುವುದನ್ನೇ ನಿಲ್ಲಿಸಿದ್ದರು ಎಂದು ವೀಕ್ಷಕರು ಅಭಿಪ್ರಾಯಪಟ್ಟಿದ್ದರು. ಆದರೆ, ಈ ಬಾರಿ ಅಂಥ ತಪ್ಪು ಮಾಡುವುದಿಲ್ಲ ಎಂದು ಮಂಜು ಪಾವಗಡ ಹೇಳಿಕೊಂಡಿದ್ದಾರೆ.

‘ಯಾರ್ ಜೊತೆ ಹೆಂಗಿರಬೇಕು ಅನ್ನೋದು ಅರ್ಥ ಆಗಿದೆ. ನಮ್ಮ ಬುದ್ದಿಯೂ ಮಂಕಾಗುತ್ತೆ. ಈಗ ಬಹಳ ಅರ್ಥ ಆಗಿದೆ. ಯಾಕೆ ಎಂಟರ್​ಟೆನ್​ಮೆಂಟ್​ ಮಾಡಿಲ್ಲ ಎಂದು ಕೇಳಿದ್ರು. ಆಗ ನನಗೆ ರಿಯಲೈಸ್​ ಆಯ್ತು. ಕಳೆದ ಬಾರಿ ಮಾಡಿದ ತಪ್ಪನ್ನು ಈ ಬಾರಿ ಮಾಡಲ್ಲ’ ಎಂದರು ಮಂಜು.

ಕೊನೆಯ ದಿನಗಳಲ್ಲಿ ದಿವ್ಯಾ ಸುರೇಶ್​ ಹಾಗೂ ಮಂಜು ತುಂಬಾನೇ ಕ್ಲೋಸ್​ ಆಗಿದ್ದರು. ದಿವ್ಯಾ ನಡೆದುಕೊಳ್ಳುತ್ತಿದ್ದ ರೀತಿ ಮಂಜುಗೆ ಇಷ್ಟವಾಗುತ್ತಿರಲಿಲ್ಲ. ಅಲ್ಲದೆ, ದಿವ್ಯಾ ಅವರನ್ನು ಸಂಭಾಳಿಸುವುದರಲ್ಲೇ ಅವರ ಟೈಮ್​ ಕಳೆಯಿತು. ಇದು ಮಂಜೂಗೂ ಅರಿವಾಗಿದೆ. ಈ ಬಗ್ಗೆಯೂ ಮಾತನಾಡಿದ ಮಂಜು, ‘ಅನೇಕರು ಕರೆ ಮಾಡಿ ಯಾಕೆ ದಿವ್ಯಾ ಹಿಂದೆ ಸುತ್ತುತ್ತಿದ್ದೆ ಎಂದು ನೇರವಾಗಿ ಪ್ರಶ್ನೆ ಮಾಡಿದರು. ಈಗ ನನಗೆಲ್ಲವೂ ಅವರಿವಾಗಿದೆ’ ಎಂದು ಹೇಳಿದರು.

ಬಿಗ್​ ಬಾಸ್​ ಮನೆಯ ಜರ್ನಿಯಲ್ಲಿ ಬೈಕ್ ರೈಡ್​ ಸಿಂಗಲ್​ ರೈಡ್​ ಇರುತ್ತೋ ಅಥವಾ ಡಬಲ್​ ರೈಡ್​ ಇರುತ್ತದೆಯೋ ಎಂದು ಸುದೀಪ್ ನೇರವಾಗಿ ಪ್ರಶ್ನೆ ಮಾಡಿದರು. ಆಗ, ಮಂಜು, ನಾನು ಸಿಂಗಲ್​ ರೈಡ್​ ಹೋಗುತ್ತೇನೆ ಎಂದು ಹೇಳುವ ಮೂಲಕ ದಿವ್ಯಾ ಅವರಿಂದ ಅಂತರ ಕಾಯ್ದುಕೊಳ್ಳುವ ಸೂಚನೆ ನೀಡಿದರು.

ಬಿಗ್​ಬಾಸ್ ಸೀಸನ್​ 8 ಅರ್ಧಕ್ಕೆ ನಿಲ್ಲುವಾಗ ಮನೆಯೊಳಗೆ ಅರವಿಂದ್ ಕೆ.ಪಿ, ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ, ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಉರುಡುಗ ಸೇರಿ 12 ಸ್ಪರ್ಧಿಗಳು ಇದ್ದರು. ಈಗ ಈ ಎಲ್ಲಾ ಸ್ಪರ್ಧಿಗಳು ಬುಧವಾರ (ಜೂನ್​ 23) ಮರಳಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದಿದ್ದಾರೆ.

ಇದನ್ನೂ ಓದಿ:

Divya Uruduga: ಕೊವಿಡ್​ನಿಂದ ಕುಟುಂಬದವರನ್ನು ಕಳೆದುಕೊಂಡಿದ್ದಾರೆ ದಿವ್ಯಾ ಉರುಡುಗ; ಬಿಗ್​ ಬಾಸ್​ ಮನೆಯಲ್ಲಿ ಭಾವುಕ ನುಡಿ

Bigg Boss Kannada: ಹೊಸ ಬದಲಾವಣೆಯೊಂದಿಗೆ ಬಿಗ್​ ಬಾಸ್​ ಮನೆ ಸೇರಿದ ರಘು ಗೌಡ

ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಬಿಗ್​​ಬಾಸ್ ಬಳಿಕ ರಕ್ಷಿತಾ ಶೆಟ್ಟಿಯ ಮುಂದಿನ ಯೋಜನೆಗಳೇನು?
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಶಾಲಾ ಬಾಲಕಿಯನ್ನು ಹಿಂಬಾಲಿಸಿ ಮನೆ ಬಾಗಿಲಿಗೆ ಬಂದ ಆಗಂತುಕ!
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಗಿಲ್ಲಿ ಬಗ್ಗೆ ಜನರಿಗೆ ಇರುವ ಕ್ರೇಜ್ ನೋಡಿ ಫಸ್ಟ್ ರಿಯಾಕ್ಷನ್ ಕೊಟ್ಟ ಕಾವ್ಯಾ
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ಅಧಿಕಾರ ಬಿಟ್ಟಕೊಡಿ ಎಂದು ಕೇಳೋದು ಕಷ್ಟ: ಸಿಎಂಗೆ ಟಾಂಗ್ ಕೊಟ್ರಾ ಡಿಕೆಸು!
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ನಿತಿನ್ ನಬಿನ್ ನನ್ನ ಬಾಸ್, ನಾನು ಕೇವಲ ಪಕ್ಷದ ಕಾರ್ಯಕರ್ತ: ಪ್ರಧಾನಿ ಮೋದಿ
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಲಕ್ಕುಂಡಿ: ಉತ್ಖನನ ವೇಳೆ ಮನೆಯೊಂದರಲ್ಲಿ ಪುರಾತನ ದೇವಸ್ಥಾನ ಪತ್ತೆ!
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ
ಶ್ರೀಕೃಷ್ಣಮಠದಲ್ಲಿ ವಸ್ತ್ರಸಂಹಿತೆ ಜಾರಿ: ಇಲ್ಲಿದೆ ಭಕ್ತರಿಗೆ ಕೆಲ ಸೂಚನೆ