ಬಿಗ್​ ಬಾಸ್​ ಮನೆಯಿಂದ ಹೊರಗಿದ್ದಾಗ ಮಂಜು ಪಾವಗಡಗೆ ಬಂದಿತ್ತು ಒಂದು ವಿಚಿತ್ರ ಕರೆ

ಮೊದಲ ಇನ್ನಿಂಗ್ಸ್​ ಮುಗಿದ ನಂತರ ಮನೆಗೆ ಹೋದಾಗ ಕೆಲವರು ಮಂಜುಗೆ ಕರೆಮಾಡಿ ಮಾತನಾಡಿದ್ದಾರೆ. ಸಾಕಷ್ಟು ಜನರು ಕರೆ ಮಾಡಿ ಹಲವು ವಿಚಾರಗಳನ್ನು ಚರ್ಚೆ ಮಾಡಿದ್ದರು.

ಬಿಗ್​ ಬಾಸ್​ ಮನೆಯಿಂದ ಹೊರಗಿದ್ದಾಗ ಮಂಜು ಪಾವಗಡಗೆ ಬಂದಿತ್ತು ಒಂದು ವಿಚಿತ್ರ ಕರೆ
ಈಗ ಬಿಗ್​ ಬಾಸ್​ ಗೆದ್ದ ನಂತರದಲ್ಲಿ ಮಂಜು ಅವರು ಶಿವರಾಜ್​ಕುಮಾರ್​ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಈ ಬಗ್ಗೆ ಮಾತನಾಡಿರುವ ಶಿವರಾಜ್​ಕುಮಾರ್​ ‘ಮಂಜು ಭೇಟಿ ಮಾಡಿದ್ದು ಹಾಗೂ ಅವರು ಗೆಲುವು ಖುಷಿ ಕೊಟ್ಟಿದೆ’ ಎಂದಿದ್ದಾರೆ.
Follow us
| Updated By: ಮದನ್​ ಕುಮಾರ್​

Updated on: Jun 25, 2021 | 7:40 AM

ಕನ್ನಡ ಬಿಗ್​ ಬಾಸ್​ ಮನೆಯ ಮೊದಲ ಇನ್ನಿಂಗ್ಸ್​ನಲ್ಲಿ ಮಂಜು ಪಾವಗಡ ಸಾಕಷ್ಟು ಎಂಟರ್​ಟೇನ್​ಮೆಂಟ್​ ನೀಡಿದ್ದರು. ಆದರೆ, ಕೊನೆಯಲ್ಲಿ ಅವರು ಡಲ್​ ಆಗಿದ್ದರು. ಈ ಬಗ್ಗೆ ವೀಕ್ಷಕರು ಸಾಕಷ್ಟು ಬೇಸರ ಹೊರ ಹಾಕಿದ್ದರು. ಅವರು ಮನೆಗೆ ಹೋದ ನಂತರ ಸಾಕಷ್ಟು ಕರೆ ಬಂದಿತ್ತಂತೆ. ಅದರಲ್ಲಿ ಬಂದ ಒಂದು ವಿಚಿತ್ರ ಕರೆ ಬಗ್ಗೆ ಮಂಜು ಈಗ ಹೇಳಿಕೊಂಡಿದ್ದಾರೆ.

‘ಕನ್ನಡ ಬಿಗ್​ ಬಾಸ್ ಸೀಸನ್​ 8’ ಮೊದಲ ಇನ್ನಿಂಗ್ಸ್​ನಲ್ಲಿ ದಿವ್ಯಾ ಸುರೇಶ್​ ಜತೆ ಸೇರಿಕೊಂಡು ಮಂಜು ಪಾವಗಡ ತಮ್ಮತನವನ್ನು ಕಳೆದುಕೊಂಡರು ಎಂಬ ಮಾತು ಕೇಳಿಬಂದಿತ್ತು. ಅವರ ಹಿಂದೆ ಸುತ್ತಾಡುತ್ತಾ ಮನರಂಜನೆ ನೀಡುವುದನ್ನೇ ನಿಲ್ಲಿಸಿದ್ದರು ಎಂದು ವೀಕ್ಷಕರು ಅಭಿಪ್ರಾಯಪಟ್ಟಿದ್ದರು. ಮೊದಲ ಇನ್ನಿಂಗ್ಸ್​ ಮುಗಿದ ನಂತರ ಮನೆಗೆ ಹೋದಾಗ ಕೆಲವರು ಈ ಬಗ್ಗೆ ಮಂಜುಗೆ ಹೇಳಿದ್ದಾರೆ. ಸಾಕಷ್ಟು ಜನರು ಕರೆ ಮಾಡಿ ಹಲವು ವಿಚಾರಗಳನ್ನು ಚರ್ಚೆ ಮಾಡಿದ್ದರು.

ಅಂತೆಯೇ ಒಂದು ದಿನ ಮಂಜುಗೆ ಅನಾಮೇಧಯ ವ್ಯಕ್ತಿಯಿಂದ ಕರೆ ಬಂದಿತ್ತು. ಆ  ವ್ಯಕ್ತಿ 30-35 ಬಾರಿ ಕರೆ ಮಾಡಿದ್ದರು. ಆದರೆ, ಮಂಜು ಕಾಲ್​ ಎತ್ತಿರಲಿಲ್ಲ. ಯಾವುದೋ ಫ್ಯಾನ್​ ವೂಟ್​ನಲ್ಲಿ ಬಿಗ್​ ಬಾಸ್​ ಸಾಕಷ್ಟು ಬಾರಿ ನೋಡಿದ್ದಾನೆ. ಈಗ ಕರೆ ಮಾಡಿ ಆ ಬಗ್ಗೆ ಕೇಳುತ್ತಾನೆ ಎಂದು ಮಂಜು ಭಾವಿಸಿದ್ದರು.

ಕೊನೆಗೆ ಕರೆ ಸ್ವೀಕರಿಸಿದೆ. ಕಾಲ್​ ಮಾಡಿದ ವ್ಯಕ್ತಿ, ‘ನೀವು ಮಂಜು ಪಾವಗಡ ಅವರ ಎಂದು ಕೇಳಿದರು. ನಾನು ಹೌದು ಎಂದೆ. ‘ಚೆನ್ನಾಗಿದ್ದೀರಾ? ನೀವು ಚೆನ್ನಾಗಿ ಆ್ಯಕ್ಟ್​ ಮಾಡ್ತೀರ.  ಆದರೆ, ಎರಡೂವರೆ ತಿಂಗಳಿಂದ ಮಜಾ ಭಾರತದಲ್ಲಿ ಕಾಣುತ್ತಿಲ್ಲ. ಎಲ್ಲೋದ್ರಿ ಎಂದು ಕೇಳಿದ್ರು. ನನಗೆ ಏನು ಹೇಳಬೇಕು ಎಂಬುದೇ ಗೊತ್ತಾಗಿಲ್ಲ’ ಎಂದರು. ಈ ವಿಚಾರ ಕೇಳಿ ಮನೆ ಮಂದಿಯೆಲ್ಲ ಬಿದ್ದು ಬಿದ್ದು ನಕ್ಕರು.

ಬಿಗ್​ಬಾಸ್ ಸೀಸನ್​ 8 ಅರ್ಧಕ್ಕೆ ನಿಲ್ಲುವಾಗ ಮನೆಯೊಳಗೆ ಅರವಿಂದ್ ಕೆ.ಪಿ, ಮಂಜು ಪಾವಗಡ, ಶಮಂತ್ ಬ್ರೋ ಗೌಡ, ಚಕ್ರವರ್ತಿ ಚಂದ್ರಚೂಡ್, ರಘು ಗೌಡ, ಶುಭಾ ಪೂಂಜಾ, ವೈಷ್ಣವಿ ಗೌಡ, ದಿವ್ಯಾ ಸುರೇಶ್, ಪ್ರಿಯಾಂಕಾ ತಿಮ್ಮೇಶ್, ನಿಧಿ ಸುಬ್ಬಯ್ಯ, ಪ್ರಶಾಂತ್​ ಸಂಬರಗಿ ಹಾಗೂ ದಿವ್ಯಾ ಉರುಡುಗ ಸೇರಿ 12 ಸ್ಪರ್ಧಿಗಳು ಇದ್ದರು. ಈಗ ಈ ಎಲ್ಲಾ ಸ್ಪರ್ಧಿಗಳು ಬುಧವಾರ (ಜೂನ್​ 23) ಮರಳಿ ಬಿಗ್​ ಬಾಸ್​ ಮನೆಗೆ ಎಂಟ್ರಿ ಪಡೆದಿದ್ದಾರೆ.

ಇದನ್ನೂ ಓದಿ: Bigg Boss Kannada: ಬಿಗ್​ ಬಾಸ್​ ಮತ್ತೆ ಶುರುವಾಗಲು ಕಾರಣವಾದ ಪ್ರಮುಖ ವ್ಯಕ್ತಿ ಯಾರು? ಆ ಸ್ಪರ್ಧಿಯ ಮೇಲಿದೆ ಗುಮಾನಿ

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ